Kerala: ಶಬರಿಮಲೆ ಯಾತ್ರಾರ್ಥಿಗಳಿಗೆ ಸೂಕ್ತ ಸೌಲಭ್ಯ ಕಲ್ಪಿಸಿಕೊಡಿ


Team Udayavani, Dec 13, 2023, 12:42 AM IST

shabari mala

ದೇಶದ ಇತಿಹಾಸ ಪ್ರಸಿದ್ಧ ಯಾತ್ರಾಸ್ಥಳವಾದ ಕೇರಳದ ಶಬರಿಮಲೆಯಲ್ಲಿ ಈಗಾಗಲೇ ಪ್ರಸಕ್ತ ಸಾಲಿನ ಯಾತ್ರಾ ಋತು ಆರಂಭಗೊಂಡಿದ್ದು ಯಾತ್ರಿಗಳಿಗೆ ಅಗತ್ಯ ಮೂಲಸೌಕರ್ಯಗಳ ಸಹಿತ ಸೂಕ್ತ ಸೌಲಭ್ಯಗಳನ್ನು ರಾಜ್ಯ ಸರಕಾರ ಕಲ್ಪಿಸಿಕೊಟ್ಟಿಲ್ಲ ಎಂಬ ಬಗ್ಗೆ ವ್ಯಾಪಕ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕೇರಳ ಹೈಕೋರ್ಟ್‌ ಶಬರಿಮಲೆಯಲ್ಲಿನ ವಸ್ತುಸ್ಥಿತಿಯ ಅಧ್ಯಯನಕ್ಕಾಗಿ 12 ಮಂದಿ ತಜ್ಞರ ತಂಡವನ್ನು ಶಬರಿಮಲೆಗೆ ಕಳುಹಿಸಿಕೊಡಲು ನಿರ್ಧರಿಸಿದೆ.

ಇದೇ ಮೊದಲ ಬಾರಿಗೆ ಶಬರಿಮಲೆ ಯಾತ್ರೆಯ ಸಂದರ್ಭದಲ್ಲಿ ಇಷ್ಟೊಂದು ಅವಾಂತರ, ಗೊಂದಲಗಳು ಸೃಷ್ಟಿಯಾಗಿದ್ದು ರಾಜ್ಯ ಸರಕಾರದ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ದೂರದೂರುಗಳಿಂದ ಅಯ್ಯಪ್ಪನ ದರ್ಶನಕ್ಕೆ ಆಗಮಿಸಿದ ಭಕ್ತರು ಸೌಕರ್ಯಗಳ ಅಲಭ್ಯತೆಯಿಂದಾಗಿ ಪಂದಳಂನಿಂದಲೇ ವಾಪಸು ಹೋಗುತ್ತಿದ್ದಾರೆ. ಮಲೆಯನ್ನೇರಿದ ಭಕ್ತರು ಕೂಡ ದೇವರ ದರ್ಶನಕ್ಕಾಗಿ 20 ತಾಸುಗಳಿಗೂ ಅಧಿಕ ಕಾಲ ಸರತಿಯಲ್ಲಿ ಕಾಯಬೇಕಾದ ಅನಿವಾರ್ಯತೆ ಎದುರಾಗಿದೆ ಎಂದು ವಿಪಕ್ಷ ಒಕ್ಕೂಟ ಯುಡಿಎಫ್ ಆರೋಪಿಸಿದೆ. ಆದರೆ ಇದನ್ನು ತಳ್ಳಿಹಾಕಿರುವ ಆಡಳಿತಾರೂಢ ಎಲ್‌ಡಿಎಫ್ ಸರಕಾರ, ಯಾತ್ರೆಗೆ ಸಕಲ ಸಿದ್ಧತೆ ಮಾಡಲಾಗಿದ್ದು ಗೊಂದಲವೇನೂ ಇಲ್ಲ ಎನ್ನುತ್ತಿದೆ.

ವಾರ್ಷಿಕ ಯಾತ್ರಾ ಋತುವಿನ ಮೊದಲ ಚರಣವಾದ 19 ದಿನಗಳ ಮಂಡಲ ಪೂಜಾ ಯಾತ್ರೆಯು ಈಗ ನಡೆಯುತ್ತಿದ್ದು ಆರಂಭದಲ್ಲಿ ಸರಾಸರಿ 62 ಸಹಸ್ರಕ್ಕೂ ಅಧಿಕ ಮಂದಿ ಯಾತ್ರಿಗಳು ಶಬರಿಮಲೆಗೆ ಆಗಮಿಸಿ ದೇವರ ದರ್ಶನ ಪಡೆಯುತ್ತಿದ್ದರು. ಈಗ, ಅಂದರೆ ಐದಾರು ದಿನಗಳಿಂದೀಚೆಗೆ ದೇಗುಲಕ್ಕೆ ಭೇಟಿ ನೀಡುತ್ತಿರುವವರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದ್ದು 88,000ಕ್ಕೇರಿದೆ. ಹೀಗಾಗಿ ದೇವರ ದರ್ಶನದ ಅವಧಿಯನ್ನು ಒಂದು ತಾಸಿನಷ್ಟು ಹೆಚ್ಚಿಸಲಾಗಿದೆ. ಆದರೆ ಇದರಿಂದಲೂ ಸಮಸ್ಯೆ ಬಗೆಹರಿದಿಲ್ಲ.

ಶಬರಿಮಲೆ ಯಾತ್ರೆ ವೇಳೆ ಪ್ರತೀ ವರ್ಷ ಲಕ್ಷಾಂತರ ಯಾತ್ರಿಕರು ಕಟ್ಟುನಿಟ್ಟಿನ ವ್ರತಾಚರಣೆ ನಡೆಸಿ ಅಯ್ಯಪ್ಪನ ದರ್ಶನ ಪಡೆಯಲು ಆಗಮಿಸುವುದು ವಾಡಿಕೆ. ಪ್ರತೀ ವರ್ಷ ದೇಗುಲಕ್ಕೆ ದೇಣಿಗೆಯ ಮಹಾಪೂರವೇ ಹರಿದು ಬರುತ್ತಿದೆ. ಇದೇ ವೇಳೆ ಶಬರಿಮಲೆ ದೇಗುಲದ ಆಡಳಿತ ಮತ್ತು ಯಾತ್ರೆಯ ನಿರ್ವಹಣೆ ಹೊಣೆ ತಿರುವಾಂಕೂರು ದೇವಸ್ವಂ ಬೋರ್ಡ್‌(ಟಿಡಿಬಿ)ನದ್ದಾಗಿದ್ದು ಯಾತ್ರೆಗೂ ಮುನ್ನ ಯಾತ್ರಿಕರಿಗೆ ಅಗತ್ಯ ಮೂಲ ಸೌಕರ್ಯ ಮತ್ತು ಅಗತ್ಯ ಸಿದ್ಧತೆಗಳನ್ನು ಮಾಡುವ ಹೊಣೆಗಾರಿಕೆಯೂ ಬೋರ್ಡ್‌ನದ್ದಾಗಿದೆ. ಕೋವಿಡ್‌ ಅವಧಿಯನ್ನು ಹೊರತುಪಡಿಸಿದಂತೆ ಪ್ರತೀವರ್ಷ ಶಬರಿಮಲೆ ಯಾತ್ರೆ ಕೈಗೊಳ್ಳುವವರ ಸಂಖ್ಯೆ ಹೆಚ್ಚುತ್ತಲೇ ಸಾಗಿದೆ. ಈ ಬಗ್ಗೆ ಟಿಡಿಬಿ ಮತ್ತು ರಾಜ್ಯ ಸರಕಾರಕ್ಕೆ ಅರಿವಿದ್ದರೂ ಯಾತ್ರಾ ಋತು ಆರಂಭಗೊಳ್ಳುವುದಕ್ಕೂ ಮುನ್ನ ಅಗತ್ಯ ಸಿದ್ಧತೆಗಳನ್ನು ಮತ್ತು ಯಾತ್ರಿಕರಿಗೆ ಅತ್ಯಗತ್ಯವಾಗಿರುವ ಪ್ರಾಥಮಿಕ ಸೌಲಭ್ಯಗಳನ್ನು ಒದಗಿಸುವಲ್ಲಿ ಎಡವಿರುವುದು ಬಲುದೊಡ್ಡ ಲೋಪವೇ ಸರಿ.

ಈ ಬಾರಿಯ ಯಾತ್ರಾ ಋತು ಕೊನೆಗೊಳ್ಳಲು ಇನ್ನೂ ಒಂದೂವರೆ ತಿಂಗಳು ಬಾಕಿ ಇದ್ದು, ಇನ್ನಾದರೂ ಸರಕಾರ ಮತ್ತು ಟಿಡಿಬಿ ಎಚ್ಚೆತ್ತುಕೊಂಡು ಯಾತ್ರಿಗ ಳಿಗೆ ಅತ್ಯಗತ್ಯ ಕುಡಿಯುವ ನೀರು, ಉಪಾಹಾರ, ಶೌಚಾಲಯ, ಪ್ರಾಥಮಿಕ ಚಿಕಿತ್ಸೆ, ಮೂಲಸೌಲಭ್ಯಗಳನ್ನು ಕಲ್ಪಿಸಿಕೊಡಬೇಕು. ದೇವರ ದರ್ಶನಕ್ಕೆ ಬರುವ ಯಾವೊಬ್ಬ ಭಕ್ತನೂ ದರ್ಶನ ಪಡೆಯಲಾಗದೆ ಹಿಂದಿರುಗುವ‌ ಸ್ಥಿತಿಯನ್ನು ಸರಕಾರ ತಂದೊಡ್ಡಬಾರದು. ಮುಂದಿನ ದಿನಗಳಲ್ಲಿ ಭಕ್ತರ ಸಂಖ್ಯೆ ಮತ್ತಷ್ಟು ಹೆಚ್ಚುವ ಸಾಧ್ಯತೆ ಇದ್ದು, ಯಾತ್ರಿಗಳ ಸುರಕ್ಷೆಗೆ ಸರಕಾರ ಒತ್ತು ನೀಡಬೇಕು. ಈ ಪ್ರಾಥಮಿಕ ಹೊಣೆಗಾರಿಕೆಯಿಂದ ರಾಜ್ಯ ಸರಕಾರ ನುಣುಚಿಕೊಳ್ಳಬಾರದು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Assembly Election: ಜಮ್ಮು-ಕಾಶ್ಮೀರದಲ್ಲಿ ಪ್ರಜಾಪ್ರಭುತ್ವದ ಹಬ್ಬ

Namma-clinic

Karnataka; ಬಸ್‌ ನಿಲ್ದಾಣಗಳಲ್ಲಿ ನಮ್ಮ ಕ್ಲಿನಿಕ್‌ ಸಮುಚಿತ ನಿರ್ಧಾರ

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ರೈತರ ಹಿತರಕ್ಷಣೆ ನೆಪದಲ್ಲಿ ಗ್ರಾಹಕರಿಗೆ ಬರೆ ಸಲ್ಲದು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವುಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

ಪರೀಕ್ಷಾ ಅಕ್ರಮಗಳ ತಡೆಗೆ ಎಸ್‌ಎಸ್‌ಸಿ ಕಠಿನ ನಿಲುವು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.