ಪೋಲಿಯೋ ಲಸಿಕೆ: ದ.ಕ: ಶೇ. 95, ಉಡುಪಿ: ಶೇ. 96.06 ಸಾಧನೆ


Team Udayavani, Feb 28, 2022, 6:35 AM IST

ಪೋಲಿಯೋ ಲಸಿಕೆ: ದ.ಕ: ಶೇ. 95, ಉಡುಪಿ: ಶೇ. 96.06 ಸಾಧನೆ

ಸಾಂದರ್ಭಿಕ ಚಿತ್ರ.

ಮಂಗಳೂರು: ರಾಷ್ಟ್ರೀಯ ಪಲ್ಸ್‌ ಪೋಲಿಯೋ ಲಸಿಕೆ ಕಾರ್ಯಕ್ರಮದಲ್ಲಿ ದ.ಕ. ಜಿಲ್ಲೆಯಲ್ಲಿ ರವಿವಾರ 0-5 ವರ್ಷದೊಳಗಿನ ಒಟ್ಟು ಶೇ. 95ರಷ್ಟು ಮಕ್ಕಳಿಗೆ ಲಸಿಕೆ ನೀಡಲಾಗಿದೆ.

ಬಂಟ್ವಾಳ ತಾಲೂಕಿನಲ್ಲಿ ಶೇ. 95.2, ಬೆಳ್ತಂಗಡಿಯಲ್ಲಿ ಶೇ. 104.7, ಮಂಗಳೂರಿನಲ್ಲಿ ಶೇ. 89, ಪುತ್ತೂರಿನಲ್ಲಿ ಶೇ. 101.1, ಸುಳ್ಯ ತಾಲೂಕಿನಲ್ಲಿ ಶೇ. 106.7 ಮಕ್ಕಳಿಗೆ ಲಸಿಕೆ ಹಾಕಲಾಯಿತು.

ಮೊದಲ ದಿನ 1,54,023 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿತ್ತು. ಒಟ್ಟು 921 ಬೂತ್‌ಗಳು, ಬಸ್‌ ನಿಲ್ದಾಣ, ರೈಲು ನಿಲ್ದಾಣ ಮೊದಲಾದೆಡೆ ಸಂಚಾರಿ ಬೂತ್‌ಗಳಲ್ಲಿ ಸೇರಿದಂತೆ 1,46,388 ಮಕ್ಕಳಿಗೆ ಲಸಿಕೆ ನೀಡಲಾಯಿತು.
ಟೋಲ್‌ಗೇಟ್‌ಗಳಲ್ಲಿಯೂ ವಾಹನಗಳನ್ನು ತಪಾಸಣೆ ಮಾಡಿ ಮಕ್ಕಳಿಗೆ ಲಸಿಕೆ ಹಾಕಿಕೊಳ್ಳುವಂತೆ ಆರೋಗ್ಯ ಕಾರ್ಯಕರ್ತೆಯರು ಮನವಿ ಮಾಡುತ್ತಿರುವುದು ಕಂಡುಬಂತು.

ಬಾಕಿಯಾದವರಿಗೆ ಮನೆಗೇ ಲಸಿಕೆ
ಬಿಟ್ಟು ಹೋದ ಮಕ್ಕಳಿಗೆ ಗ್ರಾಮೀಣ ಭಾಗದಲ್ಲಿ ಸೋಮವಾರ ಮತ್ತು ಮಂಗಳವಾರ ಮನೆ ಮನೆಗೆ ಭೇಟಿ ನೀಡಿ ಲಸಿಕೆ ನೀಡಲಾಗುತ್ತದೆ. ನಗರದಲ್ಲಿ ಸೋಮವಾರ, ಮಂಗಳವಾರ ಮತ್ತು ಬುಧವಾರ ಮನೆ ಮನೆಗೆ ಭೇಟಿ ಲಸಿಕೆ ನೀಡಲಾಗುತ್ತದೆ.

ಜಿಲ್ಲಾ ಮಟ್ಟದ ಲಸಿಕೀಕರಣ ಕಾರ್ಯಕ್ರಮಕ್ಕೆ ಸರಕಾರಿ ಲೇಡಿಗೋಶನ್‌ ಆಸ್ಪತ್ರೆಯಲ್ಲಿ ಮೇಯರ್‌ ಪ್ರೇಮಾನಂದ ಶೆಟ್ಟಿ ಅವರು ಚಾಲನೆ ನೀಡಿದರು. ವಿಧಾನಪರಿಷತ್‌ ಸದಸ್ಯ ಮಂಜುನಾಥ ಭಂಡಾರಿ, ಡಿಎಚ್‌ಒ ಡಾ| ಕಿಶೋರ್‌ ಕುಮಾರ್‌ ಮೊದಲಾದವರು ಪಾಲ್ಗೊಂಡಿದ್ದರು.

ಉಡುಪಿ: ಶೇ. 96.06 ಸಾಧನೆ
ಉಡುಪಿ: ಜಿಲ್ಲೆಯ ಒಟ್ಟು 662 ಬೂತ್‌ಗಳಲ್ಲಿ 73,995 ಮಂದಿಗೆ ಲಸಿಕೆ ನೀಡಲು ಉದ್ದೇಶಿಸಲಾಗಿದ್ದು, 71,076 ಮಂದಿ ಲಸಿಕೆ ನೀಡುವ ಮೂಲಕ ಶೇ. 96.06 ಸಾಧನೆ ಮಾಡಲಾಗಿದೆ.

ಗ್ರಾಮಾಂತರ ಭಾಗದಲ್ಲಿ ಶೇ. 96.27 ಹಾಗೂ ನಗರ ಭಾಗದಲ್ಲಿ 95.02 ಮಂದಿ ಲಸಿಕೆ ಪಡೆದುಕೊಂಡರು. ಉಡುಪಿ ತಾಲೂಕಿನಲ್ಲಿ ಶೇ. 97.52, ಕುಂದಾಪುರದಲ್ಲಿ ಶೇ. 93.83, ಕಾರ್ಕಳದಲ್ಲಿ ಶೇ. 96.88 ಮಂದಿ ಲಸಿಕೆ ಪಡೆದುಕೊಂಡರು.

ಲಸಿಕೆ ಪಡೆಯಲು ಬಾಕಿ ಇರುವ ಮಕ್ಕಳನ್ನು ಗುರುತಿಸಲು ಆರೋಗ್ಯ ಕಾರ್ಯಕರ್ತೆಯರು ನಗರ ಪ್ರದೇಶದಲ್ಲಿ ಫೆಬ್ರವರಿ 28ರಿಂದ ಮಾರ್ಚ್‌ 2ರ ವರೆಗೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಫೆಬ್ರವರಿ 28 ಮತ್ತು ಮಾರ್ಚ್‌ 1ರಂದು ಮನೆ ಮನೆಗೆ ಭೇಟಿ ನೀಡಿ ಪರಿಶೀಲಿಸಲಿದ್ದಾರೆ. ಲಸಿಕೆ ಪಡೆಯದ ಅರ್ಹ ಮಕ್ಕಳ ಪೋಷಕರು ಸಮೀಪದ ಆರೋಗ್ಯ ಕೇಂದ್ರಕ್ಕೆ ಮಕ್ಕಳನ್ನು ಕರೆದೊಯ್ದು ಲಸಿಕೆ ಕೊಡಿಸುವಂತೆ ಮತ್ತು ಮನೆ ಮನೆ ಭೇಟಿ ನೀಡುವ ಆರೋಗ್ಯ ಕಾರ್ಯಕರ್ತರಿಗೆ ಅಗತ್ಯ ಸಹಕಾರ ನೀಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್‌ ಎಂ. ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udupi: ಗೀತಾರ್ಥ ಚಿಂತನೆ-40: ದುರ್ಯೋಧನರಿಗಿಂತ ಶಕುನಿಗಳು ಅಪಾಯ

Udayavani.com “ನಮ್ಮನೆ ಕೃಷ್ಣ”: ಮೆಚ್ಚುಗೆ ಗಳಿಸಿದ 3ನೇ ರೀಲ್ಸ್ ಪ್ರಸಾರ

Udayavani.com “ನಮ್ಮನೆ ಕೃಷ್ಣ”: ತೃತೀಯ ಬಹುಮಾನ ಗಳಿಸಿದ ರೀಲ್ಸ್

ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು

Sep.20: ಮುನಿಯಾಲ್‌ ಇನ್ಸ್ಟಿಟ್ಯೂಟ್‌ ಆಫ್ ಆಯುರ್ವೇದ ಮೆಡಿಕಲ್‌ ಕಾಲೇಜು ಘಟಿಕೋತ್ಸವ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.