![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್ ಅಳವಡಿಕೆಗೆ ನಿರ್ಧಾರ
Team Udayavani, Jul 2, 2024, 1:51 AM IST
![Punjalkatte ಪಾಂಡವರಕಲ್ಲು: ಅಂಗನವಾಡಿ ಕೇಂದ್ರಕ್ಕೆ ಶೀಟ್ ಅಳವಡಿಕೆಗೆ ನಿರ್ಧಾರ](https://www.udayavani.com/wp-content/uploads/2024/07/sheet-620x326.jpg)
ಪುಂಜಾಲಕಟ್ಟೆ: ಬಂಟ್ವಾಳ ತಾಲೂಕಿನ ಬಡಗಕಜೆಕಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾಂಡವರಕಲ್ಲು ಅಂಗನವಾಡಿ ಕೇಂದ್ರಕ್ಕೆ ಬಂಟ್ವಾಳ ಪಂಚಾಯತ್ರಾಜ್ ಎಂಜಿನಿಯರಿಂಗ್ ಉಪವಿಭಾಗದ ಅಭಿಯಂತರು ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಅಂಗನವಾಡಿ ಕೇಂದ್ರದ ಆರ್ಸಿಸಿ ಮೇಲ್ಛಾವಣಿ ಸೋರುತ್ತಿದ್ದು, ಕೊಠಡಿಗೆ ನೀರು ಬೀಳುತ್ತಿರುವ ಹಿನ್ನೆಲೆಯಲ್ಲಿ ಪೋಷಕರು ಜಿಲ್ಲಾಧಿಕಾರಿಗೆ ದೂರು ನೀಡಿದ್ದರು. ಇದರಿಂದ ಎಚ್ಚೆತ್ತುಕೊಂಡ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಅಧಿಕಾರಿಗಳು ಅಂಗನವಾಡಿ ಕೇಂದ್ರವನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಿದ್ದರು.
ಅದರಂತೆ ಕೇಂದ್ರವನ್ನು ಸಮೀಪದ ಸಮುದಾಯ ಭವನಕ್ಕೆ ಸ್ಥಳಾಂತರಿಸಲಾಗಿದ್ದು, ಸೋಮವಾರದಿಂದ ಇಲ್ಲಿ ಅಂಗನವಾಡಿ ತರಗತಿ ನಡೆಸಲಾಗುತ್ತಿದೆ. ಆಂಗನವಾಡಿ ಕೇಂದ್ರ ಸೋರುತ್ತಿರುವ ಬಗ್ಗೆ ಉದಯವಾಣಿ “ಸೋರುತಿಹುದು ಪಾಮಡವರಕಲ್ಲು ಅಂಗನವಾಡಿ ಕೇಂದ್ರ’ ಎಂದು ವರದಿ ಪ್ರಕಟಿಸಿತ್ತು.
ಪಂಚಾಯತ್ರಾಜ್ ಅಭಿಯಂತ ಕೃಷ್ಣ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಕಟ್ಟಡದ ದೃಢತೆ ಬಗ್ಗೆ ಭರವಸೆ ನೀಡಿದ್ದಾರೆ. ಮೇಲ್ಛಾವಣಿ ಸೋರುವಿಕೆ ತಡೆಗೆ ತಾತ್ಕಾಲಿಕ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಈ ಬಗ್ಗೆ ಗ್ರಾ.ಪಂ.ನಲ್ಲಿ ಸಭೆ ನಡೆಸಲಾಗಿದ್ದು, ಸದ್ಯ ಸೋರಿಕೆ ತಡೆಗಟ್ಟಲು ಶೀಟ್ ಅಳವಡಿಸಲು ಹಾಗೂ ಕೆಟ್ಟಿರುವ ಶೌಚಾಲಯವನ್ನು ದುರಸ್ತಿಗೊಳಿಸಲು ನಿರ್ಧರಿಸಲಾಗಿದೆ ಎಂದು ಗ್ರಾ.ಪಂ.ಅಧ್ಯಕ್ಷ ದೇವದಾಸ್ ಅಬುರ ತಿಳಿಸಿದ್ದಾರೆ.
ಟಾಪ್ ನ್ಯೂಸ್
![Mangaluru ಮಣ್ಣು ಕುಸಿತ: ಕೆಲಸ ಹೊಸತಲ್ಲ, ದುರದೃಷ್ಟ ಹೊಸತು !](https://www.udayavani.com/wp-content/uploads/2024/07/azaz-415x241.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.