Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ


Team Udayavani, May 4, 2024, 7:45 AM IST

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

ಪುತ್ತೂರು: ತಾಪಮಾನ ತೀವ್ರ ಏರಿಕೆ ಕಂಡಿರುವ ಕಾರಣ ಅಡಿಕೆ ತೋಟಗಳಲ್ಲಿ ನಳ್ಳಿ (ಎಳೆ ಅಡಿಕೆ) ಉದುರುತ್ತಿದ್ದು ಅರ್ಧಕ್ಕರ್ಧ ಫಸಲು ನಷ್ಟವಾಗುವ ಭೀತಿ ಎದುರಾಗಿದೆ.

ಸಾಮಾನ್ಯವಾಗಿ ಅಡಿಕೆ ತೋಟಗಳು 35ರಿಂದ 36 ಡಿಗ್ರಿ ಸೆ. ತನಕದ ಉಷ್ಣಾಂಶ ವನ್ನು ತಾಳಿಕೊಳ್ಳುವ ಸಾಮರ್ಥ್ಯ ಹೊಂದಿದೆ. ಆದರೆ 10 ದಿನಗಳಿಂದ ತಾಪ ಮಾನ 38, 40, 42 ಡಿಗ್ರಿ ಸೆ.ನಷ್ಟು ದಾಖಲಾಗಿದ್ದು, ಪರಿಣಾಮ ನೇರವಾಗಿ ಅಡಿಕೆಯ ಮೇಲಾಗಿದೆ. ಕೆಲವು ತೋಟಗಳಲ್ಲಿ ಅಡಿಕೆ ಮರದ ಬುಡದಲ್ಲಿ ಎಳೆಯ ನಳ್ಳಿಗಳು ರಾಶಿಯಾಗಿ ಬಿದ್ದಿವೆ.

ಬಿಸಿ ವಾತಾವರಣ
ಅಡಿಕೆ ತೋಟದ ಒಳಗೆ ತಂಪು ವಾತಾವರಣ ಇರುತ್ತದೆ. ಆದರೆ ಈಗ ಬಿಸಿ ವಾತಾವರಣ ಇದೆ. ಅಡಿಕೆ ಮರದ ಬುಡಕ್ಕೆ ಎಷ್ಟೇ ನೀರು ಹಾಯಿಸಿದರೂ ಬುಡ ಮಾತ್ರ ತಂಪಾಗುತ್ತಿದೆ ವಿನಾ ಕೊಂಬೆಗೆ ತಾಕುವ ಬಿಸಿಲಿನಿಂದ ಇಡೀ ಮರವೇ ಸುಟ್ಟಂತಾಗುತ್ತಿದೆ. ಹೆಚ್ಚಿನ ತೋಟಗಳಲ್ಲಿ ಹಿಂಗಾರ ಕರಟಿ ಹೋಗಿ ಫಸಲೇ ಶೂನ್ಯವಾಗಿದೆ. ದಿನಕ್ಕೆ ಆರೇಳು ತಾಸು ನೀರು ಹಾಯಿಸುವ ತೋಟಗಳಲ್ಲೂ ಹಿಂಗಾರ ಸುಡುತ್ತಿದ್ದು, ಎಳೆಕಾಯಿ ಉದುರುತ್ತಿದೆ. ಈಗಾಗಲೇ ಶೇ. 50ಕ್ಕೂ ಹೆಚ್ಚು ನಳ್ಳಿ ಉದುರಿದೆ. ಮುಂದಿನ ವರ್ಷ ಅರ್ಧದಷ್ಟು ಇಳುವರಿ ಸಿಗಲಾರದು ಎನ್ನುತ್ತಾರೆ ಪುತ್ತೂರಿನ ಕೃಷಿಕ ಶಿವಪ್ಪ ಪೂಜಾರಿ.

ತಾಪಮಾನವೇ ಕಾರಣ
ಸಾಮಾನ್ಯವಾಗಿ ಆರು ಕಾರಣಗಳಿಂದಾಗಿ ನಳ್ಳಿ ಉದುರುತ್ತದೆ ಎನ್ನುವುದು ಅಧಿಕಾರಿಗಳ ಅಭಿಪ್ರಾಯ. ಉಷ್ಣ ತಾಪಮಾನ, ಮರಗಳ ಶಕ್ತಿ ಸಾಮರ್ಥ್ಯ, ಕೀಟಬಾಧೆ, ಶಿಲೀಂಧ್ರಗಳು, ರೋಗರುಜಿನ, ಪೋಷಕಾಂಶಗಳ ಕೊರತೆ. ಈ ಬಾರಿ ತಾಪಮಾನವೇ ನೇರ ಕಾರಣ. ರೋಗ ರುಜಿನಗಳಿಗೆ ಔಷಧ ಸಿಂಪಡಿಸಿ ಆದರೂ ಪರಿಹಾರ ಕಂಡುಕೊಳ್ಳಬಹುದು. ಆದರೆ ಬಿಸಿಲಿನ ಧಗೆಗೆ ಪರಿಹಾರ ಇಲ್ಲದಿರುವುದರಿಂದ ಬೆಳೆಗಾರ ಕೈಕಟ್ಟಿ ಕೂರುವ ಸ್ಥಿತಿಯಿದೆ. ಈ ಕುರಿತಂತೆ ತೋಟಗಾರಿಕೆ ಇಲಾಖೆಯ ಅಧಿಕಾರಿಗಳನ್ನು ಪ್ರಶ್ನಿಸಿದರೆ, ಈ ತನಕ ಬೆಳೆಗಾರರಿಂದ ದೂರು ಬಂದಿಲ್ಲ ಎನ್ನುವ ಮೂಲಕ ಅಡಿಕೆ ತೋಟಕ್ಕೆ ಇಲಾಖೆ ಇಳಿದೇ ಇಲ್ಲ ಅನ್ನುವ ಸಂಗತಿಯನ್ನು ಸ್ಪಷ್ಟಪಡಿಸಿದಂತಿದೆ.

ಮಳೆ ಬಂದರೆ ಎಲ್ಲವೂ ಧರೆಗೆ
ಮಳೆ ಬಂದರೆ ಪರಿಹಾರ ಸಿಗಬಹುದೇ ಎನ್ನುವ ಪ್ರಶ್ನೆಗೆ ರೈತರು ಹೇಳುವುದೇನೆಂದರೆ … ಮಳೆ ಬಂದರೆ ಈಗ ಉಳಿದಿರುವ ಎಲ್ಲ ಎಳೆ ಅಡಿಕೆಯೂ ಧರೆಗೆ ಉದುರಲಿವೆ.ಒಂದು ವೇಳೆ ನಿರಂತರ ಮಳೆಯಾದರೆ ಮಾತ್ರ ಅಡಿಕೆ ಗಿಡಗಳಿಗೆ ತಂಪು ಆಗಬಹುದು. ಮಳೆ-ಬಿಸಿಲಿನ ಆಟ ನಡೆದರೆ ಅಡಿಕೆಯ ಆಸೆ ಬಿಡುವುದೇ ಉತ್ತಮ ಅನ್ನುತ್ತಾರೆ.
ಕೆಲವು ತೋಟಗಳಲ್ಲಿ ನೀರಿನ ಅಭಾವ ಇದೆ. ವಾರಕ್ಕೊಮ್ಮೆ ನೀರು ಹಾಯಿಸಲಾಗುತ್ತಿರುವ ತೋಟಗಳು ಇವೆ. ಹೀಗಾಗಿ ಒಂದೆಡೆ ನೀರಿಲ್ಲದೆ, ತಾಪಮಾನ ತಾಳಲಾರದೆ ಅಡಿಕೆ ಮರಗಳು ಬಳಲಿ ಬೆಂಡಾಗಿವೆ.

ಬಹುತೇಕ ಅಡಿಕೆ ತೋಟಗಳಲ್ಲಿ ಕಾಯಿ ಗಟ್ಟುತ್ತಿ ರುವ ನಳ್ಳಿಗಳು ಉದುರುತ್ತಿವೆ. ಹಿಂಗಾರ ಒಣಗಿದೆ. ಈಗಿನ ಪರಿಸ್ಥಿತಿ ಗಮನಿಸಿದರೆ ಶೇ. 50ರಷ್ಟುಬೆಳೆ ನಷ್ಟವಾಗುವ ಸಾಧ್ಯತೆ ಇದೆ.ವಾತಾ ವರಣದಲ್ಲಿ ಪರಿಸ್ಥಿತಿ
ತಿಳಿಯಾದರೆ ಮಾತ್ರ ಇದಕ್ಕೆ ಪರಿಹಾರ.
– ಮಹೇಶ್‌ ಪುಚ್ಚಪ್ಪಾಡಿ,
ಅಧ್ಯಕ್ಷರು, ಅಖೀಲ ಭಾರತ ಅಡಿಕೆ ಬೆಳೆಗಾರರ ಸಂಘ

ನೀರಿನ ಅಭಾವ ಇರುವ ತೋಟಗಳಲ್ಲಿ ತತ್‌ಕ್ಷಣಕ್ಕೆ ಮಳೆ ಬಂದರೆ ಎಳೆ ಕಾಯಿ ಉದುರುವ ಸಾಧ್ಯತೆ ಇದೆ. ಬಿಸಿಲಿನ ತಾಪಮಾನ ಹೆಚ್ಚಿದ್ದು ನೀರಿನ ವ್ಯವಸ್ಥೆ ಇರುವ ತೋಟಗಳಿಗೆ ಸಮಸ್ಯೆ ಆಗದು. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
– ಮಂಜುನಾಥ, ಡಿ.ಡಿ., ತೋಟಗಾರಿಕಾ ಇಲಾಖೆ, ದ.ಕ.ಜಿಲ್ಲೆ

-ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

10

Puttur: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು

1

Puttur: ವಿದ್ಯುತ್‌ ಉಪಕರಣದಲ್ಲಿ ಬೆಂಕಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.