Puttur: ಪುತ್ತಿಲ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ; ಬೆಂಗಳೂರು ಹೊಟೇಲ್ನಲ್ಲಿ ಮಹಜರು
Team Udayavani, Sep 4, 2024, 6:50 AM IST
ಪುತ್ತೂರು: ಲೈಂಗಿಕ ದೌರ್ಜನ್ಯ, ನಂಬಿಕೆ ದ್ರೋಹ, ಕೊಲೆ ಬೆದರಿಕೆ ಕುರಿತು ಪುತ್ತೂರು ಮಹಿಳಾ ಪೊಲೀಸ್ ಠಾಣೆಯಲ್ಲಿ ಮಹಿಳೆಯೋರ್ವರು ಅರುಣ್ ಕುಮಾರ್ ಪುತ್ತಿಲ ಅವರ ವಿರುದ್ಧ ನೀಡಿರುವ ಪ್ರಕರಣಕ್ಕೆ ಸಂಬಂಧಿಸಿ ಪುತ್ತೂರು ನಗರ ಪೊಲೀಸ್ ಠಾಣೆ ಇನ್ಸ್ಪೆಕ್ಟರ್ ಸತೀಶ್ ಜಿ.ಜೆ. ಅವರ ನೇತೃತ್ವದಲ್ಲಿ ಬೆಂಗಳೂರು ಹೊಟೇಲೊಂದರಲ್ಲಿ ಮಹಜರು ನಡೆದಿದೆ.
ಸಂತ್ರಸ್ತ ಮಹಿಳೆಯನ್ನು ಸೆ. 2ರಂದು ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೊಳಪಡಿಸಿ ಬಳಿಕ ನ್ಯಾಯಾಲಯದಲ್ಲಿ ನ್ಯಾಯಾಧೀಶರ ಮುಂದೆ ಆಕೆಯ ಹೇಳಿಕೆ ಪಡೆದುಕೊಳ್ಳಲಾಗಿತ್ತು. ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಆಕೆ ನೀಡಿದ ದೂರಿನಲ್ಲಿರುವ ಬೆಂಗಳೂರು ಹೊಟೇಲ್ಗೆ ಸೆ. 3ರಂದು ಬೆಳಗ್ಗೆ ಪೊಲೀಸರು ತೆರಳಿ ಮಹಜರು ನಡೆಸಿರುವ ಮಾಹಿತಿ ಲಭ್ಯವಾಗಿದೆ.
ರಾಜಕೀಯ ಮಾಡುವುದಿಲ್ಲ: ಅಶೋಕ್ ರೈ
ಅರುಣ್ ಪುತ್ತಿಲ ವಿರುದ್ಧದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ಶಾಸಕ ಅಶೋಕ್ ಕುಮಾರ್ ರೈ, ಸುಖಾಸುಮ್ಮನೆ ಯಾರಿಗೂ ಅನ್ಯಾಯವಾಗಬಾರದು. ನಾನು ಈ ವಿಚಾರವನ್ನು ರಾಜಕೀಯವಾಗಿ ಬಳಸಿಕೊಳ್ಳುವುದಿಲ್ಲ. ಈ ಪ್ರಕರಣದಲ್ಲಿ ನಾನು ಯಾವುದೇ ರೀತಿಯ ಹಸ್ತಕ್ಷೇಪ ಮಾಡುವುದಿಲ್ಲ. ಕಾನೂನಿನ ಪ್ರಕಾರ ತನಿಖೆ ನಡೆಯುತ್ತಿದೆ. ಸರಕಾರದಿದ ಒತ್ತಡ ಹಾಕಿಸಿ ರಾಜಕೀಯ ದುರುದ್ದೇಶದಿಂದ ಯಾರನ್ನು ತೇಜೋವಧೆ ಮಾಡುವ ಪ್ರಯತ್ನ ಮಾಡುವುದಿಲ್ಲ ಎಂದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Puttur: ವಿದ್ಯುತ್ ಉಪಕರಣದಲ್ಲಿ ಬೆಂಕಿ
Ninthikallu-ಬೆಳ್ಳಾರೆ-ಸುಳ್ಯ ರಸ್ತೆಯಲ್ಲಿ ಹೊಂಡ-ಗುಂಡಿಗಳದ್ದೇ ಸಾಮ್ರಾಜ್ಯ
High Court ನಿರ್ದೇಶನ: ಕೊಂಬಾರಿನ ರಸ್ತೆ, ಬಿರ್ಮೆರೆಗುಂಡಿ ಸೇತುವೆಗೆ 1.31 ಕೋಟಿ ರೂ.
ಖಾಯಂ ಪಿಡಿಓ, ಕಾರ್ಯದರ್ಶಿ ನೇಮಕಕ್ಕೆ ಒತ್ತಾಯ;ಗ್ರಾ.ಪಂ.ಸಾಮಾನ್ಯ ಸಭೆ ಬಹಿಷ್ಕರಿಸಿ ಪ್ರತಿಭಟನೆ
Belthangady ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ಅಸ್ಥಿತ್ವಕ್ಕೆ; ಲೋಗೋ ಅನಾವರಣ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.