ಯುವರಾಜನಿಂದ ಹಣ ಪಡೆದಿದ್ದು ನಿಜ: ಸಿಸಿಬಿ ಅಧಿಕಾರಿಗಳ ಮುಂದೆ ರಾಧಿಕಾ ಹೇಳಿಕೆ


Team Udayavani, Jan 9, 2021, 1:18 PM IST

ಯುವರಾಜನಿಂದ ಹಣ ಪಡೆದಿದ್ದು ನಿಜ: ಸಿಸಿಬಿ ಅಧಿಕಾರಿಗಳ ಮುಂದೆ ಒಪ್ಪಿಕೊಂಡ ರಾಧಿಕಾ

ಬೆಂಗಳೂರು: ರಾಜಕಾರಣಿಗಳು, ನಿವೃತ್ತ ನ್ಯಾಯಮೂರ್ತಿಗಳು ಸೇರಿ ಹಲವರಿಂದ ಹಣ ಪಡೆದು ವಂಚಿಸಿರುವ ಯುವರಾಜ
ಅಲಿಯಾಸ್‌ ಸ್ವಾಮಿ ತಮಗೆ ಹಣ ಕೊಟ್ಟಿದ್ದ ಸಂಗತಿ ನಿಜ ಎಂದು ನಟಿ ರಾಧಿಕಾ ಕುಮಾರಸ್ವಾಮಿ ಸಿಸಿಬಿ ಅಧಿಕಾರಿಗಳ ಮುಂದೆ
ಒಪ್ಪಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.

ವಂಚಕ ಯುವರಾಜ ತನ್ನ ಅಕೌಂಟ್‌ನಿಂದ ರಾಧಿಕಾ ಕುಮಾರಸ್ವಾಮಿ ಅಕೌಂಟ್‌ಗೆ ಹಣ ಜಮಾವಣೆ ಮಾಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿದ್ದ ನೋಟಿಸ್‌ ಹಿನ್ನೆಲೆಯಲ್ಲಿ ರಾಧಿಕಾ ಶುಕ್ರವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಿದ್ದರು.
“ರಾಧಿಕಾ ಅವರನ್ನು ಹಲವು ಗಂಟೆಗಳ ಕಾಲ ತನಿಖಾಧಿಕಾರಿಗಳು ವಿಚಾರಣೆ ನಡೆಸಿ ಹೇಳಿಕೆ ದಾಖಲಿಸಿಕೊಂಡಿದ್ದಾರೆ. ವಿಚಾರಣೆಗೆ ಪತ್ರವೊಂದನ್ನು ಬರೆದು ತಂದಿದ್ದ ರಾಧಿಕಾ, ಪತ್ರದಲ್ಲಿ ಉಲ್ಲೇಖೀಸಿದ್ದ ಮಾಹಿತಿಯನ್ನೇ ಹಂಚಿಕೊಂಡಿದ್ದಾರೆ. ತಮಗೆ ಯುವರಾಜ ಅವರು ಹಲವು ವರ್ಷಗಳಿಂದ ಪರಿಚಯಸ್ಥರು. ಸಿನಿಮಾ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ಅವರು ನನ್ನ ಅಕೌಂಟ್‌ಗೆ ಹಣ ಹಾಕಿರುವುದು ನಿಜ. 75 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದೇನೆ. ಅವರು ವಂಚಿಸುತ್ತಿದ್ದರು ಎಂಬುದು ನನಗೆ ತಿಳಿದಿರಲಿಲ್ಲ. ಅವರ ವ್ಯವಹಾರಗಳ ಬಗ್ಗೆಯೂ ಅಷ್ಟಾಗಿ ತಿಳಿದಿಲ್ಲ. ಅವರು ವಂಚನೆ ಹಣ ನೀಡಿರುವುದು ಎಂಬುದು
ಖಚಿತಪಟ್ಟರೆ ಆ ಹಣವನ್ನು ವಾಪಾಸ್‌ ನೀಡಲು ಸಿದ್ಧ’ ಎಂಬ ಹೇಳಿಕೆ ನೀಡಿದ್ದಾರೆ ಎಂದು ಸಿಸಿಬಿ ಮೂಲಗಳು ತಿಳಿಸಿವೆ.

ಇದನ್ನೂ ಓದಿ:ಕಾನತ್ತೂರು: ಪತ್ನಿಯ ಗುಂಡಿಕ್ಕಿ ಕೊಂದು ಪತಿ ಆತ್ಮಹತ್ಯೆ

ಇದೇ ವೇಳೆ ತನಿಖಾಧಿಕಾರಿಗಳು ಆರೋಪಿ ಯುವರಾಜನ ಹಿನ್ನೆಲೆ ಹಾಗೂ ಯಾರಿಗಾದರೂ ವಂಚನೆ ಮಾಡಿರುವ ಮಾಹಿತಿ ಇದೆಯೇ? ಹಣಕಾಸು ವ್ಯವಹಾರಿಕ ಸಂಬಂಧ ಇದೆಯೇ ಎಂಬುದನ್ನು ಕೇಳಿದ್ದು ಇದಕ್ಕೆ ರಾಧಿಕಾ, ಅವರ ವ್ಯವಹಾರಗಳ ಬಗ್ಗೆ ನನಗೆ ಗೊತ್ತಿಲ್ಲ. ನಮ್ಮ ಕುಟುಂಬಕ್ಕೆ ಗೊತ್ತಿದ್ದ ವ್ಯಕ್ತಿ ಆಗಿದ್ದರಿಂದ ಸಿನಿಮಾ ನಿರ್ಮಾಣಕ್ಕೆ ಚರ್ಚಿಸಿ ಅಡ್ವಾನ್ಸ್‌ ರೂಪದಲ್ಲಿ
ಹಣ ಪಡೆಯಲಾಗಿತ್ತು ಎಂದು ತಿಳಿಸಿದ್ದಾರೆ.

ಹೇಳಿಕೆಗಳನ್ನು ದಾಖಲಿಸಿಕೊಂಡಿರುವ ತನಿಖಾಧಿಕಾರಿಗಳು ಮತ್ತೂಮ್ಮೆ ವಿಚಾರಣೆಗೆ ಕರೆದರೆ ಹಾಜರಾಗಬೇಕು ಎಂದು ಸೂಚಿಸಿ
ಕಳುಹಿಸಿಕೊಡಲಾಗಿದೆ.

ಯುವರಾಜನಿಗೆ ಡ್ರಿಲ್‌!: ಆರೋಪಿ ಯುವರಾಜನಿಂದ ವಂಚನೆ ಪ್ರಕರಣಗಳ ಸಂಬಂಧ ತನಿಖೆ ಮುಂದುವರಿಸಲಾಗಿದೆ. ಆತ ಇನ್ನೂ ಹಲವು ನಟಿಯರು, ರಾಜಕಾರಣಿಗಳಿಗೆ, ಐಎಎಸ್‌ ಹಾಗೂ ಪೊಲೀಸ್‌ ಅಧಿಕಾರಿಗಳಿಂದ ಉನ್ನತ ಹುದ್ದೆಗಳನ್ನು ಕೊಡಿಸುವುದಾಗಿ ಹೇಳಿ ಹಣ ಪಡೆದು ವಂಚಿಸಿದ್ದಾನೆ. ದೆಹಲಿಯಲ್ಲಿ ಪ್ರಭಾವಿ ಆಗಿರುವ ರಾಜಕೀಯ ನಾಯಕರ ಜತೆಗಿನ ಪೋಟೋಗಳನ್ನು ವಂಚನೆಗೆ ಅಸ್ತ್ರಗಳನ್ನಾಗಿ ಬಳಸಿಕೊಂಡಿದ್ದಾನೆ. ವಂಚನೆ ಹಣದಲ್ಲಿಯೇ ಯುವರಾಜ ಐಶಾರಾಮಿ
ಜೀವನ ನಡೆಸಿದ್ದಾನೆ.

ಸಾಕಷ್ಟು ಪ್ರಮಾಣದ ಸ್ಥಿರಾಸ್ಥಿಗಳನ್ನು ಹೊಂದಿದ್ದಾನೆ. ಸ್ಥಿರಾಸ್ಥಿಗಳ ಪತ್ತೆ ಕಾರ್ಯ ಮಾಡಲಾಗುತ್ತಿದೆ. ಈ ಮಾಹಿತಿಯನ್ನು
ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು. ಯುವರಾಜನಿಂದ ವಂಚನೆಗೊಳಗಾದವರು ಸಿಸಿಬಿ ಕಚೇರಿಯಲ್ಲಿ ದೂರು ದಾಖಲಿಸಬಹುದು ಎಂದು ಸಿಸಿಬಿಯ ಉನ್ನತ ಅಧಿಕಾರಿಯೊಬ್ಬರು ತಿಳಿಸಿದರು.

ಟಾಪ್ ನ್ಯೂಸ್

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

NANGI-KADALKORETA

Nangi: ತೀವ್ರಗೊಂಡ ಕಡಲ್ಕೊರೆತ… ಬೀಚ್‌ ವ್ಯೂ ರೆಸಾರ್ಟ್‌ ಸಮುದ್ರ ಪಾಲಾಗುವ ಸಾಧ್ಯತೆ

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು

Maravanthe: ತೀವ್ರಗೊಂಡ ಕಡಲ್ಕೊರೆತ… ಕಡಲು ಸೇರುತ್ತಿರುವ ಕಲ್ಲುಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Mangaluru: ರಾಹುಲ್‌ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್‌

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Udupi: ಕಾರ್ಮಿಕ ಸುರಕ್ಷೆಗೆ ಜಿಲ್ಲಾಧಿಕಾರಿ ಸೂಚನೆ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Mangaluru: ಮುಖ್ಯಮಂತ್ರಿ ರಾಜೀನಾಮೆ ಅನಿವಾರ್ಯ: ರವಿಕುಮಾರ್‌ ಆಗ್ರಹ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Heavy Rain: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಉತ್ತಮ ಮಳೆ… ಕೆಲವೆಡೆ ಹಾನಿ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Udupi: ದಿನಪೂರ್ತಿ ಮಳೆ… ತಗ್ಗು ಪ್ರದೇಶಗಳು ಜಲಾವೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.