![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, May 28, 2019, 7:20 PM IST
ಬೆಂಗಳೂರು : ರಾಹುಲ್ ಗಾಂಧಿ ಅವರ ನಾಯಕತ್ವದಿಂದ ಪಕ್ಷಕ್ಕೆ ಒಳಿತಾಗಿರುವುದೇ ಜಾಸ್ತಿ ಎಂದು ಪಕ್ಷದ ಹಿರಿಯ ನಾಯಕ ವೀರಪ್ಪ ಮೊಯಿಲಿ ಹೇಳಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕೇವಲ 52 ಸ್ಥಾನ ಗಳಿಸಿದ್ದು 18 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ನಾಮಾವಶೇಷವಾಗಿದೆ.
ಈಗಿನ ಸನ್ನಿವೇಶದಲ್ಲಿ ರಾಹುಲ್ ಗಾಂಧಿ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬಾರದು. 2019ರ ಲೋಕಸಭಾ ಚುನಾವಣೆಯಲ್ಲಿ ರಾಹುಲ್ ಅವರು ಕಾಂಗ್ರೆಸ್ ಪಕ್ಷವನ್ನು ಹೆಚ್ಚು ಪ್ರಸ್ತುತಗೊಳಿಸಿದ್ದಾರೆ. ಈ ಸನ್ನಿವೇಶದಲ್ಲಿ ಪಕ್ಷದ ನಾಯಕತ್ವವನ್ನು ತ್ಯಜಿಸಿ ಓಡಿ ಹೋಗುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ಮೊಯಿಲಿ ಮಾಧ್ಯಮದೊಂದಿಗೆ ಮಾತನಾಡುತ್ತಾ ಹೇಳಿದರು.
ರಾಹುಲ್ ಗಾಂಧಿ ಅವರು ಚುನಾವಣೆಯ ವೇಳೆ ತೋರಿಸಿದ್ದ ಜೋಶ್ ನಲ್ಲೇ ಮುಂದುವರಿಯಬೇಕು; ಹೊಣೆಗಾರಿಕೆಯಿಂದ ನುಣುಚಿ ಕೊಳ್ಳಬಾರದು ಎಂದು ಮೊಯಿಲಿ ಹೇಳಿದರು.
You seem to have an Ad Blocker on.
To continue reading, please turn it off or whitelist Udayavani.