![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 12, 2023, 12:27 PM IST
ದೇವದುರ್ಗ(ರಾಯಚೂರು): ಪತ್ನಿ ಮತ್ತೊಬ್ಬನ ಜತೆ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ತನ್ನೆರಡು ಮಕ್ಕಳನ್ನೆ ತಂದೆ ಕತ್ತು ಹಿಸುಕಿ ಕೊಲೆಗೈದ ಘಟನೆ ದೇವದುರ್ಗ ಪುರಸಭೆ ವ್ಯಾಪ್ತಿಯ ಜಕ್ಲೇರದೊಡ್ಡಿಯಲ್ಲಿ ಶನಿವಾರ ತಡರಾತ್ರಿ ನಡೆದಿದೆ.
ನಿಂಗಯ್ಯ ಎಂಬಾತ ತನ್ನ ಮಕ್ಕಳಾದ ಶಿವರಾಜ (5), ರಾಘವೇಂದ್ರನನ್ನು (3) ಕೊಲೆ ಮಾಡಿದ್ದಾನೆ.
ಪತ್ನಿ ಬೇರೆ ವ್ಯಕ್ತಿ ಜತೆ ಸಂಬಂಧ ಹೊಂದಿದ್ದು, ಈ ಮಕ್ಕಳು ನನ್ನವಲ್ಲ ಎಂದು ಜಗಳವಾಡುತ್ತಿದ್ದ. ಅಲ್ಲದೇ ಹೆಂಡತಿ ಮಕ್ಕಳನ್ನು ಕೊಲ್ಲುವುದಾಗಿ ಬೆದರಿಕೆ ಹಾಕುತ್ತಿದ್ದ ಎನ್ನಲಾಗಿದೆ.
ಈ ವಿಷಯಕ್ಕೆ ಹೆದರಿ ಹೆಂಡತಿ ತವರಿಗೆ ಹೋದಾಗ ಮಕ್ಕಳನ್ನು ಮಾತ್ರ ಕರೆದುಕೊಂಡು ಬಂದು ಈ ಕೃತ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.
ಪತ್ನಿ ನೀಡಿದ ದೂರಿನ ಮೇರೆಗೆ ದೇವದುರ್ಗ ಪೋಲಿಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.