ಪ್ರೇರಣೆ ನೀಡಿದ ಪ್ರವಚನ-ಆನ್‌ಲೈನ್‌ನಿಂದ ಗಡಿ ದಾಟಿದ ರಾಯಚೂರು ಮಾವು!

ರಾಜ್ಯದ 180 ರೈತರು ಈ ವೆಬ್‌ಸೈಟ್‌ ನಲ್ಲಿದ್ದಾರೆ

Team Udayavani, May 29, 2024, 5:52 PM IST

ಪ್ರೇರಣೆ ನೀಡಿದ ಪ್ರವಚನ-ಆನ್‌ಲೈನ್‌ನಿಂದ ಗಡಿ ದಾಟಿದ ರಾಯಚೂರು ಮಾವು!

■ ಉದಯವಾಣಿ ಸಮಾಚಾರ
ರಾಯಚೂರು: ಒಂದು ಕಾಲದಲ್ಲಿ ಬೀದಿ ಬದಿ ದಿನವಿಡೀ ವ್ಯಾಪಾರ ಮಾಡಿದರೂ 800-1000 ರೂ. ದುಡಿಯಲು ಕಷ್ಟಪಡುತ್ತಿದ್ದ ವ್ಯಕ್ತಿ ಆನ್‌ಲೈನ್‌ ವ್ಯವಸ್ಥೆಯಿಂದ ಕೇವಲ ಎರಡು ತಿಂಗಳಲ್ಲಿ ಬರೋಬ್ಬರಿ 2,400 ಕೆ.ಜಿ ಹಣ್ಣು ಮಾರಾಟ ಮಾಡಿದ್ದಾನೆ!

ತಾಲೂಕಿನ ಮಂಡಲಗೇರಾ ಗ್ರಾಮದ ರೈತ ಗುಡಿಪಾಡು ಆಂಜನೇಯ ತನ್ನ ನಾಲ್ಕೂವರೆ ಎಕರೆ ಜಮೀನಿನಲ್ಲಿ ಉತ್ತಮ ಇಳುವರಿ ಜತೆಗೆ ಲಾಭದ ಮುಖ ನೋಡಿದ್ದಾನೆ. ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮ ಅಭಿವೃದ್ಧಿಪಡಿಸಿದ “ಕರ್‌ ಸಿರಿ’ ಆನ್‌ಲೈನ್‌ ತಂತ್ರಾಂಶವೇ ಇದಕ್ಕೆ ಮುಖ್ಯ ಕಾರಣ. ರಾಜ್ಯದ 180 ರೈತರು ಈ ವೆಬ್‌ಸೈಟ್‌ ನಲ್ಲಿದ್ದಾರೆ. ಬೇರೆ ರೈತರು 400 ಕೆಜಿವರೆಗೆ ಮಾರಿದರೆ ಆಂಜನೇಯ 2,400 ಕೆಜಿ ಮಾರಾಟ ಮಾಡಿದ್ದಾರೆ.

ಪ್ರೇರಣೆ ನೀಡಿದ ಪ್ರವಚನ: ಐವರು ಸಹೋದರಿಯರನ್ನು ನೋಡಿಕೊಳ್ಳಬೇಕಾದ ಹೊಣೆ ಆಂಜನೇಯನ ಮೇಲಿತ್ತು. ಡಿಪ್ಲೊಮಾ ಮುಗಿಸಿ ಖಾಸಗಿ ಕಂಪನಿಯಲ್ಲಿ 25 ಸಾವಿರ ವೇತನಕ್ಕೆ ಏಳು ವರ್ಷ ಕೆಲಸ ಮಾಡಿದ್ದ. ಇಷ್ಟೆಲ್ಲ ಕಷ್ಟಪಡುವುದಕ್ಕಿಂತ ಏನಾದರೂ ಮಾಡಬೇಕೆಂಬ ಚಿಂತನೆಯಿತ್ತು. ಆಗ ಪ್ರೇರಣೆಯಾಗಿದ್ದೇ ಮಹಾರಾಷ್ಟ್ರದ ಕಾಡಸಿದ್ಧೇಶ್ವರ ಮಠದ ಶ್ರೀಗಳ ಪ್ರವಚನ. ಅವರನ್ನು ಭೇಟಿಯಾದಾಗ ನಿನ್ನಷ್ಟು ಸಿರಿವಂತ ಯಾರಿಲ್ಲ. ಅಲ್ಪ ಭೂಮಿಯಲ್ಲೇ ಸಮಗ್ರ ಕೃಷಿ ಮಾಡು ಎಂದು ಉತ್ಸಾಹ ತುಂಬಿದರು. ಅವರ ಮಾತಿನಿಂದ ಪ್ರೇರಣೆ ಪಡೆದು ಈ ಮಟ್ಟಕ್ಕೆ ಬೆಳೆದಿರುವುದು ವಿಶೇಷ.

ಸಿಂಗಾಪುರದಲ್ಲೂ ಬೇಡಿಕೆ: ಇರುವ ನಾಲ್ಕೂವರೆ ಎಕರೆ ಜಮೀನಿನಲ್ಲಿ ಬೋರ್‌ವೆಲ್‌ ಹಾಕಿಸಿದ್ದು, ಸುಮಾರು 600 ಮಾವಿನ ಮರ ನೆಡಲಾಗಿದೆ. ಬಂಗನ್‌ಪಲ್ಲಿ, ಮಲ್ಲಿಕಾ ಹಾಗೂ ಕೇಸರಿ ತಳಿಯ ಮಾವು ಬೆಳೆಯಲಾಗುತ್ತಿದೆ. ಮಾವು ಮೇಳ ನಡೆದಲ್ಲೆಲ್ಲ ಆಂಜನೇಯ ಹೋಗುತ್ತಿದ್ದರು. ಇವರ ಮಾವಿಗೆ ಉತ್ತಮ ಬೇಡಿಕೆ ಇರುವುದನ್ನು ಗಮನಿಸಿದ ಮಾವು ಮಂಡಳಿ ಅಧಿಕಾರಿಗಳು “ಕರ್‌ ಸಿರಿ’ ವೆಬ್‌ ಸೈಟ್‌ಗೆ ಸೇರಿಕೊಳ್ಳುವಂತೆ ಸಲಹೆ ನೀಡಿದರು.

ಆದರೆ, ಅದರ ಬಗ್ಗೆ ಕಿಂಚಿತ್ತೂ ಮಾಹಿತಿ ಇಲ್ಲದ ಆಂಜನೇಯ ಏನು ಮಾಡಬೇಕು ಎಂದು ತೋಚದಾದಾಗ ಅಧಿ ಕಾರಿಗಳೇ ಮಾರ್ಗದರ್ಶನ ನೀಡಿ “ಹರಿದ್ವಾರ್‌ ಆರ್ಗನಿಕ್‌ ಎಂಟರ್‌ಪ್ರೈಸೆಸ್‌’ ಮೂಲಕ “ಕರ್‌ ಸಿರಿ’ ತಂತ್ರಾಂಶದಲ್ಲಿ ಹೆಸರು
ನೋಂದಾಯಿಸಿಕೊಟ್ಟರು.

ಅದರಲ್ಲಿ ಮಾವಿನ ತಳಿಗಳ ಸಹಿತ ಎಲ್ಲ ಮಾಹಿತಿ, ವಿಳಾಸ ಪ್ರಕಟಿಸಿದ್ದಾರೆ. ಹಣ್ಣುಗಳ ರುಚಿಗೆ ಜನ ಮಾರು ಹೋಗಿದ್ದು, ಸಾಕಷ್ಟು ಬೇಡಿಕೆ ಬಂದಿವೆ. ರಾಜ್ಯದ ಬಹುತೇಕ ಜಿಲ್ಲೆಗಳಿಗೆ ಕಳುಹಿಸಲಾಗಿದೆ. ಮಂಗಳೂರಿಗೆ ಕಳುಹಿಸಿದ ಹಣ್ಣನ್ನು ಅಲ್ಲಿನ ವ್ಯಾಪಾರಿ ಸಿಂಗಾಪುರಗೆ ಕಳುಹಿಸಿದ್ದು ಸಾಕಷ್ಟು ಬೇಡಿಕೆ ಬಂದಿದೆ. ಬೆಂಗಳೂರಿನಿಂದ ಕೊಲ್ಕತ್ತಾ ಸೇರಿದಂತೆ ಬೇರೆ ಭಾಗಗಳಿಗೂ ರಫ್ತಾಗುತ್ತಿದೆ.

ಪ್ಯಾಕಿಂಗ್‌ ಕೋರಿಯರ್‌ ವೆಚ್ಚ ಸೇರಿಸಿ ಒಂದು ಕೆ.ಜಿ 150 ರೂ. ಶುಲ್ಕ ವಿಧಿಸುತ್ತಿದ್ದಾರೆ ಆಂಜನೇಯ. ಮೂರು ಕೆ.ಜಿಯಿಂದ 40 ಕೆ.ಜಿವರೆಗೆ ಮಾರಾಟ ಮಾಡಿದ್ದಾರೆ. ಅಂಚೆ ಇಲಾಖೆ ಮೂಲಕ ಗ್ರಾಹಕರ ಮನೆ ಬಾಗಿಲಿಗೆ ತಲುಪಿಸಿದ್ದಾರೆ.

ಜಿಲ್ಲಾಧಿಕಾರಿ ಪ್ರೋತ್ಸಾಹ
ನೀನು ಬೆಳೆದ ಹಣ್ಣುಗಳನ್ನು ಗಣ್ಯರಿಗೆ ತಲುಪಿಸಿ ಮಾರುಕಟ್ಟೆ ಸೃಷ್ಟಿಸಿಕೊಳ್ಳುವಂತೆ ಮಹಾರಾಷ್ಟ್ರದ ಕಾಡಸಿದ್ಧೇಶ್ವರರು ಸಲಹೆ ನೀಡಿದ್ದರು. ಅದರಂತೆ ಮಾಡಿದ್ದರಿಂದ ಸ್ಥಳೀಯವಾಗಿ ಬೇಡಿಕೆ ಸೃಷ್ಟಿಯಾಯಿತು. ಜತೆಗೆ ಸಾವಯವ ಪದ್ಧತಿಯಡಿ ಬೆಳೆದ ಹಣ್ಣು ಎಂದು ಬ್ಯಾನರ್‌ ಮಾಡಿಸಿ ಡಿಸಿ ಮನೆ ಪಕ್ಕದಲ್ಲೇ ಮಾರಾಟ ಮಾಡುತ್ತಿದ್ದರು. ಇದನ್ನು ಗಮನಿಸಿದ ಆಗಿನ ಜಿಲ್ಲಾಧಿಕಾರಿ ವೆಂಕಟೇಶ ಕುಮಾರ ಖುದ್ದಾಗಿ ಬಂದು ವಿಚಾರಣೆ ಮಾಡಿದ್ದರು. ಮಾವು ಮೇಳಗಳಲ್ಲಿ ಪಾಲ್ಗೊಳ್ಳಲು ಅನುಕೂಲ ವಾಗಲು ಪ್ರಮಾಣಪತ್ರ ನೀಡಿದರು. ಅಲ್ಲಿಂದ ಆಂಜನೇಯ ಬೆಳೆದ ಮಾವುಗಳಿಗೆ ಬೇಡಿಕೆ ಹೆಚ್ಚಿತು.

ನಾನು ಬೆಳೆದ ಹಣ್ಣಿಗೆ ರಾಜ್ಯ ಮಾತ್ರವಲ್ಲದೇ ವಿದೇಶದಿಂದಲೂ ಬೇಡಿಕೆ ಇದೆ. ಈ ಬಾರಿ ಎರಡೂವರೆ ಟನ್‌ ಮಾವು ಮಾರಾಟವಾಗಿದೆ. ಇದು ನನ್ನೊಬ್ಬನಿಂದ ಸಾಧ್ಯವಾಗಿಲ್ಲ. ಕುಟುಂಬ ಸದಸ್ಯರ ಸಹಕಾರದಿಂದ ಮಾಡುತ್ತಿದ್ದೇವೆ.
ಗುಡಿಪಾಡು ಆಂಜನೇಯ, ಮಾವು ಬೆಳೆಗಾರ

ಟಾಪ್ ನ್ಯೂಸ್

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Mumbai: ಭಯೋತ್ಪಾದಕ ದಾಳಿ ಸಾಧ್ಯತೆ-ಗುಪ್ತಚರ ಇಲಾಖೆ: ಮುಂಬೈನಲ್ಲಿ‌ ಬಿಗಿ ಪೊಲೀಸ್ ಭದ್ರತೆ

Belagavi; Letter to CM on division of Belgaum district after Dussehra: Hebbalkar

Belagavi; ದಸರಾ ಬಳಿಕ ಬೆಳಗಾವಿ ಜಿಲ್ಲೆ ವಿಭಜನೆ ಕುರಿತು ಸಿಎಂಗೆ ಪತ್ರ: ಹೆಬ್ಬಾಳಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

Maski: ಮೂತ್ರ ವಿಸರ್ಜನೆಗೆ ಶಾಲಾ‌ ಹಳೇ ಕೊಠಡಿಯೇ ಗತಿ-ಕ್ಯಾರೆ ಎನ್ನದ ಅಧಿಕಾರಿಗಳು

3-raichur

Raichur: ಚಿತ್ರಾನ್ನ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ

Mantralya-Shree

Thirupathi Laddu: ದೇಗುಲಗಳು ಸರಕಾರದ ಹಿಡಿತದಿಂದ ಮುಕ್ತವಾಗಲಿ: ಶ್ರೀಸುಬುಧೇಂದ್ರ ಸ್ವಾಮೀಜಿ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Manvi: ಬುದ್ಧಿಮಾಂದ್ಯ ಮಹಿಳೆ ಮೇಲೆ ಅತ್ಯಾ*ಚಾರ

Yermarus: Private bus caused end of 150 sheeps

Yermarus: ಖಾಸಗಿ ಬಸ್ ಹರಿದು 150 ಕುರಿಗಳ ಮಾರಣಹೋಮ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

Mangaluru: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ… ಅಪಾಯದಿಂದ ಪಾರಾದ ಪ್ರಯಾಣಿಕರು

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

SIT: ಶಾಸಕ ಮುನಿರತ್ನ ನಿವಾಸದ ಮೇಲೆ ಎಸ್‌ ಐಟಿ ತಂಡ ದಾಳಿ, ಸಾಕ್ಷ್ಯಾಧಾರಗಳ ಸಂಗ್ರಹ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

ಭಾರತದಲ್ಲಿ ಪಾಕ್‌ ಸಿನಿಮಾ ದ ಲೆಜೆಂಡ್‌ ಆಫ್‌ ಮೌಲಾ ಜಟ್ ಪ್ರದರ್ಶನಕ್ಕೆ ಅವಕಾಶವಿಲ್ಲ: ಕೇಂದ್ರ

eshwarappa

Shimoga; ನಿಮಗೊಂದು ಕಾನೂನು ನಮಗೊಂದು ಕಾನೂನು ಇದೆಯೇ..: ಸಿದ್ದರಾಮಯ್ಯ ವಿರುದ್ದ ಈಶ್ವರಪ್ಪ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Hosur: ಟಾಟಾ ಎಲೆಕ್ಟ್ರಾನಿಕ್ಸ್ ಘಟಕದಲ್ಲಿ ಅಗ್ನಿ ಅವಘಡ… ಕೋಟ್ಯಂತರ ಮೌಲ್ಯದ ಸೊತ್ತು ನಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.