![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Mar 31, 2023, 11:37 AM IST
ಹುಣಸೂರು: ವರ್ಷದ ಮೊದಲ ಬಿರುಗಾಳಿ ಸಹಿತ ಮಳೆಗೆ ತಾಲೂಕಿನ ಬಿಳಿಕೆರೆ ಹೋಬಳಿಯ ಗದ್ದಿಗೆ ಭಾಗದಲ್ಲಿ ಅಪಾರ ಬಾಳೆ, ತೆಂಗಿನ ಮರಗಳು ಉರುಳಿ ಬಿದ್ದಿವೆ. ಅನೇಕ ಗುಡಿಸಲುಗಳಿಗೆ ಹಾನಿಯಾಗಿ ಲಕ್ಷಾಂತರ ರೂ. ನಷ್ಟ ಉಂಟು ಮಾಡಿದೆ.
ಬುಧವಾರ ಸಂಜೆ ಬೀಸಿದ ಗುಡುಗು ಸಹಿತ ಬಿರುಗಾಳಿ ಮಳೆಗೆ ನೂರಾರು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಫಲಕ್ಕೆ ಬಂದಿರುವ ನೇಂದ್ರ ಮತ್ತು ಏಲಕ್ಕಿ ಬಾಳೆ ಕಂದು ಅರ್ಧಕ್ಕೆ ಮುರಿದು ಗೊನೆ ಸಹಿತ ನೆಲಕಚ್ಚಿದ್ದರೆ, ನೂರಾರು ತೆಂಗಿನ ಮರಗಳು ಬುಡ ಸಹಿತ ಉರುಳಿ ಬಿದ್ದಿವೆ. ಜಮೀನಿನಲ್ಲಿದ್ದ ಮರಗಳು ನೆಲಕ್ಕುರುಳಿವೆ. ಶುಂಠಿ ಜಮೀನಿನಲ್ಲಿ ಹಾಕಿಕೊಂಡಿದ್ದ ಹತ್ತಾರು ಶೆಡ್ಗಳು ಬಿರುಗಾಳಿಗೆ ಹಾರಿ ಹೋಗಿವೆ.
ಗದ್ದಿಗೆ ಬಳಿಯ ಸಂಜೀವ ನಗರದ ಹಲವಾರು ರೈತರಯ ಸೇರಿದಂತೆ ಹನುಮಂತಪುರ, ಗಡಿಯಂಚಿನ ಕೋಟೆ ತಾಲೂಕಿನ ಚಾಮಳ್ಳಿ ಹುಂಡಿ, ಷರೀಫ್ ಕಾಲೋನಿಗಳಲ್ಲಿ ನೂರಕ್ಕೂ ಹೆಚ್ಚು ರೈತರ ಜಮೀನುಗಳ ಬೆಳೆದಿದ್ದ ಬಾಳೆ, ತೆಂಗಿನ ಮರಗಳು ಉರುಳಿ ಬಿದ್ದು ಅನಾಹುತ ಸೃಷ್ಟಿಸಿದೆ.
ರಾಜ್ಯ ತೋಟಗಾರಿಕೆ ಫೆಡರೇಷನ್ನ ಉಪಾಧ್ಯಕ್ಷ ಸೂರ್ಯಕುಮಾರ್ರಿಗೆ ಸೇರಿದ ಫಲಕ್ಕೆ ಬಂದಿದ್ದ ತೆಂಗಿನ ಮರಗಳು ಅರ್ಧಕ್ಕೆ ಮುರಿದು ಬಿದ್ದಿವೆ. ಶುಂಠಿ ಹೊಲಗಳಲ್ಲಿ ತಾತ್ಕಾಲಿಕವಾಗಿ ನಿರ್ಮಿಸಿಕೊಂಡಿದ್ದ ಶೆಡ್ಗಳನ್ನು ಬಿರುಗಾಳಿ ಹೊತ್ತೊಯ್ದು, ಪದಾರ್ಥಗಳಿಗೆ ಹಾನಿಯಾಗಿದೆ.
ಇಷ್ಟೆಲ್ಲಾ ಅನಾಹುತವಾಗಿದ್ದರೂ ಚುನಾವಣಾ ಕಾರ್ಯದಲ್ಲಿ ಬ್ಯುಸಿಯಾಗಿರುವ ಕಂದಾಯಾಧಿಕಾರಿಗಳು ಘಟನಾ ಸ್ಥಳಕ್ಕೆ ಭೇಟಿ ನೀಡದೆ ರೈತರು ಪರಿಹಾರ ಪಡೆಯುವುದು ಹೇಗೆಂಬ ಆಂತಕದಲ್ಲಿದ್ದಾರೆ.
ಜನ ಪ್ರತಿನಿಧಿಗಳು ಚುನಾವಣಾ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡದಂತಾಗಿದೆ. ಇನ್ನಾದರೂ ಕಂದಾಯ ಇಲಾಖೆ ಅಧಿಕಾರಿಗಳು ಹಾನಿ ಸ್ಥಳಕ್ಕೆ ಭೇಟಿ ಇತ್ತು ಸೂಕ್ತ ಪರಿಹಾರ ಕೊಡಿಸಬೇಕೆಂದು ತೋಟದ ಬೆಳೆಗಾರರು ಆಗ್ರಹಿಸಿದ್ದಾರೆ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.