Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ
ಪಂಪ್ವೆಲ್ ವೃತ್ತದ ಸರ್ವೀಸ್ ರಸ್ತೆ, ಫ್ಲೈ ಓವರ್ ಕೆಳ ಭಾಗದಲ್ಲಿ ಕೃತಕ ನೆರೆ ಸೃಷ್ಟಿ
Team Udayavani, Oct 7, 2024, 2:08 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಬಿರುಸು ಪಡೆದುಕೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರವಿವಾರ ಸಂಜೆ ಬಳಿಕ ಗುಡುಗು ಸಹಿತ ಭಾರೀ ಮಳೆಯಾಗಿದೆ.
ವಾಡಿಕೆಯಂತೆ ಹಿಂಗಾರು ಆರಂಭಗೊಂಡಿದ್ದು, ಕೆಲವು ದಿನಗಳಲ್ಲಿ ಮಳೆಯ ಬಿರುಸು ತುಸು ಕಡಿಮೆ ಇತ್ತು. ರವಿವಾರ ಸಂಜೆಯವರೆಗೆ ಮೋಡ, ಬಿಸಿಲಿನಿಂದ ಕೂಡಿದ ವಾತಾವರಣ ಇತ್ತು. ಸಂಜೆ ಬಳಿಕ ಮಳೆ ಆರಂಭಗೊಂಡಿದ್ದು, ಕೆಲವೆಡೆ ಹಾನಿ ಸಂಭವಿಸಿದೆ.
ಮಂಗಳೂರು ಸೇರಿದಂತೆ ಪುತ್ತೂರು, ಬೆಳ್ಳಾರೆ, ಸುಳ್ಯ, ಉಪ್ಪಿನಂಗಡಿ, ಸುಳ್ಯ, ಬೆಳ್ತಂಗಡಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಬಂಟ್ವಾಳ ತಾಲೂಕಿನ ಕೇಪುನಲ್ಲಿ ಮನೆಗೆ ಸಿಡಿಲು ಬಡಿದು ಹಾನಿ, ನರಿಕೊಂಬು ಗ್ರಾಮದಲ್ಲಿ ತೆಂಗಿನಮರ ಬಿದ್ದು ಹಾನಿಯಾಗಿದೆ.
ಪಂಪ್ವೆಲ್, ತಗ್ಗು ಪ್ರದೇಶ ಜಲಾವೃತ
ಪಂಪ್ವೆಲ್ ವೃತ್ತದ ಸರ್ವೀಸ್ ರಸ್ತೆ, ಫ್ಲೈ ಓವರ್ ಕೆಳ ಭಾಗದಲ್ಲಿ ಕೃತಕ ನೆರೆ ಸೃಷ್ಟಿಯಾಗಿ ವಾಹನ ಸಂಚಾರಕ್ಕೆ ತೊಂದರೆ ಉಂಟಾಯಿತು. ಪ್ರಮುಖ ಜಂಕ್ಷನ್ ಇದಾದ ಕಾರಣ, ಸಂಜೆ ವೇಳೆ ಸಾಮಾನ್ಯವಾಗಿ ವಾಹನ ದಟ್ಟಣೆ ಇರುತ್ತದೆ. ನವರಾತ್ರಿ ಹಿನ್ನೆಲೆಯಲ್ಲಿಯೂ ನಗರದಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಮಳೆಯಿಂದಾಗಿ ಸಮಸ್ಯೆಗೆ ಕಾರಣವಾಯಿತು. ಅದೇ ರೀತಿ ನಗರದ ಬಜಾಲ್ ಸಹಿತ ಕೆಲವು ಕಡೆ ರಸ್ತೆಯಲ್ಲಿ ಕೃತಕ ನೀರು ನಿಂತು ಸಮಸ್ಯೆಗೆ ಕಾರಣವಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.