Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

ಬಿಳಿನೆಲೆಯಲ್ಲಿ ಹೆದ್ದಾರಿಗುರುಳಿದ ಮರ

Team Udayavani, May 9, 2024, 1:00 AM IST

Rain ಬೆಳ್ತಂಗಡಿಯ ಕೆಲವೆಡೆ ಗಾಳಿ- ಮಳೆಯಿಂದ ಮರ ಬಿದ್ದು ಹಾನಿ

ಬೆಳ್ತಂಗಡಿ: ತಾಲೂಕಿನ ದಿಡುಪೆ ಸುತ್ತಮುತ್ತ, ಶಿಶಿಲ, ಧರ್ಮಸ್ಥಳ ಭಾಗದಲ್ಲಿ ಬುಧವಾರ ಸಂಜೆ ಗಾಳಿ ಸಹಿತ ಮಳೆಯಾಗಿದ್ದು, ಹಲವು ಕಡೆಗಳಲ್ಲಿ ಮನೆ, ರಸ್ತೆಗೆ ಮರ ಬಿದ್ದು ಹಾನಿಯಾಗಿದೆ.

ಶಿಶಿಲ ಗ್ರಾಮದ ಉಮ್ಮಂತಿಮಾರಿನಲ್ಲಿ ರಸ್ತೆಗೆ ಮರ ಬಿದ್ದು ಸಂಚಾರಕ್ಕೆ ತೊಂದರೆಯಾಯಿತು. ಕೊಳಂಬೆಯಲ್ಲಿಯೂ ಮರಗಳು ರಸ್ತೆಗೆ ಬಿದ್ದಿವೆ. ವೈಕುಂಠಪುರ ಕಾಲನಿಯ ಸೇಸಪ್ಪ ಮಲೆಕುಡಿಯ ಅವರ ಮನೆ ಮೇಲೆ ಮರ ಬಿದ್ದು ಹಂಚಿನ ಮೇಲ್ಛಾವಣಿ ಸಂಪೂರ್ಣ ಹಾನಿಗೀಡಾಗಿದೆ.

ಅವರ ಮಗನಿಗೆ ಶೀಟ್‌ನ ಭಾಗ ಬಿದ್ದು ಗಾಯವಾಗಿದೆ. ಮನೆಮಂದಿ ಪಕ್ಕದಲ್ಲಿರುವ ಸಂಬಂಧಿಕರ ಮನೆಯಲ್ಲಿ ಆಶ್ರಯ ಪಡೆದಿದ್ದಾರೆ.

ಶೌರ್ಯ ವಿಪತ್ತು ನಿರ್ವಹಣ ತಂಡದ ಸದಸ್ಯರು ಮತ್ತು ಸ್ಥಳೀಯ ಯುವಕರ ಸಹಕಾರದಿಂದ ಮರ ತೆರವುಗೊಳಿಸಲಾಗಿದೆ. ಶಿಶಿಲ ಗ್ರಾ.ಪಂ. ಅಧ್ಯಕ್ಷ ಸುಧಿನ್‌ ಶಿಶಿಲ, ಗ್ರಾಮ ಸಹಾಯಕ ವೀರಪ್ಪ ಗೌಡ, ಸಿಬಂದಿ ಸುಂದರ ಶಿಶಿಲ ಭೇಟಿ ಸ್ಥಳಕ್ಕೆ ನೀಡಿದರು.

ಬಿಳಿನೆಲೆಯಲ್ಲಿ ಹೆದ್ದಾರಿಗುರುಳಿದ ಮರ
ಸುಳ್ಯ / ಸುಬ್ರಹ್ಮಣ್ಯ: ಕಡಬ ತಾಲೂಕಿನ ವಿವಿಧೆಡೆ ಹಾಗೂ ಸುಬ್ರಹ್ಮಣ್ಯ ಪರಿಸರದಲ್ಲಿ ಬುಧವಾರ ಸಂಜೆ ಗುಡುಗು ಸಹಿತ ಗಾಳಿ ಮಳೆಯಾಗಿದ್ದು ಬಿಳಿನೆಲೆಯಲ್ಲಿ ಹೆದ್ದಾರಿಗೆ ಹಾಗೂ ಕೊಂಬಾರು-ಸುಂಕದಕಟ್ಟೆ ರಸ್ತೆಯಲ್ಲಿ ಮರ ಬಿದ್ದು ರಸ್ತೆ ಸಂಚಾರಕ್ಕೆ ತಡೆ ಉಂಟಾಯಿತು.

ಹಲವು ವಿದ್ಯುತ್‌ ಕಂಬಗಳು, ಲೈನ್‌ಗಳಿಗೆ ಹಾನಿಯುಂಟಾಗಿದೆ. ಸುಬ್ರಹ್ಮಣ್ಯ ಪರಿಸರದ ಸುಬ್ರಹ್ಮಣ್ಯ, ಐನೆಕಿದು, ಹರಿಹರ, ಕೊಲ್ಲಮೊಗ್ರು, ಕಲ್ಮಕಾರು ಪರಿಸರದಲ್ಲಿ ಮಳೆಯಾಗಿದೆ. ಅರಣ್ಯ ಇಲಾಖೆ ಹಾಗೂ ಮೆಸ್ಕಾಂ ಸಿಬಂದಿ ಸ್ಥಳೀಯರ ನೆರವಿನೊಂದಿಗೆ ಮರವನ್ನು ರಸ್ತೆಯಿಂದ ತೆರವುಗೊಳಿಸಿ ವಾಹನ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ವಿವಿಧೆಡೆ ಹಾನಿ
ಸಂಪಾಜೆ ದೊಡ್ಡಡ್ಕದಲ್ಲಿ ರಾಮಚಂದ್ರ ಅವರ ಮನೆಗೆ ಮನೆಗೆ ಮರ ಬಿದ್ದು ಮನೆ, ಶೌಚಾಲಯಕ್ಕೆ ಹಾನಿಯಾಗಿದೆ. ಬೈಲೆಯ ಟೈಲರ್‌ ನಾಗೇಶ್‌ ಅವರ ಮನೆಗೆ ಮರ ಬಿದ್ದು ಹಾಣಿ, ದೊಡ್ಡಡ್ಕದ ಉಮ್ಮರ್‌ ಅವರ ಅಂಗಡಿಗೆ ಮರದ ಕೊಂಬೆ ಬಿದ್ದು ಹಾನಿ ಸಂಭವಿಸಿದೆ. ಎಣ್ಮೂರಿನಲ್ಲಿ ಗಾಳಿಗೆ ಮರ ಬಿದ್ದು ಅಲ್ಲಿಲ್ಲಿ ಹಾನಿ ಸಂಭವಿಸಿದೆ.

ಜೀಪು, ರಿಕ್ಷಾ ಪಾರು
ಮರ ಮುರಿದು ಬೀಳುವ ಮುಂಚೆ ಕೊಂಬಾರಿನ ಚಿದಾನಂದ ದೇವುಪಾಲ್‌ ತನ್ನ ಜೀಪಿನಲ್ಲಿ ಕೊಂಬಾರಿಗೆ ಹೊರಟಿದ್ದರು. ಅವರ ಹಿಂದೆಯೇ ಭವಾನಿ ಶಂಕರ್‌ ತನ್ನ ಆಟೋ ರಿಕ್ಷಾದಲ್ಲಿ ಸಾಗುತ್ತಿದ್ದರು. ಜೀಪು ಸಾಗಿ ದಾಟಿ ಹೋದ ಕೆಲವೇ ಕ್ಷಣದಲ್ಲಿ ರಸ್ತೆಗೆ ಮರ ಬಿದ್ದಿದೆ. ಹಿಂದಿದ್ದ ರಿಕ್ಷಾ ಚಾಲಕ ಮರ ಬೀಳುವುದನ್ನು ಗಮನಿಸಿ ವಾಹನವನ್ನು ತತ್‌ಕ್ಷಣ ನಿಯಂತ್ರಿಸಿದ ಕಾರಣ ಅಪಾಯದಿಂದ ಪಾರಾಗಿದ್ದಾರೆ.

ಮರ ಬಿದ್ದು ಮನೆಗೆ ಹಾನಿ
ಅರಂತೋಡು: ಸಂಪಾಜೆ ಭಾಗದಲ್ಲಿ ಉತ್ತಮ ಮಳೆಯಾಗಿದೆ. ಗುಡುಗು, ಗಾಳಿ ಸಹಿತ ಮಳೆಯಾಗಿರುವ ಬಗ್ಗೆ ವರದಿಯಾಗಿದೆ. ಸಂಪಾಜೆ ದೊಡ್ಡಡ್ಕದ ರಾಮಚಂದ್ರ ಅವರ ಮನೆಗೆ ಮರ ಬಿದ್ದು ಹಾನಿಯಾಗಿದೆ. ಇಲ್ಲಿ ಮನೆ, ಶೌಚಾಲಯಕ್ಕೆ ಹಾನಿಯಾಗಿದೆ. ಬೈಲೆಯ ಟೈಲರ್‌ನಾಗೈಶ ಎಂಬವರ ಮನೆಗೆ ಮರ ಬಿದ್ದು ಹಾನಿ ಸಂಭವಿಸಿದೆ. ದೊಡ್ಡಡ್ಕದ ಉಮ್ಮರ್‌ ಅವರ ಅಂಗಡಿಗೆ ಮರದ ಕೊಂಬೆ ಮುರಿದು ಬಿದ್ದಿದೆ. ಅರಂತೋಡು, ಪೆರಾಜೆ, ತೊಡಿಕಾನ ಕಲ್ಲುಗುಂಡಿ,ಆಲೆಟ್ಟಿ, ಅಜ್ಜಾವರ ಇತರ ಭಾಗದಲ್ಲಿ ಮಳೆಯಾಗಿದೆ.

ಕೊಡಗು: ಆಲಿಕಲ್ಲು
ಮಳೆಯಿಂದ ಹಾನಿ
ಮಡಿಕೇರಿ: ಕೊಡಗು ಜಿಲ್ಲೆಯ ವಿವಿಧೆಡೆ ಬುಧವಾರ ಉತ್ತಮ ಮಳೆಯಾಗಿದೆ. ಮಡಿಕೇರಿ, ಸೋಮವಾರಪೇಟೆ, ಕುಶಾಲ ನಗರ, ಸುಂಟಿಕೊಪ್ಪ, ನಾಪೋಕ್ಲು ಸೇರಿದಂತೆ ವಿವಿಧೆಡೆ ಗಾಳಿ ಸಹಿತ ಮಳೆ ಸುರಿದಿದೆ.

ಮಡಿಕೇರಿ ತಾಲ್ಲೂಕಿನ ಕೆಲವು ಗ್ರಾಮಗಳು ಹಾಗೂ ನಗರ ವ್ಯಾಪಿಯಲ್ಲಿ ಉತ್ತಮ ಮಳೆ ಯಾಗಿದೆ. ಹಲವು ಗ್ರಾಮಗಳಲ್ಲಿ ಆಲಿಕಲ್ಲು ಮಳೆಯೂ ಸುರಿದಿದೆ. ಇದರಿಂದ ಹಸಿಮೆಣಸು ಬೆಳೆಗೆ ಹಾನಿಯಾಗಿದೆ. ನಾಪೋಕ್ಲು ಹಾಗೂ ಚೆರಿಯಪರಂಬು ವ್ಯಾಪ್ತಿಯಲ್ಲಿ ಭಾರೀ ಗಾಳಿ, ಗುಡುಗು ಸಹಿತ ಮಳೆಯಾಗಿದ್ದು, ನೀರು ಹಲವು ಮನೆಗಳನ್ನು ಆವರಿಸಿ ಆತಂಕವನ್ನು ಸೃಷ್ಟಿಸಿತು. ಮರ ಮತ್ತು ವಿದ್ಯುತ್‌ ಕಂಬಗಳಿಗೆ ಹಾನಿಯಾಗಿದ್ದು, ನಾಪೋಕ್ಲು ಪಟ್ಟಣ ಸೇರಿದಂತೆ ಗ್ರಾಮೀಣ ಭಾಗದಲ್ಲಿ ವಿದ್ಯುತ್‌ ವ್ಯತ್ಯಯ ಉಂಟಾಗಿದೆ.

ಕಾಫಿ ತೋಟಗಳಿಗೆ ಆವಶ್ಯಕತೆಯಿದ್ದಷ್ಟು ಮಳೆಯಾಗಿದೆ ಎಂದು ರೈತರ ಹೇಳಿದರು.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vitla: Bolanthur Narsha robbery case: Four more arrested including Kerala police

Vitla: ಬೋಳಂತೂರು ನಾರ್ಶ ದರೋಡೆ ಪ್ರಕರಣ: ಕೇರಳದ ಪೊಲೀಸ್‌ ಸೇರಿ ಮತ್ತೆ ನಾಲ್ವರ ಬಂಧನ

8-kukke

Subrahmanya: ಮುಜರಾಯಿ ಸಚಿವರ ನೇತೃತ್ವದಲ್ಲಿ ಕುಕ್ಕೆ ದೇಗುಲದ ಅಭಿವೃದ್ಧಿ ಸಭೆ

3(1

Sullia: ಜಳಕದಹೊಳೆ ಸೇತುವೆ; ಸಂಚಾರ ನಿಷೇಧ

2(1

Uppinangady: ಕಾಂಕ್ರೀಟ್‌ ರಸ್ತೆಯೇ ಕಿತ್ತೋಗಿದೆ

1

Bantwal: ಕೃಷಿಕರ ತೋಟಗಳಿಗೆ ನುಗ್ಗಿದ ಜಕ್ರಿಬೆಟ್ಟು ಅಣೆಕಟ್ಟು ನೀರು!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.