![Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ](https://www.udayavani.com/wp-content/uploads/2024/07/de-415x234.jpg)
Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್ ಅಲರ್ಟ್’
Team Udayavani, Jul 3, 2024, 12:43 AM IST
![Rain ಕರಾವಳಿಯಲ್ಲಿ ಸಾಧಾರಣ ಮಳೆ: ಜು. 5ರಿಂದ “ಆರೆಂಜ್ ಅಲರ್ಟ್’](https://www.udayavani.com/wp-content/uploads/2024/07/Rain-a-620x375.jpg)
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಮಂಗಳೂರು ಸಹಿತ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಬ್ರಹ್ಮಣ್ಯ, ಸುಳ್ಯ ಸಹಿತ ವಿವಿಧ ಕಡೆ ಮಂಗಳವಾರ ಸಾಧಾರಣ ಮಳೆಯಾಗಿದೆ.
ಉಳಿದಂತೆ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು. ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಮಂಗಳೂರಿನ ಕೊಟ್ಟಾರಚೌಕಿ ಬಳಿಯ ಬಂಗ್ರಕೂಳೂರು ಒಳರಸ್ತೆಯಲ್ಲಿ ರಾಜಕಾಲುವೆ ತಡೆಗೋಡೆ ಕುಸಿದಿದೆ. ರಸ್ತೆಯೂ ಅಪಾಯದ ಸ್ಥಿತಿಯಲ್ಲಿದೆ.
ಮಂಗಳೂರಿನಲ್ಲಿ ಮಂಗಳವಾರ 28.9 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಕಡಿಮೆ ಮತ್ತು 23.9 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.9 ಡಿ.ಸೆ. ಏರಿಕೆ ಕಂಡಿತ್ತು.
ಜು.5 ರಿಂದ ಆರೆಂಜ್ ಅಲರ್ಟ್
ಹವಾಮಾನ ಇಲಾಖೆ
ಮುನ್ಸೂಚನೆ ಪ್ರಕಾರ ಕರಾವಳಿಯಲ್ಲಿ ಮಳೆ ಮತ್ತೆ ಬಿರುಸು ಪಡೆಯುವ ನಿರೀಕ್ಷೆ ಇದೆ. ಜು. 3, 4ರಂದು “ಎಲ್ಲೋ ಅಲರ್ಟ್’ ಘೋಷಿಸಲಾಗಿದ್ದು, ಜು. 5, 6ರಂದು “ಆರೆಂಜ್ ಅಲರ್ಟ್’ ಘೋಷಣೆ ಮಾಡಲಾಗಿದೆ.
ಉಡುಪಿ: ಅಲ್ಲಲ್ಲಿ ಮಳೆ
ಉಡುಪಿ: ಜಿಲ್ಲೆಯಲ್ಲಿ ಮಂಗಳವಾರ ಸಾಧಾರಣ ಮಳೆಯಾಗಿದ್ದು, ಸೋಮವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಉಡುಪಿ, ಮಲ್ಪೆ, ಮಣಿಪಾಲ, ಕಾಪು, ಬ್ರಹ್ಮಾವರ ಭಾಗದಲ್ಲಿ ಬಿಸಿಲು ಮೋಡ ಕವಿದ ವಾತಾವರಣದ ನಡುವೆ ಬಿಟ್ಟುಬಿಟ್ಟು ನಿರಂತರ ಮಳೆಯಾಗಿದೆ.
ಕುಂದಾಪುರ ಹಾರ್ದಳ್ಳಿ ಮಂಡಳ್ಳಿ, ಕಾಪು ತಾಲೂಕಿನ ಉಳಿಯಾರಗೋಳಿ, ಕಾರ್ಕಳ ದುರ್ಗಾದಲ್ಲಿ ಆಗಾಗ್ಗೆ ಮಳೆ ಸುರಿದಿದ್ದು ಕೆಲವು ಮನೆಗಳಿಗೆ ಹಾನಿಯಾಗಿದೆ. ಕಾರ್ಕಳ 49.0, ಕುಂದಾಪುರ 59.8, ಉಡುಪಿ 52.2, ಬೈಂದೂರು 64.1, ಬ್ರಹ್ಮಾವರ 58.4, ಕಾಪು 55.1, ಹೆಬ್ರಿ58.3 ಮಿ. ಮೀ. ಮಳೆಯಾಗಿದ್ದು, 57.0 ಮಿ. ಮೀ. ಸರಾಸರಿ ಮಳೆಯಾಗಿದೆ.
ಟಾಪ್ ನ್ಯೂಸ್
![Dengue: ಆರೋಗ್ಯ ಅಧಿಕಾರಿಯೇ ಆಹುತಿ: ಒಂದೇ ದಿನ 286 ಪ್ರಕರಣ](https://www.udayavani.com/wp-content/uploads/2024/07/de-415x234.jpg)
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.