ಹೂಡದಳ್ಳಿ ಕೆರೆ ಒಡ್ಡು ಒಡೆದು ವರ್ಷವಾಯ್ತು

ವ್ಯರ್ಥವಾಗಿ ಹರಿಯುತ್ತಿದೆ ಮಳೆ ನೀರು; ದೋಟಿಕೋಳ ಕೆರೆ ದುರಸ್ತಿ ಇನ್ನೂ ಆಗಿಲ್ಲ

Team Udayavani, Aug 4, 2021, 9:12 PM IST

Rain-Water

ಚಿಂಚೋಳಿ: ತಾಲೂಕಿನಲ್ಲಿ ಕಳೆದ ವರ್ಷ ಆಗಸ್ಟ್‌ ಕೊನೆ ವಾರದಲ್ಲಿ ಸತತವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಹೂಡದಳ್ಳಿ ಗ್ರಾಮದ ಸಣ್ಣ ನೀರಾವರಿ ಕೆರೆ ಭರ್ತಿಯಾಗಿ ಒಡೆದು ಒಂದು ವರ್ಷವಾದರೂ ದುರಸ್ತಿ ಕಾರ್ಯ ಕೈಗೊಂಡಿಲ್ಲ. ಹೀಗಾಗಿ ಮಳೆ ನೀರು ವ್ಯರ್ಥವಾಗಿ ಹರಿದು ಹೋಗುತ್ತಿದೆ.

ತಾಲೂಕಿನ ಹೂಡದಳ್ಳಿ ಗ್ರಾಮದ ಹತ್ತಿರದಲ್ಲಿ ಸಣ್ಣದಾದ ನಾಲಾ ಇದ್ದು, ಮಳೆಗಾಲದಲ್ಲಿ ಪಸ್ತಪುರ, ಮೋಘಾ, ಹೂವಿನಬಾವಿ, ರುಸ್ತಂಪುರ ಗ್ರಾಮಗಳ ಬೆಟ್ಟ-ಗುಡ್ಡಗಳಿಂದ ಹರಿದು ಬರುವ ಮಳೆ ನೀರನ್ನು ಗ್ರಾಮಸ್ಥರು ತಮ್ಮ ಜಮೀನುಗಳಿಗೆ ಸದುಪಯೋಗ ಮಾಡಿಕೊಳ್ಳಲಿ ಎಂದು ಆಗಿನ ಮೈಸೂರು ರಾಜ್ಯದ ಮುಖ್ಯಮಂತ್ರಿ ಆಗಿದ್ದ ವೀರೇಂದ್ರ ಪಾಟೀಲರು ತಮ್ಮ ಹುಟ್ಟೂರಿನಲ್ಲಿ 1969 ನವೆಂಬರ್‌ 22ರಲ್ಲಿ ಸಣ್ಣ ನೀರಾವರಿ ಕೆರೆ ಮಂಜೂರಿಗೊಳಿಸಿ, ಮೂರು ಸಾವಿರ ಹೆಕ್ಟೇರ್‌ ಜಮೀನಿಗೆ ನೀರಿನ ಸೌಲಭ್ಯ ಒದಗಿಸಿದ್ದರು. ಆದರೆ ಕಳೆದ ವರ್ಷ 2020 ಆಗಸ್ಟ್‌ ತಿಂಗಳಲ್ಲಿ ಸುರಿದ ಭಾರಿ ಮಳೆಯಿಂದ ಕೆರೆ ತುಂಬಿದ್ದರಿಂದ ಸೆಪ್ಟೆಂಬರ್‌ 15ರಂದು ಒಡ್ಡು ಒಡೆದು ಹೋಗಿ, ಕೆರೆ ಕೆಳಭಾಗದಲ್ಲಿರುವ ಅನೇಕ ರೈತರ ಜಮೀನುಗಳಿಗೆ ನೀರು ನುಗ್ಗಿ ಬೆಳೆ ಹಾನಿ ಮಾಡಿತ್ತು.

ಈ ವೇಳೆ ಸಂಸದ ಹಾಗೂ ಈಗಿನ ಕೇಂದ್ರ ಸಚಿವ ಭಗವಂತ ಖೂಬಾ, ಶಾಸಕ ಡಾ| ಅವಿನಾಶ ಜಾಧವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಸರ್ಕಾರದಿಂದ ಯಾವುದೇ ಅನುದಾನ ಮಂಜೂರಿ ಆಗದೇ ಇರುವುದರಿಂದ ದುರಸ್ತಿ ಕಾರ್ಯ ಆರಂಭವಾಗಲೇ ಇಲ್ಲ. ದೋಟಿಕೋಳ ಗ್ರಾಮದ ಮೇಲ್ಭಾಗದಲ್ಲಿ ಇರುವ ಸಣ್ಣ ನೀರಾವರಿ ಕೆರೆಗೂ ಹೆಚ್ಚಿನ ನೀರು ಹರಿದು ಬಂದಿದ್ದರಿಂದ ಒಡ್ಡಿನಲ್ಲಿ ಕಳೆದ ವರ್ಷ ಆಗಸ್ಟ್‌ನಲ್ಲಿ ಬಿರುಕು ಕಾಣಿಸಿಕೊಂಡಿತ್ತು. ಈ ವೇಳೆ ರಾತ್ರೋರಾತ್ರಿ ಗ್ರಾಮಸ್ಥರು ಎಚ್ಚರಗೊಂಡು ಅಧಿ ಕಾರಿಗಳಿಗೆ ಸುದ್ದಿ ಮುಟ್ಟಿಸಿದ್ದರಿಂದ ಜೆಸಿಬಿ ಯಂತ್ರದ ಮೂಲಕ ಕೋಡಿಯಿಂದ ನೀರು ಹರಿ ಬಿಟ್ಟು ಕೆರೆ ರಕ್ಷಣೆ ಮಾಡಲಾಗಿತ್ತು. ಆದರೆ ಯಾವುದೇ ದುರಸ್ತಿ ಕಾರ್ಯ ಕೈಗೊಳ್ಳದೇ ಇದ್ದುದರಿಂದ ಕೋಡಿ ಮೂಲಕ ನೀರು ಹರಿದು ಬಿಡಲಾಗುತ್ತಿದೆ.

ಇದರಿಂದಾಗಿ ಮಳೆಯಾಶ್ರಿತ ರೈತರು ಹಿಂಗಾರು ಬೆಳೆಗಳಿಗೆ ನೀರು ಪಡೆಯಲು ತೊಂದರೆ ಆಗುತ್ತಿದೆ. ಅಲ್ಲದೇ ಬೇಸಿಗೆ ದಿನಗಳಲ್ಲಿ ದನಕರುಗಳಿಗೆ, ಗ್ರಾಮಸ್ಥರಿಗೆ ಕುಡಿಯುವ ನೀರಿನ ಸಮಸ್ಯೆ ಉಂಟಾಗಲಿದೆ.

ನಮ್ಮ ಸ್ವಂತ ಊರು ಹೂಡದಳ್ಳಿಯಲ್ಲಿ ಸಣ್ಣ ನೀರಾವರಿ ಕೆರೆ ಒಡೆದು ಹೋಗಿದೆ. ಮಾಜಿ ಸಚಿವ ಜೆ.ಸಿ. ಮಾಧುಸ್ವಾಮಿ ನಾಗಾಇದಲಾಯಿ ಕೆರೆಗೆ ಭೇಟಿ ನೀಡಿ ಅನುದಾನ ನೀಡಿದ್ದಾರೆ. ಆದರೆ ಹೂಡದಳ್ಳಿ ಕೆರೆ ದುರಸ್ತಿಗೆ ಯಾವುದೇ ಅನುದಾನ ಬಂದಿಲ್ಲ. ಇದಕ್ಕೆ ಶಾಸಕ ಡಾ| ಅವಿನಾಶ ಜಾಧವ ಬೇವಾಬ್ದಾರಿತನ ಕಾರಣವಾಗಿದೆ. ಕಳೆದ ಮಾರ್ಚ್‌ 14ರಂದು ಕಲಬುರಗಿ ಸಂಸದ ಡಾ| ಉಮೇಶ ಜಾಧವಗೆ ತಿಳಿಸಲಾಗಿತ್ತು. ಅವರು ಗಮನ ಹರಿಸಿಲ್ಲ.
-ಕೈಲಾಶನಾಥ ಪಾಟೀಲ, ಮಾಜಿ ಶಾಸಕ

ತಾಲೂಕಿನಲ್ಲಿ ಒಡೆದು ಹೋಗಿರುವ ಸಣ್ಣ ನೀರಾವರಿ ಕೆರೆಗಳನ್ನು ದುರಸ್ತಿ ಮಾಡುವಂತೆ ಅನೇಕ ಸಲ ಹೋರಾಟ ನಡೆಸಿ ಸರ್ಕಾರದ ಗಮನ ಸೆಳೆದು ಮನವಿ ನೀಡಲಾಗಿದೆ. ಆದರೆ ಶಾಸಕರು ಈ ಕುರಿತು ನಿರ್ಲಕ್ಷ್ಯ ತೋರುತ್ತಿದ್ದಾರೆ. ದುರಸ್ತಿ ಕಾರ್ಯ ಕೈಗೊಳ್ಳಲು ಅನುದಾನ ತರುವಲ್ಲಿ ವಿಫಲರಾಗಿದ್ದಾರೆ.
-ಸಂಜೀವನ್‌ ಯಾಕಾಪುರ, ಜೆಡಿಎಸ್‌ ಮುಖಂಡ

ತಾಲೂಕಿನಲ್ಲಿ ಕಳೆದ ವರ್ಷ ಧಾರಾಕಾರ ಮಳೆ ಆಗಿದ್ದರಿಂದ ಕೆರೆ ಒಡ್ಡು ಒಡೆದಿದೆ. ಆದರೆ ಸರ್ಕಾರದಿಂದ ಇನ್ನುವರೆಗೂ ಅನುದಾನ ಬಂದಿಲ್ಲ. ಅನುದಾನ ಬಂದ ನಂತರ ಕ್ರಿಯಾಯೋಜನೆ ಸಿದ್ಧಪಡಿಸಿ ಸರ್ಕಾರಕ್ಕೆ ನೀಡಲಾಗುವುದು. ಶಾಸಕ ಡಾ| ಅವಿನಾಶ ಜಾಧವ ಅನುದಾನ ಮಂಜೂರಿಗೊಳಿಸುವ ಭರವಸೆ ನೀಡಿದ್ದಾರೆ.
-ಶಿವಶರಣಪ್ಪ ಕೇಶ್ವಾರ, ಎಇಇ ಸಣ್ಣ ನೀರಾವರಿ ಇಲಾಖೆ

-ಶಾಮರಾವ ಚಿಂಚೋಳಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-kharge

Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ

13-

Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ‌

Yathanaa

BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.