ಬರದ ನಾಡಿನಲ್ಲಿ 7ಅಡಿಯಲ್ಲೇ ನೀರು

ಇದು-ಮಳೆ-ನೀರ-ಕೊಯ್ಲಿನ-ಕಮಾಲ

Team Udayavani, Mar 27, 2019, 6:57 AM IST

60

ಬೆಂಗಳೂರು: ಭೂಮಿಯನ್ನು ಸಾವಿರ ಅಡಿ ಬಗೆದರೂ ಬೊಗಸೆ ನೀರು ಸಿಗದ ಊರಲ್ಲಿರುವ ಪ್ರದೇಶ ಅದು. ಬಹುತೇಕ ಪ್ರತಿ ವರ್ಷ ರಾಜ್ಯದ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಅದೂ ಬರುತ್ತದೆ. ಆದರೆ, ಆ ನಿರ್ದಿಷ್ಟ ಪ್ರದೇಶದಲ್ಲಿ ಮಾತ್ರ ಕೇವಲ ಆಳು ಅಡಿಯಷ್ಟು ಭೂಮಿ ಕೊರೆದರೂ ನೀರು ಚಿಮ್ಮುತ್ತದೆ! – ಇದು ದೇವನಹಳ್ಳಿಯಲ್ಲಿರುವ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದ “ಭಗೀರಥನ ಕತೆ’.

ಒಂದೂವರೆ ದಶಕದ ಹಿಂದಿನ ಮಾತು. ಆಗಷ್ಟೇ ಸರ್ಕಾರದಿಂದ ವಿಮಾನ ನಿಲ್ದಾಣಕ್ಕಾಗಿ ಸುಮಾರು ನಾಲ್ಕುಸಾವಿರ ಎಕರೆ ಭೂಮಿಯನ್ನು ಹಸ್ತಾಂತರ ಮಾಡಿದಾಗ, ಅಲ್ಲಿ ಒಂದೇ ಒಂದು ಕೆರೆ ಇರಲಿಲ್ಲ. ಭೂಮಿಯಲ್ಲೂ ಆಗಲೇ ನೀರು ಪಾತಾಳಕ್ಕೆ ಕುಸಿಯುತ್ತಿತ್ತು. ಆದರೆ, ಈಗ ಅದೇ ನಿಲ್ದಾಣದ ವ್ಯಾಪ್ತಿಯಲ್ಲಿ ಬೇಸಿಗೆಯಲ್ಲೂ 70 ಎಕರೆ ಜಾಗದಲ್ಲಿ ತಲೆಯೆತ್ತಿದ ಬೃಹದಾಕಾರದ ನಾಲ್ಕೂ ಕೆರೆಗಳು ತುಂಬಿ ತುಳುಕುತ್ತಿವೆ. ಭೂಮಿಯನ್ನು ಮೂರ್‍ನಾಲ್ಕು ಮೀಟರ್‌ನಷ್ಟು ಬಗೆದರೂ ಸಾಕು, ನೀರು ಜಿನುಗುತ್ತದೆ. ಇದರಿಂದ ನಿತ್ಯ ಬಂದುಹೋಗುವ ಲಕ್ಷಾಂತರ ಪ್ರಯಾಣಿಕರ ದಾಹ ಇಂಗಿಸುತ್ತಿದೆ. ಇದು ಅಲ್ಲಿ ನಿರ್ಮಿಸಿದ ಇಂಗು ಗುಂಡಿಗಳು ಮತ್ತು ಮಳೆ ನೀರು ಕೊಯ್ಲಿನ ಚಮತ್ಕಾರ.

ಸ್ವತಃ ಉದ್ಯಾನ ನಗರಿಯ ಹೃದಯಭಾಗದಲ್ಲೇ ಸಾವಿರ ಅಡಿ ಆಳಕ್ಕಿಳಿದರೂ ನೀರೂ ಬರುತ್ತಿಲ್ಲ. ಬೇಸಿಗೆ  ಯಲ್ಲಿ ಇರುವ ಬಾವಿಗಳೂ ಬತ್ತುತ್ತಿವೆ ಹಾಗೂ ನೀರಿನ ಇಳುವರಿಯೂ ಕುಸಿಯುತ್ತಿದೆ. ಆದರೆ, ನಿಲ್ದಾಣದಾದ್ಯಂತ ನಿರ್ಮಿಸಿದ 316 ಇಂಗು ಗುಂಡಿಗಳು, ಕೆರೆಗಳ ನಿರ್ಮಾಣ, ಜತೆಗೆ ಹೆಚ್ಚಿನ ನೀರನ್ನು ಅಂತರ್ಜಲ ಮರುಪೂರಣಕ್ಕೆ ಬಳಕೆ ಮಾಡುತ್ತಿರುವುದರ ಫ‌ಲವಾಗಿ ನಿತ್ಯ ಎರಡೂವರೆ ದಶಲಕ್ಷ ಲೀ. ನೀರು ಪೂರೈಕೆ ಆಗುತ್ತಿದೆ. ತೆರೆದ ಬಾವಿಗಾಗಿ ಮೂರ್‍ನಾಲ್ಕು ಮೀಟರ್‌ ಆಳಕ್ಕಿಳಿದರೆ ಸಾಕು, ಅದೇ ರೀತಿ ಕೊಳವೆಬಾವಿಗಾಗಿ 30ರಿಂದ 35 ಮೀಟರ್‌ ಭೂಮಿ ಕೊರೆದರೆ ನೀರು ಪುಟಿಯುತ್ತದೆ.

ಕಟ್ಟಡಗಳ ಮೇಲೆ ಬಿದ್ದ ಮಳೆ ನೀರು ಈ ಟ್ಯಾಂಕ್‌ಗಳಲ್ಲಿ ಸಂಗ್ರಹ ಆಗುತ್ತದೆ. ಈ ನೀರನ್ನು ಸಂಸ್ಕರಣೆ ಮಾಡಿ, ಮರುಬಳಕೆ ಮಾಡಲಾಗುತ್ತಿದೆ. ಹೆಚ್ಚಾದ ನೀರನ್ನು ಒಳಚರಂಡಿ ಮೂಲಕ ಅಂತರ್ಜಲ ಮರುಪೂರಣಕ್ಕೆ ಪೂರೈಸಲಾಗುತ್ತದೆ. ಇದಲ್ಲದೆ, ನಿಲ್ದಾಣದ ವ್ಯಾಪ್ತಿಯಲ್ಲಿರುವ 1,22,500 ಚದರ ಮೀಟರ್‌ನಲ್ಲಿ ಬೆಳೆದ ಉದ್ಯಾನ ಸೇರಿದಂತೆ ಹುಲ್ಲುಹಾಸಿಗೆ ಅಟೋಮೆಟಿಕ್‌ ಯಂತ್ರೋಪರಕರಣಗಳ ನೆರವಿನಿಂದ ನೀರುಣಿಸಲಾಗುತ್ತಿದೆ ಎಂದು ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ನಿಗಮ (ಬಿಐಎಎಲ್‌)ದ ಕಾರ್ಪೋರೇಟ್‌ ಕಮ್ಯುನಿಕೇಷನ್‌ ಮುಖ್ಯಸ್ಥೆ ಅರ್ಚನಾ ಮುತ್ತಪ್ಪ “ಉದಯವಾಣಿ’ಗೆ ತಿಳಿಸಿದರು. ನಿಲ್ದಾಣದ ವ್ಯಾಪ್ತಿಯಲ್ಲಿ ನಿರ್ಮಿಸಿದ ಬೃಹದಾಕಾರದ ಕೆರೆಗಳಿಂದ ಸುತ್ತಲಿನ ಪ್ರದೇಶದಲ್ಲೂ ಅಂತರ್ಜಲ ಮಟ್ಟ ವೃದ್ಧಿ ಯಾಗಿದ್ದು, ಕೃಷಿ ಚಟುವಟಿಕೆಗಳಿಗೆ ಅನುಕೂಲ ಆಗುತ್ತಿದೆ.

ವಿಜಯ್‌ ಕುಮಾರ್‌ ಚಂದರಗಿ

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.