Ram Mandir: ‘ಕೈ’ಗೆ ತಪ್ಪಿದ ಪಾಪ ಪರಿಹಾರ ಅವಕಾಶ: ಅಸ್ಸಾಂ ಸಿಎಂ ಹಿಮಾಂತ ಶರ್ಮಾ ಬಿಸ್ವಾ

ಮಂದಿರ ಉದ್ಘಾಟನೆ ಆಹ್ವಾನ ತಿರಸ್ಕಾರಕ್ಕೆ ಟೀಕೆ - ಅವರಿಗೆ ಬಾಬರನೇ ಮೆಚ್ಚು

Team Udayavani, Jan 14, 2024, 12:30 AM IST

himanth bisva

ಕೋಲ್ಕತಾ/ಅಯೋಧ್ಯೆ: ರಾಮ ಮಂದಿರ ಉದ್ಘಾಟನೆಗೆ ಇನ್ನು ಕೆಲವೇ ದಿನಗಳು ಉಳಿದಿರು ವಂತೆಯೇ ಅದರ ಪರ-ವಿರೋಧದ ಮಾತುಗಳು ಬಿರುಸಾಗತೊಡಗಿವೆ. ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆಯ ಆಹ್ವಾನವನ್ನು ತಿರಸ್ಕರಿಸಿ ಕಾಂಗ್ರೆಸ್‌ ನಾಯಕರು ತಪ್ಪು ಮಾಡಿದ್ದಾರೆ ಎಂದು ಅಸ್ಸಾಂ ಸಿಎಂ ಹಿಮಾಂತ ಶರ್ಮಾ ಬಿಸ್ವಾ ಲಘು ಧಾಟಿಯಲ್ಲಿ ಟೀಕಿಸಿದ್ದಾರೆ.

ಕೋಲ್ಕತಾದಲ್ಲಿ ಶುಕ್ರವಾರ ಮಾತನಾಡಿದ ಅವರು, ಮಂದಿರ ಉದ್ಘಾಟನೆಗೆ ಆಗಮಿಸುವ ಮೂಲಕ ಅವರು ಮಾಡಿದ ಪಾಪಗಳ ಪ್ರಮಾಣ ತಗ್ಗಿಸಲು ಸುವರ್ಣಾವಕಾಶ ಅವರಿಗೆ ಲಭ್ಯವಾಗಿತ್ತು. ಅದಕ್ಕಾಗಿ ಅವರಿಗೆ ವಿಶ್ವ ಹಿಂದೂ ಪರಿಷತ್‌ ಅವಕಾಶ ನೀಡಿದರೂ, ಕಾಂಗ್ರೆಸ್‌ ನಾಯಕರು ಅದನ್ನು ಸದುಪಯೋಗಪಡಿಸಲಿಲ್ಲ ಎಂದರು.

ಒಂದು ವೇಳೆ ಕಾಂಗ್ರೆಸ್‌ ನಾಯಕರು ಆಹ್ವಾನವನ್ನು ಮನ್ನಿಸಿ ಜ.22ರಂದು ನಡೆಯಲಿರುವ ಉದ್ಘಾಟನ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದರೂ, ಆ ಸಂದರ್ಭದ ಉತ್ತಮ ಕ್ಷಣ ಗಳನ್ನು ದೇಶ ಕಳೆದುಕೊಳ್ಳ ಬೇಕಾಗುತ್ತಿತ್ತು ಎಂದೂ ಅಸ್ಸಾಂ ಮುಖ್ಯಮಂತ್ರಿ ಹೇಳಿದ್ದಾರೆ.

ಬಾಬರ್‌ ಅವರ ಆಯ್ಕೆ: ಕಾಂಗ್ರೆಸ್‌ ನಾಯಕರಿಗೆ ರಾಮ ಮತ್ತು ಬಾಬರ್‌ ಇವರಿಬ್ಬರ ನಡುವೆ ಆಯ್ಕೆ ಮಾಡಲು ಸೂಚಿಸಿದರೆ, ಆ ಪಕ್ಷದ ನಾಯಕರು ಬಾಬರ್‌ನನ್ನೇ ಆಯ್ಕೆ ಮಾಡುತ್ತಿದ್ದರು ಎಂದರು ಹಿಮಾಂತ ಶರ್ಮ. ದೇಶದ ಮೊದಲ ಪ್ರಧಾನಿ ಜವಾಹರ್‌ಲಾಲ್‌ ನೆಹರೂ ಅವರಿಂದ ತೊಡಗಿ ರಾಹುಲ್‌ ಗಾಂಧಿ ವರೆಗಿನ ನಾಯಕರು ಅಫ್ಘಾನಿಸ್ಥಾನಕ್ಕೆ ತೆರಳಿ ಬಾಬರ್‌ನ ಸಮಾಧಿಗೆ ಭೇಟಿ ನೀಡಿದ್ದರು ಎಂದು ದೂರಿದ್ದಾರೆ. ರಾಹುಲ್‌ 2005ರಲ್ಲಿ ಅಫ್ಘಾನಿಸ್ಥಾನಕ್ಕೆ ತೆರಳಿದ್ದ ವೇಳೆ ಬಾಬರ್‌ ಸಮಾಧಿ ಸ್ಥಳಕ್ಕೆ ತೆರಳಿದ್ದರು ಎಂದರು ಅಸ್ಸಾಂ ಸಿಎಂ.

ಕಂಚಿ ಸ್ವಾಮೀಜಿಗಳಿಂದ 40 ದಿನಗಳ ವಿಶೇಷ ಪೂಜೆ
ರಾಮಮಂದಿರದ ಉದ್ಘಾಟನೆ ಹಿನ್ನೆಲೆಯಲ್ಲಿ 40 ದಿನಗಳ ವಿಶೇಷ ಪೂಜೆಯನ್ನು ಕೈಗೊಳ್ಳುವುದಾಗಿ ಕಂಚೀಪುರದ ಕಂಚಿ ಕಾಮಕೋಟಿ ಮಠದ ವಿಜಯೇಂದ್ರ ಸರಸ್ವತೀ ಸ್ವಾಮೀಜಿ ಸ್ವಾಮೀಜಿ ಘೋಷಿ ಸಿದ್ದಾರೆ. ಕಾಶಿಯ ಯಾಗ ಶಾಲೆಯಲ್ಲಿ 40 ದಿನಗಳ ಪೂಜಾ ಕಾರ್ಯಕ್ರಮವನ್ನು ನಡೆಸಲಾಗುವುದು. ರಾಮ ಲಲ್ಲಾನ ಪ್ರಾಣ ಪ್ರತಿಷ್ಠೆಯ ದಿನದಂದೇ ಅಂದರೆ ಜ.22ರಂದೇ ಈ ಪೂಜೆ ಆರಂಭ ವಾಗಲಿದ್ದು, ಲಕ್ಷ್ಮೀ ಕಾಂತ ದೀಕ್ಷಿತ್‌ ಸೇರಿದಂತೆ ವೇದ ಪಂಡಿತರ ಮಾರ್ಗದರ್ಶನದಲ್ಲಿ 40 ದಿನಗಳ ಕಾಲ ನಡೆಯಲಿದೆ. 100ಕ್ಕೂ ಅಧಿಕ ಪಂಡಿತರು ಯಜ್ಞ ಶಾಲೆಯಲ್ಲಿ ಪೂಜೆ ಮತ್ತು ಹವನ ನೆರವೇರಿಸಲಿದ್ದಾರೆ ಎಂದು ಕಂಚಿ ಕಾಮಕೋಟಿ ಮಠದ ವಿಜಯೇಂದ್ರ ಸರಸ್ವತೀ ಸ್ವಾಮೀಜಿ ಹೇಳಿದ್ದಾರೆ.

ಸಚಿನ್‌, ಕೊಹ್ಲಿಗೆ ಟ್ರಸ್ಟ್‌ ಸದಸ್ಯರ ಆಹ್ವಾನ
ಮಾಜಿ ಕ್ರಿಕೆಟಿಗ ಸಚಿನ್‌ ತೆಂಡೂಲ್ಕರ್‌, ಮಾಜಿ ಕ್ಯಾಪ್ಟನ್‌ ವಿರಾಟ್‌ ಕೊಹ್ಲಿ ಅವರಿಗೆ ರಾಮ ಮಂದಿರ ಉದ್ಘಾಟನೆ ಆಹ್ವಾನ ನೀಡಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ನ ಪ್ರತಿನಿಧಿಗಳು ಶನಿವಾರ ಇಬ್ಬರು ಗಣ್ಯರಿಗೂ ಆಮಂತ್ರಣ ನೀಡಿ, ಕಾರ್ಯಕ್ರಮಕ್ಕೆ ಬರುವಂತೆ ಮನವಿ ಮಾಡಿದ್ದಾರೆ.

ರಾಮ ಮಂದಿರ ಎನ್ನುವುದು ದೇಶದ ಹೆಮ್ಮೆಯ ವಿಚಾರ. ಜತೆಗೆ ಇದೊಂದು ಆತ್ಮಗೌರವದ ಪ್ರತೀಕ. ಹೀಗಾಗಿ ಮಂದಿರ ಉದ್ಘಾಟನೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದಲೇ ನೆರವೇರಿಸಬೇಕು.
ಉದ್ಧವ್‌ ಠಾಕ್ರೆ, ಮಹಾರಾಷ್ಟ್ರ ಮಾಜಿ ಸಿಎಂ

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

NDA-Meet

NDA CMs Meet: ರಾಷ್ಟ್ರದ ಅಭಿವೃದ್ಧಿಗೆ ಎನ್‌ಡಿಎ ಬದ್ಧ: ಪ್ರಧಾನಿ ಮೋದಿ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.