ಎಲ್ಲರಿಗೂ ರಾಮ್‌ ರಾಮ್‌!-ಅನುಮಾನ ಹುಟ್ಟುಹಾಕಿದ ನಿರ್ಗಮಿತ ಸಿಎಂ ಶಿವರಾಜ್‌ ಚೌಹಾಣ್‌ ಹೇಳಿಕೆ


Team Udayavani, Dec 9, 2023, 11:38 PM IST

SHIVARAJ SINGH CHOUHAN 1

ಹೊಸದಿಲ್ಲಿ: “ಸಭೀ ಕೋ ರಾಮ್‌ ರಾಮ್‌…”(ಎಲ್ಲರಿಗೂ ರಾಮ್‌ ರಾಮ್‌)

ಮಧ್ಯಪ್ರದೇಶದ ನೂತನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಒಮ್ಮತಕ್ಕೆ ಬರಲು ಬಿಜೆಪಿ ಹೈಕಮಾಂಡ್‌ ಹೆಣಗಾಡುತ್ತಿರುವಂತೆಯೇ ನಿರ್ಗಮಿತ ಮುಖ್ಯಮಂತ್ರಿ ಶಿವರಾಜ್‌ ಸಿಂಗ್‌ ಚೌಹಾಣ್‌ ಅವರು ಮಾಡಿರುವ ಟ್ವೀಟ್‌ ಇದು.

ಶನಿವಾರ ಎಕ್ಸ್‌ನಲ್ಲಿ ಅವರು “ಸಭೀ ಕೋ ರಾಮ್‌ ರಾಮ್‌” ಎಂದು ಬರೆದುಕೊಂಡಿದ್ದು, ಅದು ವೈರಲ್‌  ಆಗುತ್ತಿದ್ದಂತೆಯೇ ಅದನ್ನು ಅಳಿಸಿಹಾಕಿದ್ದಾರೆ. ಹೀಗಿದ್ದಾಗ್ಯೂ, ಶಿವರಾಜ್‌ ಸಿಂಗ್‌ ಅವರ ಈ ಟ್ವೀಟ್‌ನ ಮರ್ಮವೇನು ಎಂಬ ಬಗ್ಗೆ ಭಾರೀ ಚರ್ಚೆಗಳು ಆರಂಭ ವಾಗಿವೆ. ಚೌಹಾಣ್‌ ಅವರು ತಮಗೆ ಸಿಎಂ ಹುದ್ದೆ ಸಿಕ್ಕೇಬಿಡ್ತು ಎಂಬ ಖುಷಿಯಿಂದ ಎಲ್ಲರನ್ನೂ ಅಭಿನಂದಿಸಿ ಈ ರೀತಿ ಬರೆದುಕೊಂಡಿದ್ದಾರೋ ಅಥವಾ ಸಿಎಂ ಹುದ್ದೆ

ಕೈತಪ್ಪಿತು ಎಂಬ ನೋವಿನಿಂದ “ವಿದಾಯದ ಸಂಕೇತ”ವಾಗಿ ಬರೆದುಕೊಂಡಿದ್ದಾರೋ ಎಂಬ ಪ್ರಶ್ನೆ ಎಲ್ಲರನ್ನೂ ಕಾಡತೊಡಗಿದೆ. ಸಾಮಾನ್ಯವಾಗಿ “ರಾಮ್‌ ರಾಮ್‌” ಎಂಬುದನ್ನು ಅಭಿನಂದನೆ ಹಾಗೂ ವಿದಾಯ ಎರಡಕ್ಕೂ ಬಳಸಲಾಗುತ್ತದೆ. ಇಲ್ಲಿ ಚೌಹಾಣ್‌ ಅವರು ಯಾವ ಉದ್ದೇಶದಿಂದ ಹೀಗೆ ಬರೆದಿದ್ದಾರೆ ಎಂಬುದರ ಬಗ್ಗೆ ಹಲವು ವ್ಯಾಖ್ಯಾನಗಳು ಕೇಳಿಬರಲಾರಂಭಿಸಿವೆ. ಇದರ ಬೆನ್ನಲ್ಲೇ ಈ ಟ್ವೀಟ್‌ ಕೂಡ ಡಿಲೀಟ್‌ ಆಗಿದೆ.

ಈ ಕುರಿತು ಅವರನ್ನೇ ಪ್ರಶ್ನೆ ಮಾಡಿದಾಗ ಅವರು, “ಇದು ಭಗವಂತ ರಾಮನ ದೇಶ. ಜ.22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠೆ ನಡೆಯಲಿದೆ. ನಾವು ಪ್ರತಿದಿನ ಮುಂಜಾನೆ ರಾಮ್‌ ರಾಮ್‌ ಎಂದು ಹೇಳುತ್ತಲೇ ಒಬ್ಬರನ್ನೊಬ್ಬರು ನಮಸ್ಕರಿಸುತ್ತೇವೆ ಅಷ್ಟೆ” ಎಂದಿದ್ದಾರೆ.

ನಾಳೆ ಆಯ್ಕೆ: ಸೋಮವಾರ ಬೆಳಗ್ಗೆಯೇ ಭೋಪಾಲ್‌ಗೆ ಕೇಂದ್ರದ ಮೂವರು ವೀಕ್ಷಕರು ಆಗಮಿಸಲಿದ್ದಾರೆ. ಸಂಜೆ 4 ಗಂಟೆಗೆ ನಡೆಯುವ ಶಾಸಕರ ಸಭೆಯಲ್ಲಿ ನಾಯಕನ ಆಯ್ಕೆ ನಡೆಯಲಿದೆ.

ಇನ್ನೊಂದೆಡೆ, ವೀಕ್ಷಕರ ಸಮ್ಮುಖದಲ್ಲಿ ಛತ್ತೀಸ್‌ಗಡದ 54 ಬಿಜೆಪಿ ಶಾಸಕರು ಭಾನುವಾರ ಸಭೆ ಸೇರಲಿದ್ದು, ಇಲ್ಲೇ ಶಾಸಕಾಂಗ ಪಕ್ಷದ ನಾಯಕರ ಆಯ್ಕೆ ನಡೆಯಲಿದೆ. ಮಾಜಿ ಸಿಎಂ ರಮಣ್‌ ಸಿಂಗ್‌  ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡದೇ ಇದ್ದರೆ ಬಿಜೆಪಿಯು ಒಬಿಸಿ ಅಥವಾ ಬುಡಕಟ್ಟು ಜನಾಂಗದ ನಾಯಕರನ್ನೇ ಸಿಎಂ ಹುದ್ದೆಗೆ ಆಯ್ಕೆ ಮಾಡುವ ಸಾಧ್ಯತೆ ಹೆಚ್ಚಿದೆ.

ಕೆಸಿಆರ್‌ಗೆ ನಾಯಕ ಸ್ಥಾನ: ಹೈದರಾಬಾದ್‌ನಲ್ಲಿ ಶನಿವಾರ ತೆಲಂಗಾಣದ ಬಿಆರ್‌ಎಸ್‌ ಶಾಸಕರ ಸಭೆ ನಡೆದಿದ್ದು, ಮಾಜಿ ಸಿಎಂ ಕೆ. ಚಂದ್ರಶೇಖರ್‌ರಾವ್‌ರನ್ನು ಶಾಸಕಾಂಗ ಪಕ್ಷದ ನಾಯಕನನ್ನಾಗಿ ಆಯ್ಕೆ ಮಾಡಲಾಗಿದೆ. 119 ಸದಸ್ಯಬಲದ ವಿಧಾನಸಭೆಯಲ್ಲಿ ಬಿಆರ್‌ಎಸ್‌ನ 39 ಶಾಸಕರಿದ್ದಾರೆ.

ವಿಕ್ರಮಾರ್ಕಗೆ ಹಣಕಾಸು: ತೆಲಂಗಾಣದ ಕಾಂಗ್ರೆಸ್‌ ಸರಕಾರದಲ್ಲಿ ಶನಿವಾರ ಖಾತೆಗಳ ಹಂಚಿಕೆ ನಡೆದಿದ್ದು, ಸಿಎಂ ರೇವಂತ್‌ ರೆಡ್ಡಿ ಅವರು ನಗರಾಭಿವೃದ್ಧಿ, ಮುನ್ಸಿಪಲ್‌ ಆಡಳಿತ, ಕಾನೂನು ಮತ್ತು ಸುವ್ಯವಸ್ಥೆ ಹಾಗೂ ಹಂಚಿಕೆಯಾಗದ ಖಾತೆಗಳನ್ನು ವಹಿಸಿಕೊಂಡಿದ್ದಾರೆ. ಡಿಸಿಎಂ ಮಲ್ಲು ಭಟ್ಟಿ ವಿಕ್ರಮಾರ್ಕ ಅವರಿಗೆ ಹಣಕಾಸು,ಇಂಧನ ಖಾತೆಯ ಹೊಣೆ ವಹಿಸಲಾಗಿದೆ. ನೀರಾವರಿ, ಆಹಾರ ಮತ್ತು ನಾಗರಿಕ ಪೂರೈಕೆ ಖಾತೆಯನ್ನು ಉತ್ತಮ ಕುಮಾರ್‌ ರೆಡ್ಡಿ ವಹಿಸಿಕೊಂಡಿದ್ದಾರೆ.

ಟಾಪ್ ನ್ಯೂಸ್

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

17-desiswara-ganaap

Ganesh Chaturthi Special Story: ವಿಶ್ವಪೂಜಿತ ವಿನಾಯಕ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.