ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಿದರೆ ಪರಿಣಾಮ ನೆಟ್ಟಗಿರಲ್ಲ : ರಾಮಲಿಂಗಾರೆಡ್ಡಿ ಎಚ್ಚರಿಕೆ


Team Udayavani, Aug 10, 2021, 11:30 AM IST

ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಿದರೆ ಪರಿಣಾಮ ನೆಟ್ಟಗಿರಲ್ಲ : ರಾಮಲಿಂಗಾರೆಡ್ಡಿ ಎಚ್ಚರಿಕೆ

ಬೆಂಗಳೂರು: ಇಂದಿರಾ ಕ್ಯಾಂಟೀನ್‌ ಹೆಸರು ಬದಲಿಸಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಹಾಗೂ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಎಚ್ಚರಿಕೆ ನೀಡಿದ್ದಾರೆ.

ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಇಂದಿರಾ ಗಾಂಧಿ ಹೆಸರು ಬದಲಿಸಬೇಕು ಸಿ.ಟಿ ರವಿ ಟ್ವೀಟ್‌ ಮಾಡಿದ್ದು, ಅದಕ್ಕೆ ನಮ್ಮ ಪಕ್ಷದಿಂದ ಹೋದವರು ಬೆಂಬಲಿಸಿದ್ದಾರೆ. ಇದೊಂದು ಹೀನ ರಾಜಕೀಯ ಕೃತ್ಯವಾಗುತ್ತದೆ ಎಂದು ಹೇಳಿದರು.

ಬಿಜೆಪಿಯವರು ಯಾರದಾದರೂ ಹೆಸರು ಇಡಬೇಕು ಎಂದುಕೊಂಡಿದ್ದರೆ ಇನ್ನು ಉತ್ತಮವಾದ ದೊಡ್ಡ ಯೋಜನೆ ತಂದು ಅದಕ್ಕೆ ಅವರಿಗೆ ಬೇಕಾದ ಹೆಸರು ಇಡಲಿ. ಆದರೆ, ಇಂದಿರಾ ಗಾಂಧಿ ಅವರ ಹೆಸರು ತೆಗೆದು ಬೇರೆ ಹೆಸರಿಡುತ್ತೇವೆ ಎಂದು ಹೇಳಿದರೆ ಪರಿಣಾಮ ನೆಟ್ಟಗಿರುವುದಿಲ್ಲ ಎಂದು ತಿಳಿಸಿದರು.

ಬಿಜೆಪಿಯವರು ಅಟಲ್‌ ಸಾರಿಗೆ, ದೀನದಯಾಳ್‌ ಉಪಾಧ್ಯಾಯ ಹೆಸರು ಯಶವಂತಪುರ ಫ್ಲೆ„ಓವರ್‌, ಸಾರ್ವಕರ್‌ ಅವರ ಹೆಸರು ಯಲಹಂಕ ಫ್ಲೈ ಓವರ್‌ ಗೆ ಇಡಲಾಗಿದೆ. ಇಂದಿರಾ ಗಾಂಧಿ ಅವರ ಹೆಸರನ್ನು ಬದಲಿಸುವುದಾದರೆ ಇದನ್ನೂ ಕೂಡ ಬದಲಿಸಿ. ನಾವು ಈ ಎಲ್ಲ ಯೋಜನೆ ಹೆಸರುಗಳಿಗೆ ಮಸಿ ಬಳಿಯಬೇಕಾಗುತ್ತದೆ ಎಂದು ಹೇಳಿದರು.

ನರೇಂದ್ರ ಮೋದಿ ಹೆಸರು ಶೌಚಾಲಯಕ್ಕೆ ಇಡಬೇಕು. ಅದೇ ಅವರಿಗೆ ಸೂಕ್ತ. ಬಿಜೆಪಿಯವರು ಕೆಲವು ಯೋಜನೆಗಳಿಗೆ ಶ್ಯಾಂ ಪ್ರಸಾದ್‌ ಮುಖರ್ಜಿ ಅವರ ಹೆಸರಿಟ್ಟಿದ್ದಾರೆ. ಆದರೆ, ಅವರು ಸ್ವಾತಂತ್ರ್ಯ ಹೋರಾಟಕ್ಕಾಗಿ ನಡೆಸಿದ ಕ್ವಿಟ್‌ ಇಂಡಿಯಾ ಚಳುವಳಿ ಹತ್ತಿಕ್ಕಬೇಕು ಎಂದು ಬ್ರಿಟೀಷರಿಗೆ ಪತ್ರ ಬರೆದಿದ್ದರು. ಆರ್‌ ಎಸ್‌ ಎಸ್‌, ಸಂಘ ಪರಿವಾರ, ಬಿಜೆಪಿಯವರು ದೇಶಭಕ್ತಿ ಬಗ್ಗೆ ನಮಗೆ ಕೊಡುವ ಸರ್ಟಿಫಿಕೇಟ್‌ ಬೇಕಾಗಿಲ್ಲ. ಬ್ರಿಟೀಷರ ಏಜೆಂಟ್‌, ಗೂಢಚಾರಿಯಾಗಿದ್ದವರಿಂದ ನಾವು ದೇಶಭಕ್ತಿ ಪಾಠ ಕಲಿಯಬೇಕಾದ ಅಗತ್ಯವಿಲ್ಲ. ಸ್ವಾತಂತ್ರ್ಯ ಹೋರಾಟದಲ್ಲಿ ಸಂಘ ಪರಿವಾರದವರು ಭಾಗವಹಿಸಿದ್ದರೆ ಅವರ ಹೆಸರು ಹೇಳಲಿ ನಾವು ಸಾಯುವವರೆಗೂ ಅವರ ಗುಲಾಮರಾಗಿರುತ್ತೇವೆ ಎಂದು ಸವಾಲು ಹಾಕಿದರು.

ರಾಜೀವ್‌ ಗಾಂಧಿ ಅವರೂ ಕೂಡ ಪ್ರಧಾನಿಯಾಗಿದ್ದವರು. ಅವರೂ ಕೂಡ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ್ದಾರೆ. ಅವರ ಹೆಸರು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ನೀಡುವ ಖೇಲ್‌ ರತ್ನ ಪ್ರಶಸ್ತಿಗೆ ಇಟ್ಟಿದ್ದರು. ಧ್ಯಾನ್‌ ಚಂದ್‌ ಅವರು ವಿಶ್ವ ಕಂಡ ಶ್ರೇಷ್ಠ ಹಾಕಿ ಆಟಗಾರ. ಇದೇ ಕಾರಣಕ್ಕೆ ರಾಜೀವ್‌ಗಾಂಧಿಯವರು ಅವರ ಹೆಸರಿನಲ್ಲಿ ಶ್ರೇಷ್ಠ ಆಟಗಾರನಿಗೆ 5 ಲಕ್ಷ ರೂ. ಪ್ರಶಸ್ತಿ ಸ್ಥಾಪಿಸಿದ್ದರು ಎಂದು ಹೇಳಿದರು.

ಇದನ್ನೂ ಓದಿ :ಬಿಜೆಪಿಗೆ 3,623 ಕೋಟಿ ರೂ. ಆದಾಯ! ಚುನಾವಣಾ ಬಾಂಡ್‌ ಮೂಲಕವೇ 2,555 ಕೋಟಿ ರೂ. ಗಳಿಕೆ

ಕ್ರೀಡಾ ಪ್ರಶಸ್ತಿಗೆ ಕ್ರೀಡಾಪಟುವಿನ ಹೆಸರಿಡುವ ಉದ್ದೇಶ ನಿಜವೇ ಆಗಿದ್ದರೆ, ಗುಜರಾತಿನಲ್ಲಿ ಸರ್ದಾರ್‌ ವಲ್ಲಭಾಯ್‌ ಪಟೇಲ್‌ ಅವರ ಹೆಸರಿನ ಕ್ರಿಕೆಟ್‌ ಕ್ರೀಡಾಂಗಣಕ್ಕೆ ಈಗ ಮೋದಿ ಅವರ ಹೆಸರನ್ನೇ ಇಟ್ಟುಕೊಂಡಿದ್ದಾರೆ. ಹಾಗಾದರೆ ಮೋದಿ ಅವರು ಕ್ರೀಡಾಪಟುವೇ? ಕ್ರಿಕೆಟ್‌ ಆಟಗಾರನಾ? ಎಂದು ಪ್ರಶ್ನಿಸಿದರು.

ಸಿದ್ದರಾಮಯ್ಯ ಅವರ ಸರ್ಕಾರ ಇದ್ದಾಗ ಇಂದಿರಾ ಕ್ಯಾಂಟೀನ್‌ ನಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡಲಾಗುತ್ತಿತ್ತು. ಅದನ್ನು ಉಳಿಸಿಕೊಂಡು ಹೋಗುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದರು.

ನಮ್ಮ ನಾಯಕರು ಸತ್ತ ಮೇಲೆ ನಾವು ಕಾರ್ಯಕ್ರಮಗಳಿಗೆ ಅವರ ಹೆಸರಿಡುತ್ತೇವೆ. ಆದರೆ ಮೋದಿ ಅವರು ಬದುಕಿರುವಾಗಲೇ ಸರ್ದಾರ್‌ ಪಟೇಲ್‌ ಅವರ ಹೆಸರು ತೆಗೆದು ತಮ್ಮ ಹೆಸರನ್ನು ಕ್ರಿಕೆಟ್‌ ಕ್ರೀಡಾಂಗಣಕ್ಕೆ ಇಟ್ಟುಕೊಂಡಿದ್ದಾರೆ. ಇದಕ್ಕೆ ನಮ್ಮ ಅಭ್ಯಂತರವಿಲ್ಲ. ಪಟೇಲ್‌ ಅವರು ಉಕ್ಕಿನ ಮನುಷ್ಯ. ನೀವು ಬೇಕಾದರೆ ಗೋಲ್ಡನ್‌ ಪುರುಷ, ಡೈಮಂಡ್‌ ಪುರುಷ ಅಂತಲೇ ಕರೆಸಿಕೊಳ್ಳಿ. ಆದರೆ ಸರ್ದಾರ್‌ ಪಟೇಲರಂತೆ ನೀವು ಉಕ್ಕಿನ ಮನುಷ್ಯರಾಗಲು ಸಾಧ್ಯವಿಲ್ಲ. ಹೆಸರು ಬದಲಾವಣೆ ಮಾಡುವ ಮೂಲಕ ಬಿಜೆಪಿ ಹೀನ ಕುತಂತ್ರ ನಡೆಸುತ್ತಿದೆ ಎಂದು ದೂರಿದರು. ವಿಧಾನ ಪರಿಷತ್‌ನ ಮುಖ್ಯ ಸಚೇತಕ ನಾರಾಯಣಸ್ವಾಮಿ, ಮಾಜಿ ಮೇಯರ್‌ ರಾಮಚಂದ್ರಪ್ಪ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್‌?

CM Siddu

Caste census: ನಾಡಿದ್ದು ಸಿಎಂ ಸಿದ್ದರಾಮಯ್ಯ ಮಹತ್ವದ ಸಭೆ

Result: ಇಂದು ಯುಜಿನೀಟ್‌ ಪರಿಷ್ಕೃತ ತಾತ್ಕಾಲಿಕ ಫ‌ಲಿತಾಂಶ ಪ್ರಕಟ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

Salman Khan: 5 ಕೋಟಿ ನೀಡಿ, ಇಲ್ಲದಿದ್ದರೆ… ಸಲ್ಮಾನ್ ಖಾನ್ ಗೆ ಮತ್ತೆ ಜೀವ ಬೆದರಿಕೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.