RamaNagar: ಗುರುವಿನಂತೆ ಶಿಷ್ಯನಿಗೂ ಮುಖ್ಯಮಂತ್ರಿ ಹುದ್ದೆ ಕೈಜಾರಿತಾ?

ಕರಗಿತೇ ಕನಕಪುರ ಬಂಡೆಯ ಸಿಎಂ ಕನಸು

Team Udayavani, May 19, 2023, 5:43 PM IST

RamaNagar: ಗುರುವಿನಂತೆ ಶಿಷ್ಯನಿಗೂ ಮುಖ್ಯಮಂತ್ರಿ ಹುದ್ದೆ ಕೈಜಾರಿತಾ?

ರಾಮನಗರ: ಮುಖ್ಯಮಂತ್ರಿ ಹುದ್ದೆಯ ಮಹತ್ವಾಕಾಂಕ್ಷೆಯೊಂದಿಗೆ ರಾಜಕಾರಣದಲ್ಲಿ ಒಂದೊಂದೇ ಮೆಟ್ಟಿಲು ಹತ್ತಿದ್ದ ಕನಕಪುರದ ಬಂಡೆ ಡಿ.ಕೆ.ಶಿವಕುಮಾರ್‌ ಗೆ ಕೊನೇಕ್ಷಣದಲ್ಲಿ ನಿರಾಸೆ ಕವಿದಿದೆ. ಹೈಕಮಾಂಡ್‌ ಕೊನೆ ಕ್ಷಣದಲ್ಲಿ ಸಿದ್ದರಾಮಯ್ಯ ಸಿಎಂ ಆಗಲು ಹಸಿರು ನಿಶಾನೆ ತೋರಿದ್ದು, ಇದರೊಂದಿಗೆ ಸಿಎಂ ಕನಸಿನೊಂದಿಗೆ 40 ವರ್ಷದಿಂದ ಸಾಕಷ್ಟು ಪರಿಶ್ರಮ ವಹಿಸಿದ್ದ ಡಿ.ಕೆ. ಶಿವಕುಮಾರ್‌ ಕನಸು ಕರಗಿದೆ.

ಕೈಜಾರಿತು:1985ರಲ್ಲಿ ಸಾತನೂರು ಕ್ಷೇತ್ರದಿಂದ ಅಂದಿನ ಪ್ರಭಾವಿ ಒಕ್ಕಲಿಗ ನಾಯಕ ಎಚ್‌.ಡಿ. ದೇವೇಗೌಡರ ವಿರುದ್ಧ ಸ್ಪರ್ಧೆ ಮಾಡುವ ಮೂಲಕ ರಾಜಕೀಯ ಪ್ರವೇಶಿಸಿದ ಡಿ.ಕೆ.ಶಿವಕುಮಾರ್‌ ಅಂದಿನಿಂದ ಇಂದಿನವರೆಗೆ ರಾಜಕಾರ ಣದಲ್ಲಿ ಸವಾಲು ಗಳನ್ನು ಎದುರಿಸುತ್ತಲೇ ಬಂದವರು. 8 ಬಾರಿ ಶಾಸಕರಾಗಿ, ಕೆಪಿಸಿಸಿ ಅಧ್ಯಕ್ಷರಾಗಿ ಪಕ್ಷವನ್ನ ಅಧಿಕಾರಕ್ಕೆ ತಂದರಾದರೂ ಸಿಎಂ ಗಾದಿಗೆ ತೀವ್ರ ಕಸರತ್ತು ನಡೆಸಿದರೂ ಅವಕಾಶ ಕೈ ಜಾರಿದೆ.

ಅಸಮಾಧಾನ: ಡಿ.ಕೆ.ಶಿವಕುಮಾರ್‌ ಕಾಂಗ್ರೆಸ್‌ನಿಂದ ಮುಖ್ಯಮಂತ್ರಿಯಾಗುತ್ತಾರೆ ಎಂಬ ಭರವಸೆ ಮೇರೆಗೆ ಒಕ್ಕಲಿಗ ಸಮುದಾಯ ಈ ಬಾರಿಯ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್‌ರನ್ನು ಬೆಂಬಲಿಸಿತ್ತು. ಪ್ರತಿ ಚುನಾವಣೆಯಲ್ಲಿ ಶೇ.18ಕ್ಕೆ ಕಡಿಮೆ ಇಲ್ಲದಷ್ಟು ಮತ ಪಡೆಯುತ್ತಿದ್ದ ಜೆಡಿಎಸ್‌ ಈ ಬಾರಿಯ ಚುನಾವಣೆಯಲ್ಲಿ ಶೇ.13ಕ್ಕೆ ಕುಸಿದಿದೆ. ಒಕ್ಕಲಿಗ ಮತ ಹೆಚ್ಚಿರುವ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್‌ ನಾನು ಮುಂದಿನ ಸಿಎಂ ಎಂದು ಪ್ರಚಾರ ಮಾಡಿದ್ದರು. ಇದೀಗ ಸಿಎಂ ಹುದ್ದೆ ಡಿ.ಕೆ.
ಶಿವಕುಮಾರ್‌ ಕೈಜಾರಿರುವುದು ಒಕ್ಕಲಿಗ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ.

ಗುರುವಿನಂತೆ ಶಿಷ್ಯನಿಗೂ ಮುಖ್ಯಮಂತ್ರಿ ಹುದ್ದೆ ಕೈಜಾರಿತಾ?
31 ವರ್ಷಗಳ ಹಿಂದೆ ಗುರುವಿಗೆ ಸಿಎಂ ಗಾದಿ ಕೈಜಾರಿದ ರೀತಿಯಲ್ಲೇ ಇದೀಗ ಅವರ ಶಿಷ್ಯನಿಗೂ ಸಿಎಂ ಗಾದಿ ಕೈಜಾರಿತಾ?. ಇಂತಹದ್ದೊಂದು ಪ್ರಶ್ನೆ ಇದೀಗ ರಾಜಕೀಯ ಪಾಳಯದಲ್ಲಿ ಶುರುವಾಗಿದೆ. 1992ರಲ್ಲಿ ಎಸ್‌.ಎಂ.ಕೃಷ್ಣ ಅವರಿಗೆ ಸಿಎಂ ಗಾದಿ ದೊರೆಯಲಿದೆ ಎಂದು ನಂಬಲಾಗಿತ್ತು.

ಸಿಎಂ ಆಗುತ್ತೇನೆ ಎಂಬ ವಿಶ್ವಾಸದಲ್ಲಿ ಎಸ್‌.ಎಂ.ಕೃಷ್ಣ ತಮ್ಮ ಮನೆದೇವರು ಮಲೈಮಹದೇಶ್ವರ ಬೆಟ್ಟಕ್ಕೆ ಹೋಗಿ ಪೂಜೆ ಮಾಡಿಸಿ ವಾಪಸ್‌ ಬೆಂಗಳೂರಿಗೆ ಬಂದವರಿಗೆ ಶಾಕ್‌ ಕಾದಿತ್ತು. ಹೈಕಮಾಂಡ್‌ ಕಳುಹಿಸಿದ ಲಕೋಟೆಯಲ್ಲಿ ವೀರಪ್ಪಮೊಯ್ಲಿ ಹೆಸರಿತ್ತು. ಈ ಘಟನೆಯಿಂದ ನಿರಾಶೆಗೊಂಡ ಒಕ್ಕಲಿಗ ಸಮುದಾಯ ಕಾಂಗ್ರೆಸ್‌ನಿಂದ ದೂರವಾದರು ಎನ್ನಲಾಗಿದೆ.

ಅಲ್ಲದೇ, ಒಕ್ಕಲಿಗರಿಗೆ ರಾಜಕೀಯ ಸ್ಥಾನಮಾನ ಸಿಗಬೇಕು ಎಂಬ ಉದ್ದೇಶದಿಂದ ರಾಜ್ಯದಲ್ಲಿ 1993ರಲ್ಲಿ ಆದಿಚುಂಚನಗಿರಿ ಶ್ರೀಗಳಾದ ಬಾಲಗಂಗಾಧರನಾಥ ಸ್ವಾಮೀಜಿ ನೇತೃತ್ವದಲ್ಲಿ ಬೃಹತ್‌ ರ್ಯಾಲಿ ನಡೆಸಲಾಯಿತು. ಬಳಿಕ ಒಕ್ಕಲಿಗ ಸಮುದಾಯ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರ ಬೆಂಬಲಕ್ಕೆ ನಿಂತಿತು. ಈ ಘಟನೆ ಬಳಿಕ ಮತ್ತೆ ಒಕ್ಕಲಿಗರು ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್‌ಗೆ ಬೆಂಬಲ ನೀಡಿದ್ದು ಈ ಚುನಾವಣೆಯಲ್ಲಿ ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ ಎಂಬ ನಿರೀಕ್ಷೆಯಲ್ಲಿ. ಇದೀಗ
ತನ್ನ ರಾಜಕೀಯ ಗುರು ಎಸ್‌.ಎಂ.ಕೃಷ್ಣ ಅವರಿಗೆ ಎದುರಾದ ಪರಿಸ್ಥಿತಿಯನ್ನೇ ಡಿ.ಕೆ.ಶಿವಕುಮಾರ್‌ ಎದುರಿಸುವಂತಾಗಿದೆ.

ಟ್ರಬಲ್‌ ಶೂಟರ್‌ಗೆ, ಅಧಿಕಾರದ ಟ್ರಬಲ್‌
ಕಾಂಗ್ರೆಸ್‌ ಸಂಕಷ್ಟಕ್ಕೆ ಸಿಲುಕಿದ್ದಾಗಲೆಲ್ಲಾ ಪಕ್ಷದ ಪರವಾಗಿ ಕಣಕ್ಕಿಳಿಯುವ ಟ್ರಬಲ್‌ಶೂಟರ್‌ ಡಿ.ಕೆ.ಶಿವಕುಮಾರ್‌ಗೆ ಅಧಿಕಾರ ಸಿಕ್ಕಿದ್ದು ಟ್ರಬಲ್‌ನಲ್ಲೇ ಎಂಬುದು ಗಮನಾರ್ಹ. 1989ರಲ್ಲಿ ಪ್ರಥಮ ಬಾರಿಗೆ ಗೆದ್ದು ಶಾಸಕರಾದ ಇವರು ಬಂಗಾರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ಆದರೆ, 1994ರಲ್ಲಿ ಕಾಂಗ್ರೆಸ್‌ನಿಂದ ಟಿಕೆಟ್‌ ನಿರಾಕರಿಸಿದ ಪರಿಣಾಮ ಪಕ್ಷೇತರವಾಗಿ ಸ್ಪರ್ಧಿಸಿ ಗೆದ್ದರು. ಇನ್ನು ಮಾಜಿ ಪ್ರಧಾನಿ ದೇವೇಗೌಡರ ಕೆಂಗಣ್ಣಿಗೆ ಗುರಿಯಾದ ಇವರು 2004ರಲ್ಲಿ ಕಾಂಗ್ರೆಸ್‌-ಜೆಡಿಎಸ್‌ ದೋಸ್ತಿ ಸರ್ಕಾರದಲ್ಲಿ ಸಚಿವ ಸ್ಥಾನ ವಂಚಿತರಾದರು. 2013ರಲ್ಲಿ ಕಾಂಗ್ರೆಸ್‌ ಸ್ಪಷ್ಟಬಹುಮತದೊಂದಿಗೆ ಅಧಿಕಾರಕ್ಕೆ ಬಂದಿತಾದರೂ ಸಿದ್ದರಾಮಯ್ಯ ಸಂಪುಟಕ್ಕೆ 7 ತಿಂಗಳ ಕಾಲ ಇವರಿಗೆ ಎಂಟ್ರಿ ಕೊಟ್ಟಿರಲಿಲ್ಲ. ಇನ್ನು ಕೆಪಿಸಿಸಿ ಅಧ್ಯಕ್ಷ ಸ್ಥಾನವನ್ನು ಅಳೆದು ತೂಗಿ ನೀಡಲಾಯಿತು. ಒಟ್ಟಾರೆ ಟ್ರಬಲ್‌ ಶೂಟರ್‌ಗೆ ಸಾಕಷ್ಟು ಬಾರಿ ಅಧಿಕಾರದ ಟ್ರಬಲ್‌ ಆಗಿರುವುದಂತು ನಿಜ.

● ಸು.ನಾ.ನಂದಕುಮಾರ್‌

ಟಾಪ್ ನ್ಯೂಸ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

Karnataka BJP: ಬಿಜೆಪಿ ಹೈಕಮಾಂಡ್ ಗೆ ರಾಜ್ಯ ಬಿಜೆಪಿ ನುಂಗಲಾರದ ತುತ್ತು?

By Poll:ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

By Poll: ಅಯೋಧ್ಯೆ ಸೋಲಿಗೆ ಸೇಡು ತೀರಿಸಿಕೊಂಡ ಯೋಗಿ- ಮಿಲ್ಕಿಪುರ್‌ ಬಿಜೆಪಿ ತೆಕ್ಕೆಗೆ

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Polls Results 2025:ದೆಹಲಿಯಲ್ಲಿ ಸತತ 3ನೇ ಅವಧಿಗೂ ಕಾಂಗ್ರೆಸ್‌ ಶೂನ್ಯ ಸಂಪಾದನೆ!?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Delhi Assembly Election: ದೆಹಲಿ ಮತ ಎಣಿಕೆ ಆರಂಭ; ಯಾರ ಪಾಲಾಗಲಿದೆ ದಿಲ್ಲಿಯ ಗದ್ದುಗೆ?

Voting in Delhi today: A triangular battle for the Capital

Delhi Election: ದಿಲ್ಲಿಯಲ್ಲಿಂದು ಮತದಾನ: ಕುರ್ಚಿಗಾಗಿ ತ್ರಿಕೋನ ಕದನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.