Ayodhya: ರಾಮಲಲ್ಲಾನಿಗೆ ರಾಮನಂದಿ ಪೂಜೆ
Team Udayavani, Dec 14, 2023, 8:09 PM IST
ರಾಮಲಲ್ಲಾನ ಪ್ರಾಣ ಪ್ರತಿಷ್ಠಾಪನೆ ಸಮಾರಂಭಕ್ಕೆ ಸಿದ್ಧತೆಗಳೆಲ್ಲವೂ ಭರದಿಂದ ಸಾಗುತ್ತಿದ್ದು, ಇಡೀ ಅಯೋಧ್ಯೆಯಲ್ಲಿ ಸಂಭ್ರಮದ ವಾತಾವರಣ ಏರ್ಪಟ್ಟಿದೆ. ಅಯೋಧ್ಯೆಯ ಜನರು ನೂರಾರು ವರ್ಷಗಳಿಂದ ನಡೆದುಬರುತ್ತಿರುವ ತಮ್ಮ ಸಂಪ್ರದಾಯಿಕ ಪೂಜಾ ವಿಧಾನದ ಮೂಲಕವೇ ಬಾಲರಾಮನ ಸ್ವಾಗತಿಸಲು ಕಾದಿದ್ದಾರೆ. ಯಾವುದು ಆ ವಿಶಿಷ್ಟ ಪೂಜಾ ವಿಧಾನ ? ಎಂಬುದರ ವಿವರ ಹೀಗಿದೆ.
ದ್ವಿವಿಧ ಪೂಜಾ ಪರಂಪರೆ
ಮರ್ಯಾದ ಪುರುಷೋತ್ತಮ ರಾಮನನ್ನು ಜಗದೊಡೆಯ ಎಂದೇ ಪೂಜಿಸಿದರೂ, ಅಯೋಧ್ಯೆಯಲ್ಲಿ ಆತನಿನ್ನೂ ಬಾಲಕ. ಸಹಸ್ರಾರು ವರ್ಷಗಳಿಂದಲೂ ರಾಮನನ್ನು ಬಾಲ ರೂಪದಲ್ಲೇ ಪೂಜಿಸುತ್ತಾ ಬರಲಾಗಿದೆ. ಇದಕ್ಕಾಗಿ ಅಲ್ಲಿನ ದೇಗುಲಗಳಲ್ಲಿ ಅನುಸರಿಸುವ ವಿಶೇಷ ಪೂಜಾ ವಿಧಾನವೇ ರಾಮನಂದಿ!. ಶ್ರೀ ಜಗದ್ಗುರು ರಮಾನಂದಾಚಾರ್ಯರು ಈ ಸಂಪ್ರದಾಯವನ್ನು ಆರಂಭಿಸಿದರು ಎನ್ನಲಾಗುತ್ತದೆ. ಪ್ರೌಢಾವಸ್ತೆಯ ರಾಮನ ಆರಾಧನೆಗೆ ರಾಮಾನುಜಚಾರ್ಯ ಪೂಜಾ ವಿಧಾನ ಅನುಸರಿಸುವಂತೆಯೇ ರಾಮಲಲ್ಲಾನ ಪೂಜಿಸುವ ಎಲ್ಲ ದೇಗುಲಗಳೂ ಈ ರಾಮನಂದಿ ಪೂಜಾ ವಿಧಾನವನ್ನು ಅನುಸರಿಸುತ್ತವೆ.
ಬೆಳಗಾಯಿತು ಏಳ್ಳೋ ರಾಮ !
ರಾಮನಂದಿ ಪೂಜಾ ವಿಧಾನದ ಪ್ರಮುಖ ವೈಶಿಷ್ಟéವೇ ರಾಮನನ್ನು ನಿದ್ದೆಯಿಂದ ಎಬ್ಬಿಸುವುದಂತೆ. ದಿನಂಪ್ರತಿ ಮುಂಜಾನೆ ಮಲಗಿರುವ ಮಗುವನ್ನು ಎಬ್ಬಿಸುವಂತೆಯೇ ರಾಮಲಲ್ಲಾನ ವಿಗ್ರಹವನ್ನು ಎಚ್ಚರಗೊಳಿಸುವುದರೊಂದಿಗೆ ಈ ಪೊಜಾವಿಧಿ ಆರಂಭಗೊಳ್ಳುತ್ತದೆ. ಬಳಿಕ ಆತನಿಗೆ ಅಭ್ಯಂಜನ (ಸ್ನಾನ) ಮಾಡಿಸಿ, ಚಂದನ, ಜೇನು ತುಪ್ಪ ಲೇಪಿಸಿ, ಬಣ್ಣದ ಬಟ್ಟೆಗಳನ್ನು ತೊಡಿಸಿ, ಆತನಿಗೊಪ್ಪುವ ಅಲಂಕಾರವನ್ನು ಮಾಡಲಾಗುತ್ತದೆ. ನಂತರ ಬಾಲ ರಾಮನಿಗೆ ಏನು ಇಷ್ಟವೋ ಅದೇ ತಿನಿಸನ್ನು ನೇವೇದ್ಯ ಮಾಡಿ, ಆರತಿ ಮಾಡಲಾಗುತ್ತದೆ. ಆತನ ನಿದ್ದೆ, ಆಟ, ಸೇವೆ ಎಲ್ಲವನ್ನೂ ಮಾಡುತ್ತಾ ಬೆಳಗ್ಗಿನಿಂದ ರಾತ್ರಿಯವರೆಗೆ 16 ವಿಧಿವಿಧಾನಗಳನ್ನು ಈ ರಾಮನಂದಿ ಸಂಪ್ರದಾಯದ ಅನ್ವಯ ನೆವೇರಿಸಲಾಗುತ್ತದೆ. ರಾಮನ ಪ್ರಾಣಪ್ರತಿಷ್ಠೆ ದಿನದಂದು ಇಡೀ ಅಯೋಧ್ಯೆಯ ಎಲ್ಲ ದೇಗುಲಗಳಲ್ಲೂ ಇದೇ ಪೂಜಾ ವಿಧಿ ನಡೆಯಲಿದೆ.
ಮುಸಲ್ಮಾನರಿಂದ ವಿಗ್ರಹ ಕೆತ್ತನೆ
ರಾಮ ಮಂದಿರ ಆವರಣದಲ್ಲಿ ನೆಲೆಗೊಳ್ಳಲಿರುವ ಪ್ರಭು ಶ್ರೀರಾಮನ ವಿವಿಧ ರೂಪದ ವಿಗ್ರಹಗಳ ಕೆತ್ತನೆ ಬಹುತೇಕ ಪೂರ್ಣಗೊಂಡಿವೆ. ವಿಶೇಷವಂದರೆ ಇವುಗಳನ್ನು ಕೆತ್ತನೆ ಮಾಡಿರುವುದು ಪಶ್ಚಿಮ ಬಂಗಾಳದ ಖ್ಯಾತ ಮುಸ್ಲಿಂ ಶಿಲ್ಪಿಗಳು. ಹೌದು, ಮೊಹಮ್ಮದ್ ಜಲಾಲುದ್ದೀನ್ ಹಾಗೂ ಅವರ ಮಗ ಬಿಟ್ಟು ಫೈಬರ್ ರಾಮನ ಮೂರ್ತಿಗಳನ್ನು ತಯಾರಿಸಿದ್ದಾರೆ. ಆಳೆತ್ತರ ಈ ಶಿಲ್ಪಗಳು ಮಂದಿರ ಹೊರಾಂಗಣದಲ್ಲಿದ್ದರೂ ಮಳೆ, ಬಿಸಿಲು ಎಲ್ಲ ಸಮಯದಲ್ಲಿಯೂ ಸ್ಥಿರವಾಗಿರಬಲ್ಲಂಥದ್ದಾಗಿವೆ. ಜಾಲತಾಣದಲ್ಲಿ ಮೊಹಮ್ಮದ್ ಅವರ ಕಲೆ ನೋಡಿ ಅಯೋಧ್ಯೆಯಿಂದಾ ಆರ್ಡರ್ ನೀಡಲಾಗಿದ್ದು, ಕಲೆಯೇ ನನ್ನ ಧರ್ಮ ಎಂದು ಜಲಾಲುದ್ದೀನ್ ಹೇಳಿಕೊಂಡಿದ್ದಾರೆ.
ವಿದೇಶದಿಂದ ಅರಿಶಿಣ
ಮಂದಿರ ಉದ್ಘಾಟನೆ ಸಮಾರಂಭಕ್ಕೆ ಬಳಕೆ ಮಾಡಲೆಂದು ಕಾಂಬೋಡಿಯಾ ಮತ್ತು ಥೈಲ್ಯಾಂಡ್ನಿಂದ ಅರಿಶಿಣವನ್ನು ಅಯೋಧ್ಯೆಗೆ ಕಳುಹಿಸಲಾಗಿದೆ. ಥೈಲ್ಯಾಂಡ್ನಲ್ಲಿ ಅಯುತ್ಯಾ ಎಂಬ ಜಾಗವನ್ನು ಮಿನಿ ಅಯೋಧ್ಯೆ ಎಂದೇ ಗುರಿತಿಸಲಾಗುತ್ತದೆ. ಅಲ್ಲಿಂದಲೇ ಅರಿಶಿಣವನ್ನು ತರಿಸಲಾಗಿದೆ ಎಂದು ಮಂದಿರ ಟ್ರಸ್ಟ್ ತಿಳಿಸಿದೆ. ಇತ್ತ ಉ.ಪ್ರದೇಶದ ನೆರೆ ರಾಜ್ಯ ಮಧ್ಯಪ್ರದೇಶವೂ ಮಂದಿರ ಉದ್ಘಾಟನೆಗೆ ಕೈ ಜೋಡಿಸಿದ್ದು, ಅಯೋಧ್ಯೆಗೆ ತೆರಳುವವರಿಗೆ ತಿಲಕ ಇಟ್ಟು, ಎಲ್ಲ ರೀತಿಯ ಸೌಕರ್ಯ ಏರ್ಪಡಿಸಿಕೊಡುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ
PM: ಕಾಂಗ್ರೆಸ್ ಡ್ರಗ್ಸ್ ದಂಧೆ ಹಣ ಚುನಾವಣೆ ಗೆಲ್ಲಲು ಬಳಸಿಕೊಳ್ಳುತ್ತಿದೆ: ಪ್ರಧಾನಿ ಮೋದಿ
IFFI: ನವೆಂಬರ್ 20ರಿಂದ ಗೋವಾದಲ್ಲಿ 55ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ
Theft Case: ಬ್ಯಾಂಕಿನಿಂದ ಹಣದ ಬ್ಯಾಗ್ ಕಳವು ಪ್ರಕರಣ
Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?
Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ
ನಾಡೋಜ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.