![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Feb 6, 2024, 10:44 PM IST
ಬೆಂಗಳೂರು: ಅನಾರೋಗ್ಯ ದಿಂದ ಸಂಪೂರ್ಣ ಚೇತರಿಸಿಕೊಂಡ ಮಾಯಾಂಕ್ ಅಗರ್ವಾಲ್ ಮರಳಿ ಕರ್ನಾಟಕ ರಣಜಿ ತಂಡವನ್ನು ಕೂಡಿಕೊಂಡಿದ್ದಾರೆ. ತಮಿಳುನಾಡು ವಿರುದ್ಧದ “ಸಿ” ವಿಭಾಗದ ಪಂದ್ಯದಲ್ಲಿ ಕರ್ನಾಟಕವನ್ನು ಮರಳಿ ಮುನ್ನಡೆಸಲಿದ್ದಾರೆ.
ತ್ರಿಪುರ ವಿರುದ್ಧದ ರಣಜಿ ಪಂದ್ಯ ಮುಗಿಸಿ ಸೂರತ್ಗೆ ವಿಮಾನದಲ್ಲಿ ಪ್ರಯಾಣಿಸುವಾಗ ಪಾನೀಯ ವೊಂದನ್ನು ಸೇವಿಸಿದ ಪರಿಣಾಮ ಅಗರ್ವಾಲ್ ತೀವ್ರ ಅಸ್ವಸ್ಥರಾಗಿದ್ದರು. ಅಗರ್ತಲಾ ಆಸ್ಪತ್ರೆಗೆ ದಾಖಲಾದ ಬಳಿಕ ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿದ್ದರು. ಇದರಿಂದ ರೈಲ್ವೇಸ್ ಎದುರಿನ ರಣಜಿ ಪಂದ್ಯದಲ್ಲಿ ಆಡಲು ಸಾಧ್ಯವಾಗಿರಲಿಲ್ಲ.
ಕರ್ನಾಟಕ ದ್ವಿತೀಯ
ಕರ್ನಾಟಕ – ತಮಿಳುನಾಡು ನಡು ವಿನ ರಣಜಿ ಪಂದ್ಯ ಫೆ. 9ರಂದು ಚೆನ್ನೈಯಲ್ಲಿ ಆರಂಭವಾಗಲಿದೆ. “ಸಿ’ ಗುಂಪಿನಲ್ಲಿ ಎರಡೂ ತಂಡಗಳು ತಲಾ 21 ಅಂಕ ಹೊಂದಿವೆ. ಆದರೆ ರನ್ರೇಟ್ ಲೆಕ್ಕಾಚಾರದಲ್ಲಿ ತಮಿಳುನಾಡು ಅಗ್ರಸ್ಥಾನಿಯಾಗಿದೆ (0.597). ಕರ್ನಾ ಟಕ 0.435 ರನ್ರೇಟ್ ಹೊಂದಿದೆ.
ಪಡಿಕ್ಕಲ್ ಕೂಡ ಲಭ್ಯ
ಮಾಯಾಂಕ್ ಅಗರ್ವಾಲ್ ಪುನರಾಗ ಮನದಿಂದ ಕರ್ನಾಟಕದ ಬ್ಯಾಟಿಂಗ್ ಸರದಿ ಬಲಿಷ್ಠಗೊಳ್ಳಲಿದೆ. ಜತೆಗೆ ಇನ್ಫಾರ್ಮ್ ಬ್ಯಾಟರ್ ದೇವದತ್ತ ಪಡಿಕ್ಕಲ್ ಕೂಡ ಲಭ್ಯರಾಗುವರು. ಇಷ್ಟು ದಿನ ಅವರು ಭಾರತ “ಎ’ ತಂಡದ ಪರ ಆಡುತ್ತಿದ್ದರು. ಇವರಿಬ್ಬರಿಗಾಗಿ ಡೇಗ ನಿಶ್ಚಲ್ ಮತ್ತು ಅಭಿಷೇಕ್ ಶೆಟ್ಟಿ ಅವರನ್ನು ಕೈಬಿಡಲಾಗಿದೆ.
ಕರ್ನಾಟಕ ತಂಡ: ಮಾಯಾಂಕ್ ಅಗರ್ವಾಲ್ (ನಾಯಕ), ನಿಕಿನ್ ಜೋಸ್ (ಉಪನಾಯಕ), ದೇವದತ್ತ ಪಡಿಕ್ಕಲ್, ಆರ್. ಸಮರ್ಥ್, ಮನೀಷ್ ಪಾಂಡೆ, ಶರತ್ ಶ್ರೀನಿವಾಸ್, ಅನೀಶ್ ಕೆ.ವಿ., ವೈಶಾಖ್ ವಿಜಯ್ಕುಮಾರ್, ವಾಸುಕಿ ಕೌಶಿಕ್, ಶಶಿಕುಮಾರ್ ಕೆ., ಸುಜಯ್ ಸಾತೇರಿ, ವಿದ್ವತ್ ಕಾವೇರಪ್ಪ, ವೆಂಕಟೇಶ್ ಎಂ., ಕಿಶನ್ ಎಸ್. ಬೆಡಾರೆ, ರೋಹಿತ್ ಕುಮಾರ್ ಎ.ಸಿ., ಹಾರ್ದಿಕ್ ರಾಜ್.
ಕೋಚ್: ಪಿ.ವಿ. ಶಶಿಕಾಂತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
You seem to have an Ad Blocker on.
To continue reading, please turn it off or whitelist Udayavani.