![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
ಸರ್ಕಾರಿ ಜಮೀನು ಏಕವ್ಯಕ್ತಿ ಕೋರಿಕೆ ಅರ್ಜಿಗಳ ಶೀಘ್ರ ವಿಲೇವಾರಿ: ಆರ್ ಅಶೋಕ್
Team Udayavani, Dec 15, 2021, 10:00 PM IST
![ಸರ್ಕಾರಿ ಜಮೀನು ಏಕವ್ಯಕ್ತಿ ಕೋರಿಕೆ ಅರ್ಜಿಗಳ ಶೀಘ್ರ ವಿಲೇವಾರಿ: ಆರ್ ಅಶೋಕ್](https://www.udayavani.com/wp-content/uploads/2021/12/ASHOK-6-620x442.jpg)
ಸುವರ್ಣವಿಧಾನಸೌಧ: ಗೋಮಾಳ ಸೇರಿ ಸರ್ಕಾರಿ ಜಮೀನು ಮಂಜೂರುದಾರರಿಗೆ ಏಕವ್ಯಕ್ತಿ ಕೋರಿಕೆ ಮೇಲೆ ಸಲ್ಲಿಸಿದ ಸಮೀಕ್ಷೆ ಅರ್ಜಿಗಳನ್ನು ಶೀಘ್ರವೇ ವಿಲೇವಾರಿ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.
ಬುಧವಾರ ಪರಿಷತ್ತಿನಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಕೇಳಿದ ಪ್ರಶ್ನೆಗೆ ಉತ್ತರಿಸಿ, ಸರ್ಕಾರಿ ಜಮೀನು ಪೋಡಿ ವಿಚಾರದಲ್ಲಿ ಈವರೆಗೂ ಅನೇಕ ಗೊಂದಲಗಳಿದ್ದವು. ಮೊದಲು ನೀಡಿದವರಿಗೆ ಇದನ್ನು ಕೊಡಬೇಕಾ ಅಥವಾ ನಂತರ ಪಡೆದವರಿಗೆ ಕೊಡಬೇಕಾ ಎನ್ನುವ ಸಮಸ್ಯೆ ಎದುರಾಗಿದೆ. ಈ ವಿಚಾರದಲ್ಲಿ ಅನೇಕರು ನ್ಯಾಯಾಲಯದ ಮೆಟ್ಟಿಲು ಹತ್ತಿದ್ದು, ಲಕ್ಷಾಂತರ ಪ್ರಕರಣಗಳು ಅಡಕತ್ತರಿಯಲ್ಲಿ ಸಿಲುಕಿಕೊಂಡಿವೆ.
ಇಲ್ಲಿ ಭೂಮಿ ಯಾರಿಗೆ ನೀಡಬೇಕು ಎಂಬುದನ್ನು ನಿರ್ಧಾರ ಮಾಡಬೇಕಾಗಿದೆ. 2019 ರಿಂದ 2021ರವರೆಗೆ 193687 ಅರ್ಜಿಗಳು ಹಾಗೂ ಆರ್ಟಿಸಿ ತಿದ್ದುಪಡಿಗೆ 373234 ಸೇರಿ ಒಟ್ಟು 566921 ಅರ್ಜಿಗಳು ಬಂದಿವೆ. ಈ ಎಲ್ಲ ಅರ್ಜಿಗಳನ್ನು ಕಂದಾಯ ಅದಾಲತ್ನಲ್ಲಿ ಇತ್ಯರ್ಥ ಪಡಿಸಲಾಗಿದೆ. ಈ ಪೈಕಿ 193687 ಅರ್ಜಿಗಳು ಇತ್ಯರ್ಥ ಪಡಿಸಲಾಗಿದೆ ಎಂದರು.
ಇದನ್ನೂ ಓದಿ:ಹಿರಿಯ ಸಾಹಿತಿ ಮಳಿಯಪ್ಪ ಪತ್ತಾರ ನಿಲೋಗಲ್ ಹೃದಯಾಘಾತದಿಂದ ನಿಧನ
ಇದೀಗ 2000 ಭೂ ಸಮೀಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ. ಇನ್ನೂ ಎರಡು ಸಾವಿರ ಭೂ ಸಮೀಕ್ಷಕರನ್ನು ನೇಮಿಸಿಕೊಳ್ಳಲಾಗುವುದು. ಹೀಗಾಗಿ ಹೆಚ್ಚು ಸಮೀಕ್ಷಕರು ಬಂದ ನಂತರವಷ್ಟೇ ಇದಕ್ಕೆ ಪರಿಹಾರ ಸಿಕ್ಕುತ್ತದೆ. ಕೂಡಲೇ ಏಕವ್ಯಕ್ತಿ ಅರ್ಜಿಗಳ ಶೀಘ್ರ ವಿಲೇವಾರಿ ಮಾಡುತ್ತೇವೆ ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
![Mangaluru: ರಾಹುಲ್ ಗಾಂಧಿಯನ್ನು ಪೇಜಾವರ ಶ್ರೀ ಟೀಕಿಸಿದ್ದು ಸರಿಯಲ್ಲ : ಪದ್ಮರಾಜ್](https://www.udayavani.com/wp-content/uploads/2024/07/padmaraj-415x291.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Police-Head](https://www.udayavani.com/wp-content/uploads/2024/07/Police-Head-150x86.jpg)
Karnataka Police ಸುಳ್ಳು ಸುದ್ದಿ ತಡೆಗೆ ಎಐ ಬಳಸಿ: ಸಿಎಂ ಸಿದ್ದರಾಮಯ್ಯ ಸೂಚನೆ
![Prahalad-Joshi](https://www.udayavani.com/wp-content/uploads/2024/07/Prahalad-Joshi-150x90.jpg)
MUDA Scam ತನಿಖೆ ಸಿಬಿಐಗೆ ವಹಿಸಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ
![23](https://www.udayavani.com/wp-content/uploads/2024/07/23-150x90.jpg)
“140ಕ್ಕೂ ಹೆಚ್ಚು ಮುಡಾ ಕಡತ ಕದ್ದೊಯ್ದ ಅಧಿಕಾರಿಗಳು’ʼ: ಶಾಸಕ ಟಿ.ಎಸ್. ಶ್ರೀವತ್ಸ
![Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ](https://www.udayavani.com/wp-content/uploads/2024/07/earthquake1-150x81.jpg)
Earthquake: ತಿಕೋಟಾ ಭಾಗದಲ್ಲಿ ಲಘು ಭೂಕಂಪ… ಮನೆಯಿಂದ ಹೊರ ಓಡಿಬಂದ ಜನ
![RadhaMohan-das](https://www.udayavani.com/wp-content/uploads/2024/07/RadhaMohan-das-1-150x90.jpg)
Karnataka New Incharge: ಬಿಜೆಪಿ ನಾಯಕರಿಗೆ ಡಾ.ಅಗರ್ವಾಲ್ “ಇಂಜೆಕ್ಷನ್’
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.