![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, May 17, 2020, 5:13 AM IST
ಸದ್ಯ ಕೊರೊನಾ ಲಾಕ್ಡೌನ್ನಿಂದ ಸಿನಿಮಾ ರಂಗದ ಕೆಲಸಗಳು ಸಂಪೂರ್ಣವಾಗಿ ಸ್ಥಗಿತಗೊಂಡಿದೆ. ಇದರಿಂದಾಗಿ ರಶ್ಮಿಕಾ ಮಂದಣ್ಣ ಕೂಡ ಹೆ„ದರಾ ಬಾದ್ ಬಿಟ್ಟು ಕೊಡಗಿನ ತಮ್ಮ ಮನೆ ಸೇರಿಕೊಂಡಿದ್ದಾರೆ. ಇವೆಲ್ಲ ದರ ನಡುವೆ ಹೆ„ದರಾಬಾದ್ ನಲ್ಲಿ ಲಾಕ್ ಡೌನ್ ನಲ್ಲಿರುವ ನಟ ವಿಜಯ್ ದೇವರಕೊಂಡ ಇತ್ತೀಚೆಗೆ ಮನೆಯ ಲ್ಲಿಯೇ ತಮ್ಮ ಬರ್ತ್ ಡೇ ಆಚರಿಸಿಕೊಂಡಿದ್ದಾರೆ.
ಇದೇ ವೇಳೆ ರಶ್ಮಿಕಾ ಮಂದಣ್ಣ, ನನ್ನ ಕಾಮ್ರೇಡ್ ವಿಜಯ್ ದೇವರಕೊಂಡಗೆ ಹುಟ್ಟುಹಬ್ಬದ ಶುಭಾಶಯಗಳು ಎಂದು ಟ್ವೀಟ್ ಮಾಡುವ ಮೂಲಕ ಶುಭಾಶಯ ತಿಳಿಸಿದ್ದರು. ಆ ಟ್ವಿಟರ್ಗೆ ವಿಜಯ್ ದೇವರಕೊಂಡ ಪ್ರತಿಕ್ರಿಯೆ ಮಾಡಿದ್ದು, ಮಂದಣ್ಣ ಬೇಗ ಹೆ„ದರಾಬಾದ್ಗೆ ಬಾ ಚಿಲ್ ಮಾಡೋಣ. ನಮ್ಮ ಗ್ಯಾಂಗ್ ನಿನ್ನನ್ನು ತುಂಬ ಮಿಸ್ ಮಾಡಿ ಕೊಳ್ಳುತ್ತಿದೆ ಎಂದು ಹಾರ್ಟ್ಮತ್ತು ನಗುವ ಎಮೋಜಿ ಹಾಕಿ ಟ್ವೀಟ್ ಮಾಡಿ ದ್ದಾರೆ.
ವಿಜಯ್ ಈ ರೀತಿ ಟ್ವೀಟ್ ಮಾಡುತ್ತಿ ದ್ದಂತೆಯೇ ಅದಕ್ಕೆ ರಶ್ಮಿಕಾ ಕೂಡ ಸಖತ್ ಆಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ನನ್ನನ್ನು ಬಿಟ್ಟು ನೀವು ಯಾವುದೇ ಫನ್ ಮಾಡದಿರುವುದೇ ಉತ್ತಮ ಎಂದಿದ್ದಾರೆ. ಸದ್ಯ ರಶ್ಮಿಕಾ ಮತ್ತು ವಿಜಯ್ ಒಟ್ಟಿಗೆ ಯಾವುದೇ ಚಿತ್ರಗಳಲ್ಲಿ ಅಭಿನಯಿಸುತ್ತಿಲ್ಲ. ಆದರೆ ರಶ್ಮಿಕಾ ಮಂದಣ್ಣ ಕನ್ನಡಲ್ಲಿ ಧ್ರುವ ಸರ್ಜಾ ಜೊತೆ ಪೊಗರು ಚಿತ್ರದಲ್ಲಿ ಅಭಿನಯಿಸಿದ್ದಾರೆ. ಇನ್ನು ತಮಿಳಿನಲ್ಲಿ ಸುಲ್ತಾನ್ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಸದ್ಯ ರಶ್ಮಿಕಾ ಅಲ್ಲು ಅರ್ಜುನ್ ನಾಯಕರಾಗಿರುವ ಪುಷ್ಪ ಸಿನಿಮಾದಲ್ಲಿ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಈ ಚಿತ್ರ ಆಂಧ್ರದ ಚಿತ್ತೂರು ಹಿನ್ನೆಲೆಯಲ್ಲಿ ನಡೆಯಲಿದೆ. ಚಿತ್ತೂರು ಶೆ„ಲಿ ತೆಲುಗನ್ನೇ ಚಿತ್ರದಲ್ಲಿ ಬಳಸಬೇಕೆಂದು ನಿರ್ಧರಿಸಿರುವ ನಿರ್ದೇಶಕರು ಇಡೀ ಚಿತ್ರತಂಡಕ್ಕೆ ಆ ಭಾಷೆಯನ್ನು ಕಲಿಯುವಂತೆ ಸೂಚನೆ ನೀಡಿದ್ದಾರೆ. ಹಾಗಾಗಿ, ನಟಿ ರಶ್ಮಿಕಾ ಕೂಡಾ ಚಿತ್ತೂರು ಭಾಷಾ ಶೆ„ಲಿಗೆ ಬೆನ್ನು ಬಿದ್ದಿದ್ದಾರೆ. ಹಾಗಂತ ಚಿತ್ತೂರಲ್ಲಿ ಅಲ್ಲ. ಬದಲಾಗಿ ಕೂರ್ಗ್ನಲ್ಲಿ! ಹೌದು, ರಶ್ಮಿಕಾ ಕೂರ್ಗ್ ಬೆಡಗಿ. ಕಿರಿಕ್ ಪಾರ್ಟಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಬಂದ ರಶ್ಮಿಕಾ ಆ ನಂತರ ತೆಲುಗು ಚಿತ್ರರಂಗಕ್ಕೆ ಎಂಟ್ರಿಕೊಟ್ಟವರು. ಈಗ ಅಲ್ಲಿ ಬೇಡಿಕೆಯ ನಟಿ ಎನಿಸಿಕೊಂಡಿದ್ದಾರೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.