![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Jan 21, 2021, 11:33 AM IST
ಸದ್ಯ ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಕನ್ನಡಿಗ’ ಚಿತ್ರ ತೆರೆಗೆ ಬರಲು ತಯಾರಾಗುತ್ತಿದೆ. ಇತ್ತೀಚೆಗಷ್ಟೇ “ಕನ್ನಡಿಗ’ ಚಿತ್ರದ ಚಿತ್ರೀಕರಣ ರ್ಪೂಗೊಳಿಸಿರುವ ಚಿತ್ರತಂಡ, ಚಿತ್ರದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಲ್ಲಿ ನಿರತವಾಗಿದೆ. ಎಲ್ಲ ಅಂದುಕೊಂಡಂತೆ, ನಡೆದರೆ ಇದೇ ಏಪ್ರಿಲ್ ಎರಡನೇ ವಾರದ ಹೊತ್ತಿಗೆ “ಕನ್ನಡಿಗ’ ಚಿತ್ರವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
ಇದರ ನಡುವೆಯೇ “ಕನ್ನಡಿಗ’ ಚಿತ್ರದ ನಿರ್ಮಾಪಕ ಎನ್.ಎಸ್. ರಾಜಕುಮಾರ್ ಅವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ಹೊಸಚಿತ್ರಕ್ಕೆ ರವಿಚಂದ್ರನ್ ನಿರ್ದೇಶನ ಮಾಡಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ.
ಹೌದು, ಈ ಹಿಂದೆ “ಪೃಥ್ವಿ’, “ಜಟ್ಟಾ’, “ಮೈನಾ’, “ಮೈತ್ರಿ’ ಮೊದಲಾದ ಚಿತ್ರಗಳನ್ನು ನಿರ್ಮಿಸಿರುವ ಎನ್.ಎಸ್ ರಾಜಕುಮಾರ್ ಸದ್ಯ “ಕನ್ನಡಿಗ’ ಚಿತ್ರವನ್ನು ನಿರ್ಮಿಸುತ್ತಿದ್ದು, ಈ ಚಿತ್ರದ ಬಿಡುಗಡೆಗೂ ಮೊದಲೇ ರವಿಚಂದ್ರನ್ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ನಿರ್ಮಿಸುವ ಆಲೋಚನೆಯಲ್ಲಿದ್ದಾರೆ.
ಇದನ್ನೂ ಓದಿ:ಗೋವಾ ಚಿತ್ರೋತ್ಸವ: ಓಟಿಟಿ ಸಿನಿಮಾ ಮಂದಿರಗಳನ್ನು ಕೊಲ್ಲುತ್ತದೆಯೇ? ಒಂದು ಚರ್ಚೆ
ಈ ಬಗ್ಗೆ ಮಾತನಾಡುವ ನಿರ್ಮಾಪಕ ಎನ್.ಎಸ್ ರಾಜಕುಮಾರ್, “ರವಿಚಂದ್ರನ್ ಅವರ ನಿರ್ದೇಶನದಲ್ಲಿ ಹೊಸ ಚಿತ್ರವನ್ನು ನಿರ್ಮಿಸಲು ಯೋಚಿಸಲಾಗಿದೆ. ಈ ಚಿತ್ರವನ್ನು ನಿರ್ದೇಶಿಸಲು ರವಿಚಂದ್ರನ್ ಅವರ ಕಡೆಯಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಸದ್ಯಕ್ಕೆ ಚಿತ್ರದ ಒನ್ಲೈನ್ ಸ್ಟೋರಿ ನಮಗೆ ಒಪ್ಪಿಗೆಯಾಗಿದ್ದು, ಅದರ ಮೇಲೆ ಸ್ಕ್ರಿಪ್ಟ್ ಕೆಲಸ ಕೂಡ ಶುರುವಾಗಿದೆ.
ಇದೊಂದು ಪೊಲಿಟಿಕಲ್ ಸಬ್ಜೆಕ್ಟ್ ಸಿನಿಮಾ. ಸದ್ಯಕ್ಕೆ ಈ ಸಿನಿಮಾದ ಪ್ರೀ-ಪ್ರೊಡಕ್ಷನ್ ಕೆಲಸ ಆರಂಭವಾಗಿದ್ದು, ಸಿನಿಮಾದ ಟೈಟಲ್, ಕಲಾವಿದರು ಮತ್ತು ತಂತ್ರಜ್ಞರು ಇನ್ನಷ್ಟೇ ಫೈನಲ್ ಆಗಬೇಕಿದೆ. ನಮ್ಮ ಪ್ಲಾನ್ ಪ್ರಕಾರ ಇದೇ ಏಪ್ರಿಲ್-ಮೇ ವೇಳೆಗೆ ಈ ಸಿನಿಮಾ ಶುರು ಮಾಡುವ ಪ್ಲಾನ್ ಇದೆ. ಆದಷ್ಟು ಬೇಗ ಈ ಸಿನಿಮಾವನ್ನು ಅಧಿಕೃತವಾಗಿ ಅನೌನ್ಸ್ ಮಾಡಲಿದ್ದೇವೆ’ ಎಂದಿದ್ದಾರೆ.
ಇನ್ನು ಸದ್ಯ ರವಿಚಂದ್ರನ್ “ಕನ್ನಡಿಗ’ ಚಿತ್ರದಲ್ಲಿ ಅಭಿನಯಿಸುತ್ತಿರುವುದು ಒಂದೆಡೆಯಾಗಿದ್ದರೆ, ಅವರ ನಿರ್ದೇಶನದ “ರಾಜೇಂದ್ರ ಪೊನ್ನಪ್ಪ’, “ರವಿ ಭೋಪಣ್ಣ’ ಸಿನಿಮಾಗಳು ರಿಲೀಸ್ ಆಗಬೇಕಿದೆ. ಆ ಸಿನಿಮಾಗಳು ಬಿಡುಗಡೆಯಾದ ಮೇಲೆ ಈ ಚಿತ್ರ ಶುರುವಾಗಲಿದೆಯಾ, ಅಥವಾ ಅದಕ್ಕೂ ಮುನ್ನವೇ ಶುರುವಾಗಲಿದೆಯಾ ಅನ್ನೋದು ಇನ್ನಷ್ಟೇ ಗೊತ್ತಾಗಬೇಕಿದೆ. ಒಟ್ಟಾರೆ ರವಿಚಂದ್ರನ್ ನಿರ್ದೇಶನದ ಈ ಚಿತ್ರ ಸುದ್ದಿ ಅವರ ಅಭಿಮಾನಿಗಳಲ್ಲಿ ಒಂದಷ್ಟು ಕುತೂಹಲಕ್ಕೆ ಕಾರಣವಾಗಿದ್ದು, ಚಿತ್ರದ ಬಗ್ಗೆ ಹೆಚ್ಚಿನ ಅಪ್ಡೇಟ್ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.