Mantralayam: ಮಂತ್ರಾಲಯದಲ್ಲಿ ರಾಯರ ಪೂರ್ವಾರಾಧನೆ ಸಂಭ್ರಮ


Team Udayavani, Aug 31, 2023, 11:28 PM IST

MANTRALAYA

ರಾಯಚೂರು: ಕಲಿಯುಗದ ಕಾಮಧೇನು, ಭಕ್ತರ ಆರಾಧ್ಯದೈವ ಎನಿಸಿಕೊಂಡಿರುವ ಮಂತ್ರಾ­ಲಯದ ರಾಘವೇಂದ್ರ ಸ್ವಾಮಿಗಳ 352ನೇ ಆರಾಧನಾ ಮಹೋತ್ಸವ ಪ್ರಯುಕ್ತ ಗುರುವಾರ ಪೂರ್ವಾ­ರಾಧನೆ ಅತೀ ವಿಜೃಂಭಣೆಯಿಂದ ನೆರವೇರಿತು.

ಬೆಳಗ್ಗೆಯಿಂದಲೇ ಮಠದಲ್ಲಿ ವಿವಿಧ ಧಾರ್ಮಿಕ ಆಚರಣೆಗಳು, ಪೂಜಾ ಕಾರ್ಯಕ್ರಮ ನೆರವೇರಿ­ದವು. ರಾಯರ ಮೂಲ ವೃಂದಾ­ವನಕ್ಕೆ ವಿಶೇಷ ಅಲಂಕಾರ ಸೇವೆ ಜರಗಿತು. ಬೆಳಗಿನ ಜಾವ ನಿರ್ಮಾಲ್ಯ ವಿಸರ್ಜನೆ, ಗ್ರಂಥ ಪಾರಾಯಣ ಬಳಿಕ ವಿಶೇಷ ಅಭಿಷೇಕ ನೆರವೇರಿಸಲಾಯಿತು.

ಶ್ರೀಮಠದ ಪೀಠಾ ಧಿಪತಿ ಸುಬುಧೇಂದ್ರ ತೀರ್ಥರು ಪ್ರಹ್ಲಾದರಾಜರ ಪಾದುಕೆ ಪೂಜೆ ನೆರವೇರಿಸಿದರು. ಅನಂತರ ಚಿನ್ನದ ಮಂಟಪದಲ್ಲಿ ಮೂಲ ರಘುಪತಿ ವೇದವಾಸ್ಯರ ಪೂಜೆ, ಅಲಂಕಾರ ಸಂತರ್ಪಣೆ, ಹಸ್ತೋದಕ, ಮಹಾಮಂಗಳಾರತಿ ಸೇವೆ ನೆರವೇರಿಸಿ­ದರು. ಶ್ರೀಮಠದ ಪ್ರವಚನ ಮಂದಿರದಲ್ಲಿ ಪೂರ್ವಾ­ರಾಧನೆ ನಿಮಿತ್ತ ವಿವಿಧ ಪಂಡಿತರಿಂದ ಪ್ರವಚನ ಜರಗಿತು. ಈ ಬಾರಿ ತಮಿಳುನಾಡಿನ ಶ್ರೀ ರಂಗನಾಥ ದೇವಸ್ಥಾನದಿಂದ, ಅಹೋಬಲದ ಶ್ರೀ ನರಸಿಂಹಸ್ವಾಮಿ ದೇವಸ್ಥಾನ ದಿಂದ ಹಾಗೂ ಶ್ರೀಪಾದ ತೀರ್ಥರ ಮಠದಿಂದ ರಾಯರಿಗೆ ಆಶೀರ್ವಾದ ರೂಪದಲ್ಲಿ ಶೇಷ ವಸ್ತ್ರಗಳನ್ನು ಸಮರ್ಪಿಸಲಾಯಿತು. ಶೇಷವಸ್ತ್ರ­ಗಳನ್ನು ಅದ್ದೂರಿಯಾಗಿ ಸಕಲ ವಾದ್ಯಮೇಳದೊಂದಿಗೆ ಬರಮಾಡಿ­ಕೊಂಡ ಶ್ರೀಮಠದ ಪೀಠಾಧಿ ಪತಿ ಶ್ರೀ ಸುಬುಧೇಂದ್ರ ತೀರ್ಥರು, ಬಳಿಕ ರಾಯರಿಗೆ ಸಮರ್ಪಿಸಿದರು.

ಈ ವೇಳೆ ಅನುಗ್ರಹ ಸಂದೇಶ ನೀಡಿದ ಶ್ರೀಗಳು, ಶ್ರೀರಂಗಂ- ಅಹೋ­ಬಲ ಕ್ಷೇತ್ರದಿಂದ ಬಂದ ಶೇಷವಸ್ತ್ರ­ಗಳನ್ನು ಗುರುರಾಯರಿಗೆ ಸಮರ್ಪಣೆ ಮಾಡಲಾಗಿದೆ. ಈ ಎಲ್ಲ ಪುಣ್ಯಕ್ಷೇತ್ರಗಳ ಫಲ ಮಂತ್ರಾಲಯಕ್ಕೆ ಬಂದಿದ್ದು, ಮಂತ್ರಾಲಯದಲ್ಲಿ ಎಲ್ಲ ಪುಣ್ಯ ಕ್ಷೇತ್ರಗಳ ಸಮ್ಮಿಲನವಾಗುತ್ತಿದೆ. ಐತಿ­ಹಾಸಿಕ ದೈವಿಕ ಕ್ಷೇತ್ರಗಳಿಂದ ಬಂದಿರುವ ಶೇಷವಸ್ತ್ರದ ಮೂಲಕ ರಾಯರು ಭಕ್ತರನ್ನು ಅನುಗ್ರಹಿ­ಸುವರು. ಅಹೋಬಲ ಕ್ಷೇತ್ರದ ನರಸಿಂಹ­ಸ್ವಾಮಿ ಹಾಗೂ ಶ್ರೀರಂಗಂ ಕ್ಷೇತ್ರದೊಂದಿಗೆ ಶ್ರೀಮಠ ಅವಿನಾಭಾವ ಸಂಬಂಧ ಹೊಂದಿದೆ ಎಂದರು.

ಈ ಸಂದರ್ಭದಲ್ಲಿ ಅಹೋಬಲ ನರಸಿಂಹಸ್ವಾಮಿ ದೇವಸ್ಥಾನದ ಆಡಳಿತ ಅಧಿಕಾರಿ ಸಂಪತ್‌ ಕುಮಾರ್‌, ಪ್ರಧಾನ ಅರ್ಚಕ ರಮೇಶ್‌ ಆರ್ಚಾಯ, ಶ್ರೀ ರಂಗಂ ಕ್ಷೇತ್ರದ ಗೋಪಾಲನ್‌, ವಿದ್ವಾನ್‌ ಸು ಧೀಂದ್ರ ಆಚಾರ್ಯ, ಶ್ರೀಧರ ಆಚಾರ್ಯ, ಶ್ರೀ ಮಠದ ಆಡಳಿತಾಧಿಕಾರಿ ಮಾಧವಶೆಟ್ಟಿ, ವ್ಯವಸ್ಥಾಪಕ ಎಸ್‌.ಕೆ. ಶ್ರೀನಿವಾಸರಾವ್‌ ಸಹಿತ ಸಹಸ್ರಾರು ಭಕ್ತರು ಪಾಲ್ಗೊಂಡಿದ್ದರು. ಪೂರ್ವಾರಾಧನೆಗೆ ವಿವಿಧೆಡೆಯಿಂದ ಭಕ್ತರ ದಂಡು ಹರಿದು ಬಂದಿತ್ತು. ರಾಯರ ದರ್ಶನಾಶೀರ್ವಾದ ಪಡೆದು ಪುನೀತರಾದರು.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-jama

Yakshagana; ಮೇಳದ ಯಜಮಾನಿಕೆ ಎಂದರೆ ಆನೆ ಸಾಕಿದ ಹಾಗೆ

9-yoga

Sattvic Diet: ಪರೀಕ್ಷಾ ಒತ್ತಡ ನಿವಾರಣೆ ಯೋಗ, ಸಾತ್ವಿಕ ಆಹಾರದ ಸರಳ ಸೂತ್ರಗಳು

8-bagappa

Bagappa Harijan: ಭೀಮಾ ತೀರದಲ್ಲಿ ಮತ್ತೆ ರಕ್ತದ ಹನಿ

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Valentine’s Day: ನೀನು ಪ್ರೀತಿಸಿದ್ದೆ.. ಪ್ರೀತಿಸುತ್ತಿರುವೆ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

Pamban Bridge:: ದೇಶದ ಮೊದಲ ವರ್ಟಿಕಲ್‌ ಲಿಫ್ಟ್ ರೈಲ್ವೇ ಸೇತುವೆ: ಶತಮಾನದ ಇತಿಹಾಸ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.