15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ: ಅಧಿಸೂಚನೆ

ಆಕ್ಷೇಪಣೆಗೆ 15 ದಿನ ಕಾಲಾವಕಾಶ ; ಎಂಜಿನಿಯರಿಂಗ್‌ ಪದವೀಧರರಿಗೂ ಅವಕಾಶ

Team Udayavani, Jan 23, 2022, 7:50 AM IST

15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ: ಅಧಿಸೂಚನೆ

ಬೆಂಗಳೂರು: ರಾಜ್ಯದ ಪ್ರಾಥಮಿಕ ಶಾಲೆಗಳಲ್ಲಿ (6ರಿಂದ 8ನೇ ತರಗತಿ) ಬೋಧನೆಗೆ 15 ಸಾವಿರ ಪದವೀಧರ ಶಿಕ್ಷಕರ (ಜಿಪಿಟಿ) ನೇಮಕಾತಿ ಮಾಡಿಕೊಳ್ಳುವ ಸಂಬಂಧ ರಾಜ್ಯ ಸರಕಾರ ಕರಡು ಅಧಿಸೂಚನೆ ಪ್ರಕಟಿಸಿದೆ.

ಈ ಬಾರಿ ಎಂಜಿನಿಯರಿಂಗ್‌ ಶಿಕ್ಷಣ ಪಡೆದಿರುವವರಿಗೂ ಶಿಕ್ಷಕರಾಗುವ ಅವಕಾಶ ಕಲ್ಪಿಸಿದೆ. 45 ವರ್ಷಗಳ ವರೆಗಿನ ವಯೋಮಿತಿ ನೀಡಲಾಗಿದೆ. ಪದವಿಯಲ್ಲಿ ಶೇ.50ರಷ್ಟು ಅಂಕ ಮತ್ತು “ಬಿ.ಇಡಿ’ ವಿದ್ಯಾರ್ಹತೆ ಹೊಂದಿದವರನ್ನು ಜಿಪಿಟಿ ಶಿಕ್ಷಕರ ಹುದ್ದೆಗಳಿಗೆ ಪರಿಗಣಿಸಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ. ಸ್ಪರ್ಧಾತ್ಮಕ ಪರೀಕ್ಷೆ, ಶಿಕ್ಷಕರ ಅರ್ಹತಾ ಪರೀಕ್ಷೆ (ಟಿಇಟಿ), ಪದವಿ ಮತ್ತು ಬಿ.ಇಡಿ.ಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ. ಈ ನಿಟ್ಟಿನಲ್ಲಿ ಶೇ.50ರಷ್ಟು ಸ್ಪರ್ಧಾತ್ಮಕ ಪರೀಕ್ಷೆ ಅಂಕ, ಶೇ.20ರಷ್ಟು ಟಿಇಟಿ ಪರೀಕ್ಷೆ ಅಂಕ, ಶೇ.20ರಷ್ಟು ಪದವಿ ಪರೀಕ್ಷೆ ಅಂಕ ಹಾಗೂ ಶೇ.10ರಷ್ಟು ಬಿ.ಇಡಿ. ಶಿಕ್ಷಣದ ಅಂಕಗಳನ್ನು ಪರಿಗಣಿಸಲಾಗುತ್ತದೆ.

ಐಚ್ಛಿಕ ಭಾಷಾ ವಿಷಯ ಅಭ್ಯಾಸ ಕಡ್ಡಾಯ
ಭಾಷಾ ವಿಷಯಗಳಲ್ಲಿ ಹುದ್ದೆ ಬಯಸುವವರು ಕನ್ನಡ, ಇಂಗ್ಲಿಷ್‌, ಹಿಂದಿ, ಮರಾಠಿ, ಉರ್ದು, ತೆಲುಗು, ತಮಿಳು, ಮಲಯಾಳಂ, ಕೊಂಕಣಿ, ಸಂಸ್ಕೃತ ಸಹಿತ ಇತರ ಭಾಷೆ ವಿಷಯಗಳನ್ನು ಐಚ್ಛಿಕವಾಗಿ ಅಭ್ಯಾಸ ಮಾಡಿರಬೇಕು ಮತ್ತು ಈ ಐಚ್ಛಿಕ ವಿಷಯಗಳಲ್ಲಿ ಕನಿಷ್ಠ ಶೇ.50 ಅಂಕ ಪಡೆದಿರಬೇಕು.

ಇದನ್ನೂ ಓದಿ:ರಾಜ್ಯದಲ್ಲಿ ಇಂದು 42,470 ಕೋವಿಡ್ ಪ್ರಕರಣ ಪತ್ತೆ : 26 ಮಂದಿ ಸಾವು

ಎಂಜಿನಿಯರಿಂಗ್‌ ಪದವೀಧರರಿಗೂ ಅವಕಾಶ
ಇದೇ ಮೊದಲನೇ ಬಾರಿಗೆ ವಾಸ್ತುಶಿಲ್ಪ ವಿಷಯವನ್ನು ಹೊರತುಪಡಿಸಿ ಕನಿಷ್ಠ ಮೂರು ಅಥವಾ 4 ಸೆಮಿಸ್ಟರ್‌ಗಳಲ್ಲಿ ಗಣಿತ ಅಥವಾ ಅನ್ವಯಿಕ ಗಣಿತ ವಿಷಯವನ್ನು ಅಭ್ಯಾಸ ಮಾಡಿರುವ ಎಂಜಿನಿಯರಿಂಗ್‌ ಪದವೀಧರರನ್ನು ಗಣಿತ ವಿಷಯದ ಶಿಕ್ಷಕರ ಹುದ್ದೆಗೆ ಪರಿಗಣಿಸಲಾಗಿದೆ. ಗಣಿತ ಮತ್ತು ವಿಜ್ಞಾನ ವಿಷಯಗಳ ಶಿಕ್ಷಕರ ಹುದ್ದೆಗೆ ಬಿಎಸ್ಸಿ ಪದವಿಯಲ್ಲಿ ಗಣಿತ ಮತ್ತು ಭೌತಶಾಸ್ತ್ರದ ಜತೆಗೆ, ರಸಾಯನಶಾಸ್ತ್ರ, ಕಂಪ್ಯೂಟರ್‌ ಸೈನ್ಸ್‌, ಎಲೆಕ್ಟ್ರಾನಿಕ್ಸ್‌, ಸಂಖ್ಯಾಶಾಸ್ತ್ರ, ಭೂಗೋಳಶಾಸ್ತ್ರ, ಪ್ರಾಣಿಶಾಸ್ತ್ರ ಮತ್ತು ಜೈವಿಕ ತಂತ್ರಜ್ಞಾನ ವಿಷಯಗಳನ್ನು ಐಚ್ಛಿಕವಾಗಿ ಅಭ್ಯಾಸ ಮಾಡಿದವರು ಅರ್ಜಿ ಸಲ್ಲಿಸಬಹುದು.

ಕರಡು ಅಧಿಸೂಚನೆಗೆ ಆಕ್ಷೇಪಣೆ ಸಲ್ಲಿಸುವವರು ಪ್ರಧಾನ ಕಾರ್ಯದರ್ಶಿ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆ, ಬಹುಮಹಡಿ ಕಟ್ಟಡ, ಡಾ| ಬಿ.ಆರ್‌.ಅಂಬೇಡ್ಕರ್‌ ವೀಥಿ, ಬೆಂಗಳೂರು-50001 ಇಲ್ಲಿಗೆ ಕಳುಹಿಸಬಹುದು ಎಂದು ಪ್ರಾಥಮಿಕ ಶಿಕ್ಷಣದ ಅಧೀನ ಕಾರ್ಯದರ್ಶಿ ಶಿವಕುಮಾರ್‌ ತಿಳಿಸಿದ್ದಾರೆ.

ಟಾಪ್ ನ್ಯೂಸ್

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

ಸಹೋದರನ ಅತ್ತೆಯನ್ನು ಕೊಲೆ ಮಾಡಿದ ವ್ಯಕ್ತಿ ಕಾಫಿ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಹೋದರನ ಅತ್ತೆಯನ್ನು ಕೊಲೆ ಮಾಡಿದ ವ್ಯಕ್ತಿ ಕಾಫಿ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್‌ ನಟ ಪೊಲೀಸ್‌ ವಶಕ್ಕೆ

Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್‌ ನಟ ಪೊಲೀಸ್‌ ವಶಕ್ಕೆ

Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು

Udupi: ಬೈಕುಗಳ ಮುಖಾಮುಖಿ… ಓರ್ವ ಸವಾರ ಸ್ಥಳದಲ್ಲೇ ಮೃತ್ಯು

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Bollywood: ‌ʼಛಾವಾʼ ಕ್ರೇಜ್.. ಸಂಭಾಜಿ ಮಹಾರಾಜನಂತೆ ಕುದುರೆ ಏರಿ ಥಿಯೇಟರ್‌ಗೆ ಬಂದ ವ್ಯಕ್ತಿ

Plane flips: ಲ್ಯಾಂಡಿಂಗ್ ವೇಳೆ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Plane flips: ಲ್ಯಾಂಡಿಂಗ್ ವೇಳೆ ರನ್ ವೇಯಲ್ಲೇ ಪಲ್ಟಿ ಹೊಡೆದ ವಿಮಾನ… ಹಲವರಿಗೆ ಗಾಯ

Social–media-Stars

Social Media Virals: ಸೋಶಿಯಲ್‌ ಮೀಡಿಯಾ ತಂದುಕೊಟ್ಟ “ಸ್ಟಾರ್‌ ಪಟ್ಟ’


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಹೋದರನ ಅತ್ತೆಯನ್ನು ಕೊಲೆ ಮಾಡಿದ ವ್ಯಕ್ತಿ ಕಾಫಿ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಹೋದರನ ಅತ್ತೆಯನ್ನು ಕೊಲೆ ಮಾಡಿದ ವ್ಯಕ್ತಿ ಕಾಫಿ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

Rajanna-CM-DCM

Congress Talk Fight: ಡಿಸಿಎಂ ಡಿ.ಕೆ.ಶಿವಕುಮಾರ್‌ಗೇ ಸಚಿವ ಕೆ.ಎನ್‌.ರಾಜಣ್ಣ ಸಡ್ಡು!

Madhu-Bangarappa1

ನಾವು ಕಾನ್ವೆಂಟ್‌ನಲ್ಲಿ ಓದಿದವರು ಕನ್ನಡದ ಬಗ್ಗೆ ತಿಳಿವಳಿಕೆ ಇಲ್ಲ: ಶಿಕ್ಷಣ ಸಚಿವ ಮಧು

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Tragedy: ಡೆ *ತ್‌ನೋಟ್‌ ಬರೆದಿಟ್ಟು ಪುತ್ರಿಯ ಕೊ*ದು ಗ್ರಾ.ಪಂ.ಅಧ್ಯಕ್ಷೆಯೂ ಆತ್ಮಹ*ತ್ಯೆ!

Chikki

Govt School: ಶಾಲಾ ಮಕ್ಕಳಿಗೆ ಚಿಕ್ಕಿ ವಿತರಣೆ ಸ್ಥಗಿತಗೊಳಿಸಿದ ಶಿಕ್ಷಣ ಇಲಾಖೆ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

Namma Metro: ದರ ಗಣನೀಯ ಹೆಚ್ಚಳದ ಬೆನ್ನಲ್ಲೇ ಮೆಟ್ರೋ ಪ್ರಯಾಣಿಕರ ಸಂಖ್ಯೆ ಕುಸಿತ

Fraud Case: ಐಶ್ವರ್ಯಗೌಡ ವಿರುದ್ಧದ ಕೇಸ್‌ಗೆ ಇ.ಡಿ. ಎಂಟ್ರಿ

Fraud Case: ಐಶ್ವರ್ಯಗೌಡ ವಿರುದ್ಧದ ಕೇಸ್‌ಗೆ ಇ.ಡಿ. ಎಂಟ್ರಿ

Bengaluru: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪುತ್ರ!

Bengaluru: ಬುದ್ಧಿವಾದ ಹೇಳಿದ್ದಕ್ಕೆ ತಂದೆಯನ್ನೇ ಕೊಂದ ಪುತ್ರ!

ಸಹೋದರನ ಅತ್ತೆಯನ್ನು ಕೊಲೆ ಮಾಡಿದ ವ್ಯಕ್ತಿ ಕಾಫಿ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

ಸಹೋದರನ ಅತ್ತೆಯನ್ನು ಕೊಲೆ ಮಾಡಿದ ವ್ಯಕ್ತಿ ಕಾಫಿ ತೋಟದಲ್ಲಿ ನೇಣು ಬಿಗಿದು ಆತ್ಮಹತ್ಯೆ

Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್‌ ನಟ ಪೊಲೀಸ್‌ ವಶಕ್ಕೆ

Tollywood: ರಾತ್ರೋರಾತ್ರಿ ಖ್ಯಾತ ಟಾಲಿವುಡ್‌ ನಟ ಪೊಲೀಸ್‌ ವಶಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.