![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-415x234.jpg)
ಕೆಂಪಣ್ಣ ಹೊಸ ಕಮಿಷನ್ ಬಾಂಬ್ -ಆಗ ರಾಜಕಾರಣಿಗಳು; ಈಗ ಅಧಿಕಾರಿಗಳ ದರಬಾರು ನಡೆಯುತ್ತಿದೆ
ನಾಗಮೋಹನ ದಾಸ್ ಆಯೋಗಕ್ಕೆ 6 ಸಾವಿರ ಪುಟಗಳ ದಾಖಲೆ ಸಲ್ಲಿಕೆ
Team Udayavani, Dec 8, 2023, 12:53 AM IST
![kempanna](https://www.udayavani.com/wp-content/uploads/2023/12/kempanna-620x349.jpg)
ಬೆಂಗಳೂರು: “ಹಿಂದೆ ಬಿಜೆಪಿ ಸರಕಾರ ಇದ್ದಾ ಗ ಕಮಿಷನ್ ವಿಚಾರದಲ್ಲಿ ರಾಜಕಾರಣಿಗಳ ರಾಜ್ಯಭಾರವಾಗಿತ್ತು. ಈಗಿನ ಕಾಂಗ್ರೆಸ್ ಸರಕಾರದಲ್ಲಿ ಅಧಿಕಾರಿ ಗಳಿಂದ ರಾಜ್ಯಭಾರ ನಡೆಯುತ್ತಿದೆ…’
– ಹೀಗೆಂದು ಕರ್ನಾಟಕ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೊಸ ಬಾಂಬ್ ಸಿಡಿಸಿದ್ದಾರೆ. ಗುತ್ತಿಗೆ ಕಾಮಗಾರಿಗೆ ಅನುದಾನ ಮಂಜೂರು ಮಾಡಲು ಕಮಿ ಷನ್ ಕೇಳುತ್ತಿರುವ ಆರೋಪಕ್ಕೆ ಸಂಬಂಧಿಸಿ ಬೆಂಗಳೂರಿನಲ್ಲಿರುವ ಲೋಕೋಪಯೋಗಿ ಇಲಾಖೆಯ ಮುಖ್ಯ ಕಟ್ಟಡದಲ್ಲಿರುವ ನ್ಯಾ| ಎಚ್.ಎನ್. ನಾಗಮೋಹನ ದಾಸ್ ವಿಚಾರಣ ಆಯೋಗಕ್ಕೆ ಗುರುವಾರ 6 ಸಾವಿರ ಪುಟಗಳ ದಾಖಲೆ ಸಲ್ಲಿಕೆ ಮಾಡಿದ ಬಳಿಕ ಅವರು ಮಾತನಾಡಿದರು.
“ಎಲ್ಲ ಸರಕಾರಗಳಲ್ಲೂ ಭ್ರಷ್ಟಾಚಾರ ಇದೆ ಎಂದಿದ್ದೇನೆ. ಕಾಂಗ್ರೆಸ್ ಸರಕಾರದಲ್ಲೂ ಇದು ನಡೆಯುತ್ತಿದೆ. ಹಿಂದಿನ ಸರಕಾರದಲ್ಲಿ ರಾಜಕಾರಣಿಗಳ ರಾಜ್ಯಭಾರವಾಗಿತ್ತು, ಈಗ ಅಧಿಕಾರಿಗಳೇ ರಾಜ್ಯಭಾರ ಮಾಡುತ್ತಿದ್ದಾರೆ. ಹಾಲಿ ಸರಕಾರದಲ್ಲಿ ನಡೆದ ಭ್ರಷ್ಟಾಚಾರದ ದಾಖಲೆ ಕೂಡ ಸಲ್ಲಿಕೆ ಮಾಡಿದ್ದೇವೆ. ನನಗೆ ಗೊತ್ತಿರುವ ಹಾಗೆ ಕಮಿಷನ್ ವಿಷಯದಲ್ಲಿ ಇದುವರೆಗೆ ಯಾವ ರಾಜಕಾರಣಿಯೂ ವೈಯಕ್ತಿಕವಾಗಿ ಬಂದಿಲ್ಲ. ಬಂದರೆ ತಿಳಿಸಲು ನಮಗೆ ಭಯವಿಲ್ಲ. ಅಧಿಕಾರಿಗಳನ್ನು ಹದ್ದುಬಸ್ತಿನಲ್ಲಿ ಇಟ್ಟುಕೊಳ್ಳಬೇಕು ಎಂದು ಮುಖ್ಯಮಂತ್ರಿಗಳಿಗೂ ಪತ್ರ ಬರೆದಿದ್ದೇನೆ. ಇದಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸದಿದ್ದರೆ ಮುಂದಿನ ಹೋರಾಟದ ಬಗ್ಗೆ ತೀರ್ಮಾನ ತೆಗೆದುಕೊಳ್ಳುತ್ತೇವೆ’ ಎಂದು ಕೆಂಪಣ್ಣ ಎಚ್ಚರಿಕೆ ನೀಡಿದರು.
ಸಮಸ್ಯೆ ಹಂಚಿಕೊಂಡ ಗುತ್ತಿಗೆದಾರರು
ಕೆಂಪಣ್ಣ ಅವರ ನೇತೃ ತ್ವ ದಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಗುತ್ತಿಗೆದಾರರು ತಮ್ಮ ಸಮಸ್ಯೆಗಳನ್ನು ನ್ಯಾ| ಎಚ್.ಎನ್. ನಾಗಮೋಹನ್ದಾಸ್ ಬಳಿ ನಿವೇದಿಸಿಕೊಂಡಿದ್ದಾರೆ. ಹಿರಿತನದ ಆಧಾರದಲ್ಲಿ ಬಾಕಿ ಬಿಲ್ ಪಾವತಿ ಮಾಡದೆ ಕಮಿಷನ್ ಕೊಡುವವರಿಗೆ ಬಾಕಿ ಬಿಲ್ ಪಾವತಿ ಮಾಡಲಾಗುತ್ತಿದೆ. ನಿಯಮಾನುಸಾರ ಬಾಕಿ ಬಿಲ್ ಬಿಡುಗಡೆ ಮಾಡುತ್ತಿಲ್ಲ ಎಂಬಿತ್ಯಾದಿ ವಿಚಾರಗಳನ್ನು ನ್ಯಾ| ದಾಸ್ ಗಮನಕ್ಕೆ ಗುತ್ತಿಗೆದಾರರು ತಂದರು. ಹಿಂದಿನ ಬಿಜೆಪಿ ಸರಕಾರ, ಹಾಲಿ ಕಾಂಗ್ರೆಸ್ ಸರಕಾರದಲ್ಲಿ ನಡೆದ ಅವ್ಯವ ಹಾರದ ದಾಖಲೆ, ಭ್ರಷ್ಟಾಚಾರದ ಆಡಿಯೋ, ವೀಡಿಯೋಗಳನ್ನು ಆಯೋಗಕ್ಕೆ ಸಲ್ಲಿಸಲಾಗಿದೆ ಎಂದು ತಿಳಿದು ಬಂದಿದೆ.
ಹಾಲಿ ಸರಕಾರದಲ್ಲಿ ಯಾವುದೇ ಸಚಿವರ ಮೇಲೆ ಕಮಿಷನ್ ಆರೋಪ ಕೇಳಿ ಬಂದಿಲ್ಲ. ಒಂದು ವೇಳೆ ಆರೋಪ ಕೇಳಿ ಬಂದರೆ ತಿಳಿ ಸಲು ಹೆದರುವುದಿಲ್ಲ. ಈ ಹಿಂದೆ ಮನೆಗೆ ಬಂದು ಬಂಧಿಸಿದಾಗಲೂ ಹೆದರಲಿಲ್ಲ.
-ಡಿ. ಕೆಂಪಣ್ಣ, ಕೆಎಸ್ಸಿಎ ಅಧ್ಯಕ್ಷ
ಟಾಪ್ ನ್ಯೂಸ್
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-415x234.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ](https://www.udayavani.com/wp-content/uploads/2024/07/baramasagara-150x84.jpg)
Baramasagara: ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣಿಗೆ ಶರಣಾದ ಯುವತಿ… ಕಾರಣ ನಿಗೂಢ
![Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ](https://www.udayavani.com/wp-content/uploads/2024/07/HK-PATIL-150x90.jpg)
Government ಹೊಸ ಅಪರಾಧ ಸಂಹಿತೆಗೆ ರಾಜ್ಯದಲ್ಲಿ ತಿದ್ದುಪಡಿ
![CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ](https://www.udayavani.com/wp-content/uploads/2024/07/dk-h-150x90.jpg)
CM DCM ಹೇಳಿಕೆ ನಿಲ್ಲಿಸದಿದ್ದರೆ ಶೋಕಾಸ್ ನೋಟಿಸ್: ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಎಚ್ಚರಿಕೆ
![Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.](https://www.udayavani.com/wp-content/uploads/2024/07/Pralhad-Joshi-1-150x91.jpg)
Minister Pralhad Joshi ರಾಜ್ಯದ ಹೆದ್ದಾರಿಗೆ 8,021 ಕೋ.ರೂ.
MUST WATCH
ಹೊಸ ಸೇರ್ಪಡೆ
![Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್](https://www.udayavani.com/wp-content/uploads/2024/07/salman-150x84.jpg)
Salman Khan ಹತ್ಯೆಗೆ 8 ತಿಂಗಳ ಹಿಂದೆಯೇ ನಡೆದಿತ್ತು ಪ್ಲಾನ್… 25 ಲಕ್ಷಕ್ಕೆ ಡೀಲ್
![Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು](https://www.udayavani.com/wp-content/uploads/2024/07/11-1-150x90.jpg)
Kunigal: ರಸ್ತೆ ವಿಭಜಕಕ್ಕೆ ಢಿಕ್ಕಿ ಹೊಡೆದು ಆಂಬ್ಯುಲೆನ್ಸ್ ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು
![Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!](https://www.udayavani.com/wp-content/uploads/2024/07/America-150x92.jpg)
Americaದಲ್ಲಿ ಭಾರತೀಯ ಮೂಲದ ಉದ್ಯಮಿಯ ಬೃಹತ್ ವಂಚನೆ, ಹೂಡಿಕೆದಾರರು ಕಂಗಾಲು!
![10](https://www.udayavani.com/wp-content/uploads/2024/07/10-1-150x90.jpg)
Bengaluru: ನಿಮ್ಮ ಮನೆ ಬಳಿ ಸಸಿ ನೆಡಬೇಕಾ? ಹಸಿರು ತೇರು ಸಂಪರ್ಕಿಸಿ
![Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್](https://www.udayavani.com/wp-content/uploads/2024/07/9-1-150x90.jpg)
Kidnap Case: ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್; ಯುವಕನ ವಿರುದ್ಧ ಎಫ್ಐಆರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.