Rain ಕರಾವಳಿಯಲ್ಲಿ ಕಡಿಮೆಯಾದ ಮಳೆ
Team Udayavani, Aug 5, 2024, 11:22 PM IST
ಮಂಗಳೂರು/ ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ತೀವ್ರತೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ಸೋಮವಾರ ಸಾಧಾರಣ ಮಳೆಯಾಗಿದೆ.
ಮಂಗಳೂರಿನಲ್ಲಿ ಬಿಸಿಲು ಮತ್ತು ಮೋಡದಿಂದ ಕೂಡಿದ ವಾತಾವರಣ ಇತ್ತು.
ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಆ.6ರ ಬೆಳಗ್ಗೆ 8.30ರ ವರೆಗೆ ಎಲ್ಲೋ ಅಲರ್ಟ್ ಇದ್ದು, ಉಳಿದಂತೆ ಯಾವುದೇ ಅಲರ್ಟ್ ಘೋಷಿಸಲಾಗಿಲ್ಲ. ಇದರಿಂದಾಗಿ ಮಳೆಯ ಪ್ರಮಾಣ ಮತ್ತಷ್ಟು ಕಡಿಮೆಯಾಗಲಿದೆ ಎಂದು ಅಂದಾಜಿಸಲಾಗಿದೆ. ಮಂಗಳೂರಿನಲ್ಲಿ ಸೋಮವಾರ 29.9 ಡಿ.ಸೆ. ಗರಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 1.2 ಡಿ.ಸೆ. ಹೆಚ್ಚು ಮತ್ತು 23.4 ಡಿ.ಸೆ. ಕನಿಷ್ಠ ತಾಪಮಾನ ದಾಖಲಾಗಿ ವಾಡಿಕೆಗಿಂತ 0.1 ಡಿ.ಸೆ. ಹೆಚ್ಚಿತ್ತು.
ಉಡುಪಿ: ಮಳೆ ಇಳಿಮುಖ
ಉಡುಪಿ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಮಳೆ ಕ್ಷೀಣಗೊಂಡಿದ್ದು, ಸೋಮವಾರ ಹಲವೆಡೆ ಸಾಧಾರಣ ಮಳೆಯಾಗಿದೆ. ಕುಂದಾಪುರ, ಉಡುಪಿ, ಕಾರ್ಕಳ, ಹೆಬ್ರಿ ಸುತ್ತಮುತ್ತ ಬಿಟ್ಟುಬಿಟ್ಟು ಸಣ್ಣದಾಗಿ ಮಳೆಯಾಗಿದೆ. ರವಿವಾರ ತಡರಾತ್ರಿ ಕೆಲವು ಕಡೆಗಳಲ್ಲಿ ಸಾಧಾರಣ ಮಳೆ ಸುರಿದಿದೆ. ಉಡುಪಿ, ಮಣಿಪಾಲ, ಮಲ್ಪೆ ಸುತ್ತಮುತ್ತ ಬಿಸಿಲು-ಮೋಡ ಕವಿದ ವಾತಾವರಣದ ನಡುವೆ ಆಗಾಗ ಸಣ್ಣ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.