ಕುಮಟಳ್ಳಿಗೆ ಅನ್ಯಾಯವಾದ್ರೆ ರಾಜೀನಾಮೆ ನೀಡುವೆ


Team Udayavani, Feb 23, 2020, 3:07 AM IST

kumattallige

ಬೆಳಗಾವಿ: “ಅಥಣಿ ಶಾಸಕ ಮಹೇಶ ಕುಮಟಳ್ಳಿಗೆ ಸಚಿವ ಸ್ಥಾನ ಸಿಗದೇ ಇರುವುದಕ್ಕೆ ನನಗೆ ಬಹಳ ನೋವಾಗಿದೆ. ನನಗೆ ಅನ್ಯಾಯವಾಗಿದೆ ಎಂದು ಅವರು ಒಂದು ಮಾತು ಹೇಳಿದರೆ ನಾನು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಹೇಳುವ ಮೂಲಕ ನೀರಾವರಿ ಸಚಿವ ರಮೇಶ ಜಾರಕಿಹೊಳಿ ಮತ್ತೆ ಕುಮಟಳ್ಳಿ ಪರ ಬ್ಯಾಟ್‌ ಬೀಸಿದ್ದಾರೆ.

ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂಬರುವ ದಿನಗಳಲ್ಲಿ ಕುಮಟಳ್ಳಿ ಅವರಿಗೆ ದೊಡ್ಡ ಹುದ್ದೆ ಸಿಗಲಿದೆ. ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಮೊದಲಿನಿಂದಲೂ ಒತ್ತಾಯ ಮಾಡುತ್ತಿದ್ದೇನೆ ಎಂದರು. “ನಾನು ಯಾವತ್ತೂ ಸೇಡಿನ ರಾಜಕೀಯ ಮಾಡುವುದಿಲ್ಲ. ನೀರಾವರಿ ಖಾತೆಯಲ್ಲಿ ಪಕ್ಷ, ಜಾತಿ ಬರುವುದಿಲ್ಲ. ಈ ರೀತಿ ಆರೋಪ ಮಾಡುವುದು ಸರಿಯಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದು ಕೊಂಡು ನೀರಾವರಿ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತೇನೆ. ನಮ್ಮ ಭಾಗಕ್ಕೆ ಅನುಕೂಲವಾಗುವಂತೆ ಕೆಲಸ ಮಾಡುತ್ತೇನೆ’ ಎಂದರು.

ನೀರಾವರಿ ಕೇಳಿರಲಿಲ್ಲ: “ನಾನು ನೀರಾವರಿ ಖಾತೆ ಬೇಕೆಂದು ಬೇಡಿಕೆ ಇಟ್ಟಿರಲಿಲ್ಲ. ಇಲ್ಲಿಯವರೆಗೆ ಉತ್ತರ ಕರ್ನಾಟಕದ ಜನರೇ ನೀರಾವರಿ ಮಂತ್ರಿಯಾಗಿದ್ದರು. ಈ ನಿಟ್ಟಿನಲ್ಲಿ ನಾನೂ ಸಹ ನೀರಾವರಿ ಸಚಿವನಾಗಿದ್ದೇನೆ. ಹೈಕಮಾಂಡ್‌, ನೀರಾವರಿ ಖಾತೆ ಕೊಟ್ಟಿದ್ದು ಸಂತಸ ತಂದಿದೆ. ವಿರೋಧಿಗಳು ನನಗೆ ಈ ಖಾತೆ ನಿಭಾಯಿಸಲು ಅಗುವುದಿಲ್ಲ ಎಂದು ಹೇಳುತ್ತಿದ್ದಾರೆ. ಹೀಗಾಗಿ, ಅವರಿಗೆ ತಕ್ಕ ಉತ್ತರ ನೀಡುವಂತೆ ಕೆಲಸ ಮಾಡುತ್ತೇನೆ’ ಎಂದು ತಿರುಗೇಟು ನೀಡಿದರು.

ಡಿಸಿಸಿ ಬ್ಯಾಂಕ್‌ ಚುನಾವಣೆ: ಬೆಳಗಾವಿ ಡಿಸಿಸಿ ಬ್ಯಾಂಕ್‌ ಚುನಾವಣೆಯಲ್ಲಿ ಜಾರಕಿಹೊಳಿ ಹಾಗೂ ಕತ್ತಿ ಬಣ ಸೇರಿ ಕೆಲಸ ಮಾಡಲಿದೆ. ಬ್ಯಾಂಕಿನ ಹಾಲಿ ಅಧ್ಯಕ್ಷ ರಮೇಶ ಕತ್ತಿ, ಉಮೇಶ ಕತ್ತಿ, ತಾವು, ಬಾಲಚಂದ್ರ ಜಾರಕಿಹೊಳಿ ಸೇರಿ ಚುನಾವಣೆ ಮಾಡುತ್ತೇವೆ. ಕತ್ತಿ ಸಹೋದರರು, ನಾವು ಒಂದೇ ಎಂದರು. ಡಿಸಿಸಿ ಬ್ಯಾಂಕ್‌ ಚುನಾವಣೆ ವಿಚಾರದಲ್ಲಿ ಬದಲಾವಣೆ ತರುವ ಬಗ್ಗೆ ಬಾಲಚಂದ್ರ ಹಾಗೂ ಉಮೇಶ ಕತ್ತಿ ಸೇರಿ ತೀರ್ಮಾನ ಮಾಡಲಿದ್ದಾರೆ ಎಂದರು.

ಸವದಿ ಜತೆ ಭಿನ್ನಾಭಿಪ್ರಾಯ ಇಲ್ಲ
ಬೆಳಗಾವಿ: “ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಹಾಗೂ ನನ್ನ ನಡುವೆ ಯಾವುದೇ ಭಿನ್ನಾಭಿಪ್ರಾಯವಿಲ್ಲ. ನಾವೆಲ್ಲಾ ಒಗ್ಗಟ್ಟಾ ಗಿದ್ದೇವೆ. ನಮ್ಮ ನಡುವೆ ಭಿನ್ನಾಭಿಪ್ರಾ ಯವಿದೆ ಎನ್ನುವುದು ಕೇವಲ ಊಹಾ ಪೋಹ’ ಎಂದು ಅಥಣಿ ಶಾಸಕ ಮಹೇಶ ಕುಮಟಳ್ಳಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಸವದಿ ರಾಜಕೀಯ ಭವಿಷ್ಯಕ್ಕಾಗಿ ಕುಮಟಳ್ಳಿ ಅವರನ್ನು ಬಲಿ ಕೊಡಲಾಗುತ್ತಿದೆ ಎಂಬ ಸುದ್ದಿಗೆ ಯಾವುದೇ ಆಧಾರವಿಲ್ಲ. ನಮ್ಮ ನಡುವೆ ಯಾವುದೇ ಅಸಮಾಧಾನ ಇಲ್ಲವೇ ಇಲ್ಲ ಎಂದು ಸ್ಪಷ್ಟಪಡಿಸಿದರು. ನಾವಿಬ್ಬರೂ ಬೆಂಗಳೂರಿನಲ್ಲಿ ಸಾಕಷ್ಟು ಸಮಯ ಚರ್ಚೆ ಮಾಡಿದ್ದೇವೆ. ಅದೇ ರೀತಿ, ಶುಕ್ರವಾರವೂ ಅಥಣಿಯ ಗಚ್ಚಿನಮಠದ ಕಾರ್ಯಕ್ರಮದಲ್ಲಿ ಭಾಗಿಯಾಗಿರುವುದಾಗಿ ಹೇಳಿದರು.

ಕುಮಟಳ್ಳಿಗೆ ಏನಾದ್ರೂ ಅನ್ಯಾಯ ಆಗಿದೆ ಎಂದು ಹೇಳಿದರೆ ನಾನು ರಾಜೀನಾಮೆ ನೀಡುತ್ತೇನೆಂಬ ಸಚಿವ ರಮೇಶ ಜಾರಕಿಹೊಳಿ ಮಾತಿಗೆ ಪ್ರತಿಕ್ರಿಯಿಸಿದ ಅವರು, ಜೀವನದಲ್ಲಿ ಹಣ ಗಳಿಸಬಹುದು. ಆದರೆ, ಒಬ್ಬರ ವಿಶ್ವಾಸ ಗಳಿಸುವುದು ಕಠಿಣ. ಅದನ್ನು ನಾನು ಪಡೆದಿದ್ದೇನೆ. ಅದು ನನ್ನ ಭಾಗ್ಯ ಎಂದರು. ಡಿಸಿಸಿ ಬ್ಯಾಂಕ್‌ ಚುನಾವಣೆ ಸ್ಪರ್ಧೆಯ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸವದಿ ಚುನಾವಣೆಗೆ ನಿಲ್ಲುತ್ತಾರೆ. ನಾನು ಅವರನ್ನು ಬೆಂಬಲಿಸುತ್ತೇನೆ ಎಂದು ಹೇಳಿದರು.

ಬೆಳಗಾವಿ ಜಿಲ್ಲಾ ಉಸ್ತುವಾರಿಯಾಗಿ ಜಗದೀಶ ಶೆಟ್ಟರ ಇದ್ದರೆ ನಾನು ಇದ್ದ ಹಾಗೆ. ಶೆಟ್ಟರ ಒಳ್ಳೆಯವರು. ಒಂದು ವೇಳೆ ಶೆಟ್ಟರ ಆಗುವುದಿಲ್ಲ ಎಂದರೆ ನಾನು ಜಿಲ್ಲಾ ಉಸ್ತುವಾರಿ ಕೇಳುತ್ತೇನೆ.
-ರಮೇಶ ಜಾರಕಿಹೊಳಿ, ನೀರಾವರಿ ಸಚಿವ

ಮಹೇಶ ಕುಮಟಳ್ಳಿ ಅವರನ್ನು ಬಿಜೆಪಿಗೆ ಕರೆ ತಂದಿರುವುದು ರಮೇಶ ಜಾರಕಿಹೊಳಿ. ಹೀಗಾಗಿ, ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಅವರು ಹೇಳುವುದು ಸಹಜ. ಆದರೆ, ಈ ಬಗ್ಗೆ ನನಗೆ ಮಾಹಿತಿ ಇಲ್ಲ. ಸರ್ಕಾರದ ಭದ್ರತೆ ಹಾಗೂ ಅಭದ್ರತೆ ಯಾರ ಹೇಳಿಕೆಗಳ ಮೇಲೂ ನಿಂತಿಲ್ಲ. ಹೀಗಾಗಿ, ಸುಸೂತ್ರವಾಗಿ ಸರ್ಕಾರ ನಡೆಸಲು ಮಾಧ್ಯಮಗಳು ಬಿಡಬೇಕು. ಅವರಿಗೆ ಬೆಳಗಾವಿ ಜಿಲ್ಲೆಯ ಜವಾಬ್ದಾರಿ ನೀಡಿದರೆ, ನಾನು ಬಿಡಲು ರೆಡಿ ಇದ್ದೇನೆ.
-ಜಗದೀಶ ಶೆಟ್ಟರ, ಸಚಿವ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.