ಉ.ಕ.ಪ್ರವಾಹಕ್ಕೆ ಸ್ಪಂದಿಸಿ


Team Udayavani, Aug 5, 2019, 3:08 AM IST

uttara-kar

ಬೆಂಗಳೂರು: ಉತ್ತರ ಕರ್ನಾಟಕ ಭಾಗದಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿರು ವುದರಿಂದ ತಕ್ಷಣವೇ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ಕರೆದು ಅಗತ್ಯ ರಕ್ಷಣಾ ಕ್ರಮಗಳನ್ನು ಕೈಗೊಳ್ಳುವಂತೆ ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಅವರು, ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

ಮಹಾರಾಷ್ಟ್ರದಲ್ಲಿ ಅಪಾರ ಪ್ರಮಾಣದ ಮಳೆಯಾಗುತ್ತಿ ರುವುದರಿಂದ ಹಿಪ್ಪರಗಿ, ನಾರಾಯಣಪುರ, ಆಲಮಟ್ಟಿ ಜಲಾಶಯಗಳ ಹಿನ್ನೀರಿನ ಪ್ರದೇಶಗಳು ಜಲಾವೃತಗೊಂಡಿವೆ. ಕೃಷ್ಣಾ ನದಿಗೆ 2.3 ಲಕ್ಷ ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಕೃಷ್ಣಾ ಹಾಗೂ ಉಪ ನದಿಗಳು ಉಕ್ಕಿ ಹರಿಯುತ್ತಿರುವುದರಿಂದ ನದಿ ತೀರದ ಹಲವು ಗ್ರಾಮಗಳ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಳಿಸಬೇಕಾಗಿದೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳು ಪ್ರವಾಹದಿಂದ ಬಾಧಿತವಾಗಿವೆ. ಬಾಗಲಕೋಟೆ ಜಿಲ್ಲೆಯ ಮುಧೋಳ, ಜಮಖಂಡಿ ತಾಲೂಕುಗಳ ಗ್ರಾಮಗಳು ಜಲಾವೃತವಾಗಿದ್ದು, ಮುಳು ಗಡೆ ಪ್ರದೇಶದಲ್ಲಿ ಸಿಲುಕಿರುವ ಜನರನ್ನು ಸ್ಥಳಾಂತರಿಸಲು ವಿಶೇಷ ದೋಣಿಗಳ ವ್ಯವಸ್ಥೆ ಮಾಡಬೇಕಿದೆ. ಇಷ್ಟೆಲ್ಲ ಗಂಭೀರ ಪರಿಸ್ಥಿತಿ ಇದ್ದರೂ ಸಮರೋಪಾದಿಯಲ್ಲಿ ತುರ್ತು ಪರಿಹಾರ ಕಾರ್ಯಗಳಿಗೆ ಸನ್ನದ್ಧರಾಗಬೇಕಾದ ಆಡಳಿತ ಯಂತ್ರ ಪ್ರವಾಹ ಪರಿಸ್ಥಿತಿಯನ್ನು ಗಂಭೀರ ವಾಗಿ ಎದುರಿಸುತ್ತಿಲ್ಲ.

ಎನ್‌ಡಿಆರ್‌ಎಫ್ ತಂಡ ಹಾಗೂ ದೋಣಿ ರಕ್ಷಣಾ ತಂಡಗಳನ್ನು ಸನ್ನದ್ದಗೊಳಿಸಬೇಕಿದೆ. ಈ ಹಿನ್ನೆಲೆಯಲ್ಲಿ ತಾವು ದೆಹಲಿ ಪ್ರವಾಸವನ್ನು ರದ್ದುಗೊಳಿಸಿ, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡು ವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಅಲ್ಲದೇ ಪ್ರವಾಹ ಪೀಡಿತ ಪ್ರದೇಶಗಳಿಗೆ ಪ್ರಧಾನಿ ಭೇಟಿ ನೀಡಿ ಸಮೀಕ್ಷೆ ನಡೆಸು ವಂತೆ ಒತ್ತಾಯಿಸಬೇಕೆಂದು ಎಚ್‌.ಕೆ. ಪಾಟೀಲ್‌ ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಸಿಎಂ ಪ್ರತಿಕ್ರಿಯೆ: ಎಚ್‌.ಕೆ.ಪಾಟೀಲ್‌ ಅವರ ಪತ್ರಕ್ಕೆ ಮುಖ್ಯಮಂತ್ರಿ ಯಡಿ ಯೂರಪ್ಪ ಪತ್ರದ ಮೂಲಕ ಉತ್ತರ ನೀಡಿದ್ದು, ಪ್ರವಾಹ ಪೀಡಿತ ಜಿಲ್ಲೆಗಳ ಜಿಲ್ಲಾ ಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್‌ ಮಾಡಲಾಗಿದ್ದು, ಸೋಮವಾರ ಖುದ್ದು ವೈಮಾನಿಕ ಸಮೀಕ್ಷೆ ನಡೆಸುತ್ತಿರುವುದಾಗಿ ತಿಳಿಸಿದ್ದಾರೆ. ಅಲ್ಲದೆ, ದೆಹಲಿಗೆ ಭೇಟಿ ನೀಡಿ, ಕೇಂದ್ರ ಸರ್ಕಾರದಿಂದ ಅಗತ್ಯ ಪರಿಹಾರಕ್ಕೆ ಮನವಿ ಮಾಡಲಾಗುವುದು ಎಂದು ಎಚ್‌.ಕೆ.ಪಾಟೀಲ್‌ಗೆ ಬರೆದಿರುವ ಪತ್ರದಲ್ಲಿ ತಿಳಿಸಿದ್ದಾರೆ.

ಭಾಗಮಂಡಲ ಜಲಾವೃತ: ಕೊಡಗಿನ ಭಾಗಮಂಡಲದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ತ್ರಿವೇಣಿ ಸಂಗಮದಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ನಾಪೋಕ್ಲು – ಭಾಗಮಂಡಲ ರಸ್ತೆಯ ನೆಲಜಿ ಜಂಕ್ಷನ್‌ ಬಳಿ ರಸ್ತೆಗೆ ಮರ ಉರುಳಿ ಸಂಚಾರಕ್ಕೆ ತಡೆಯಾಗಿತ್ತು. ವೀರಾಜಪೇಟೆ ತಾಲೂಕಿನ ನಾಂಗಾಲ ಗ್ರಾಮದಲ್ಲಿ ಭೂಕುಸಿತವಾಗಿ ಮನೆಗೆ ಹಾನಿಯಾಗಿದೆ. ಗೋಣಿಕೊಪ್ಪದ ವೆಂಕಟಪ್ಪ ಬಡಾವಣೆಯ ಪಕ್ಕದ ಕೀರೆ ಹೊಳೆ ಉಕ್ಕಿ ಹರಿದು 12ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗ್ಗಿದೆ. ಲಕ್ಷ್ಮಣತೀರ್ಥ ನದಿಯಲ್ಲಿ ಏಕಾಏಕಿ ನೀರು ಏರಿಕೆಯಾಗಿ ಭತ್ತದ ಗದ್ದೆಗಳು ಪ್ರವಾಹಕ್ಕೆ ಸಿಲುಕಿವೆ.

ಟಾಪ್ ನ್ಯೂಸ್

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ

Instagram provides clues to finding suspect who had been on the run for 9 years

Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.