Mangaluru ಕೃಷಿ ಕಾಯ್ದೆ ವಾಪಸು ದುರಂತ ತೀರ್ಮಾನ


Team Udayavani, Sep 3, 2023, 11:11 PM IST

Mangaluru ಕೃಷಿ ಕಾಯ್ದೆ ವಾಪಸು ದುರಂತ ತೀರ್ಮಾನ

ಮಂಗಳೂರು: ಕೇಂದ್ರ ಸರಕಾರ ಮೂರು ಕೃಷಿ ಕಾಯ್ದೆಗಳನ್ನು ವಾಪಸು ಪಡೆದಿರುವುದು ಈ ದೇಶ ಸ್ವಾತಂತ್ರ್ಯಾನಂತರದ ಅತೀ ದೊಡ್ಡ ದುರಂತದ ತೀರ್ಮಾನಗಳಲ್ಲಿ ಒಂದಾಗಿದೆ ಎಂದು ಲೇಖಕ, ಸಂಶೋಧಕ ಡಾ| ಆನಂದ ರಂಗನಾಥನ್‌ ಅಭಿಪ್ರಾಯಪಟ್ಟರು.

ಮಂಗಳಾದೇವಿಯ ಶ್ರೀ ರಾಮಕೃಷ್ಣ ಮಠದಲ್ಲಿ ರವಿವಾರ ಸ್ವಚ್ಛ ಮಂಗಳೂರು ಫೌಂಡೇಶನ್‌ ಮತ್ತು ಜ| ಕೆ.ಎಸ್‌. ಹೆಗ್ಡೆ ಚಾರಿಟೆಬಲ್‌ ಫೌಂಡೇಶನ್‌ ವತಿಯಿಂದ ಆಯೋಜಿಸಲಾದ ಜಿಜ್ಞಾಸಾ ಸನಾತನ ಚಿಂತನ ಗಂಗಾ ಸರಣಿ ಉಪನ್ಯಾಸ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾರತ 2047ರತ್ತ- ಅವಕಾಶಗಳ ತಾಣ ಎನ್ನುವ ವಿಷಯದ ಕುರಿತು ಉಪನ್ಯಾನ ನೀಡಿದರು.

ಕೃಷಿ ಕಾಯ್ದೆ ರೈತರ ಪರವಾಗಿತ್ತು. ಆದರೆ ರಾಜಕೀಯ ಕಾರಣಕ್ಕಾಗಿಯೇ ಉತ್ತಮ ಕಾಯ್ದೆಯೊಂದು ಬಲಿಯಾಯಿತು. ಕಾಂಗ್ರೆಸ್‌ ಸರಕಾರ ಪ್ರಣಾಳಿಕೆಯಲ್ಲಿಯೂ ಕೃಷಿ ಕಾಯ್ದೆಯ ಜಾರಿಗೊಳಿಸುವ ಪ್ರಸ್ತಾವವಿತ್ತು. ದೇಶದಲ್ಲಿ ಕಾಯ್ದೆಯನ್ನು ಬೆಂಬಲಿಸುವ ರೈತರು ಸಾಕಷ್ಟು ಮಂದಿ ಇದ್ದರೂ, ಅವರ್ಯಾರೂ, ಕಾಯ್ದೆ ಪರವಾಗಿ ರಸ್ತೆಗಿಳಿದದ್ದನ್ನು ಕಾಣಲೇ ಇಲ್ಲ. ಸುಪ್ರೀಂ ಕೋರ್ಟ್‌ ಕೂಡಾ ಮನವರಿಕೆ ಮಾಡುವುದರಲ್ಲಿ ವಿಫಲವಾಯಿತು ಎಂದರು.

ಭಾರತ ಸದ್ಯ ಅವಕಾಶಗಳ ನೆಲವಾಗಿ ಉಳಿದಿಲ್ಲ, 30 ವರ್ಷಗಳ ಹಿಂದೆ ಅವಕಾಶಗಳ ನೆಲವಾಗಿತ್ತು, ಈಗ ಅವಕಾಶಗಳನ್ನು ಕಳೆದುಕೊಂಡ ನೆಲವಾಗಿದೆ ಎಂದರು. ಇನ್ನಾದರೂ ಇರುವ ಅವಕಾಶಗಳನ್ನು ಬಳಸಿಕೊಳ್ಳದಿದ್ದರೆ ನಮ್ಮ ಭವಿಷ್ಯ ಇನ್ನಷ್ಟು ಮಾರಕವಾಗುವ ಸಾಧ್ಯತೆಯಿದೆ ಎಂದು ಎಚ್ಚರಿಸಿದರು.

ಪ್ರವಾಸೋದ್ಯಮಕ್ಕೆ ನಮಲ್ಲಿ ವಿಪುಲವಾದ ಅವಕಾಶಗಳಿದ್ದರೂ ಅದನ್ನು ಬಳಸಿಕೊಳ್ಳುವಲ್ಲಿ ನಾವು ವಿಫಲರಾಗಿದ್ದೇವೆ. ನದಿಗಳನ್ನು ಜೋಡಿಸುವ ಮೂಲಕ ನೀರಿನ ಸಮಸ್ಯೆಯನ್ನು ಬಗೆಹರಿಸಬೇಕಾದ ನಾವು ರೈಲಿನಲ್ಲಿ ನೀರಿನ ಸಾಗಾಟಕ್ಕೆ ಹಸಿರು ನಿಶಾನೆ ತೋರಿಸುತ್ತಿದ್ದೇವೆ ಎಂದರು.

ರಾಮಕೃಷ್ಣ ಮಠ ಮಂಗಳೂರು ಅಧ್ಯಕ್ಷ ಸ್ವಾಮಿ ಜಿತಕಾಮಾನಂದ ಜೀ ಅವರು ಆಶೀರ್ವಚನ ನೀಡಿ, ವಿವಿಧ ವಿಚಾರಗಳಲ್ಲಿ ವಿಶ್ವಕ್ಕೆ ಭಾರತ ನೀಡಿರುವ ಕೊಡುಗೆ ಅವಿಸ್ಮರಣೀಯವಾದುದು. ಅನಾದಿ ಕಾಲದಿಂದಲೂ ಸಾಕಷ್ಟು ಉತ್ತಮ ವಿಚಾರಗಳನ್ನ ಹೊಂದಿದ್ದು, ಬಹುತೇಕ ದಾಖಲೆಯಾಗದೇ ಹೋಗಿದೆ. ಕೆಲವು ವಿಚಾರಗಳನ್ನು ಮುಂದಿನ ತಲೆಮಾರಿಗೆ ಕಲಿಸಿಕೊಡುವಲ್ಲಿ ವಿಫಲವಾಗಿದ್ದೇವೆ. ಅದರೂ ದೇಶ ವಿವೇಕಾನಂದರ ಚಿಂತನೆಯಂತೆ ವಿಶ್ವದಲ್ಲೇ ಗುರುವಿನ ಸ್ಥಾನ ಪಡೆಯುವತ್ತ ಮುನ್ನಡೆಯುತ್ತಿದೆ ಎಂದರು.

ನಿಟ್ಟೆ (ಡೀಮ್ಡ್ ಟುಬಿ) ಯುನಿವರ್ಸಿಟಿ ಕುಲಾಧಿಪತಿ ಎನ್‌. ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಿದರು. ಇದೇ ವೇಳೆ ಆನಂದ್‌ ರಂಗನಾಥನ್‌ ಅವರ ಕೃತಿ “ಹಿಂದೂಸ್‌ ಇನ್‌ ಹಿಂದೂ ರಾಷ್ಟ್ರ’ ಬಿಡುಗಡೆಗೊಳಿಸಲಾಯಿತು.

ಕಾರ್ಯಕ್ರಮ ಸಂಚಾಲಕ ಕ್ಯಾ| ಗಣೇಶ್‌ ಕಾರ್ಣಿಕ್‌ ಸ್ವಾಗತಿಸಿದರು. ಸಹ ಸಂಚಾಲಕ, ಪ್ರೊ| ಧನೇಶ್‌ ಕುಮಾರ್‌ ವಂದಿಸಿದರು. ಐಶ್ವರ್ಯ ನಾಯಕ್‌ ಕಾರ್ಯಕ್ರಮ ನಿರೂಪಿಸಿದರು.

 

ಟಾಪ್ ನ್ಯೂಸ್

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

15-monalisa

Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ

nagavalli bangale kannada movie

Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

1sadgu

Pariksha Pe Charcha: ಸಾರ್ಟ್‌ಫೋನ್‌ಗಿಂತಲೂ ನೀವು ಸಾರ್ಟ್‌ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

18

Uv Fusion: ಗೆಳೆತನವೆಂಬ ನಿಸ್ವಾರ್ಥ ಬಾಂಧವ್ಯ

17

Uv Fusion: ಎಡವುದು ಕೂಡ ಒಳ್ಳೆಯದೇ ಒಮ್ಮೊಮ್ಮೆ…

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.