Karnataka: ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆ

ಎರಡು ದಿನ ಸರಕಾರಿ ರಜೆ, ಅ.3ರಿಂದ ಅಧಿಕೃತವಾಗಿ ಜಾರಿ ಖುಷ್ಕಿ ಜಮೀನು ಎಕ್ರೆಗೆ 1 ಲಕ್ಷ ರೂ

Team Udayavani, Sep 30, 2023, 11:40 PM IST

sthiraasthi

ಬೆಂಗಳೂರು: ಗ್ಯಾರಂಟಿ ಯೋಜನೆಗಳಿಂದ ಬೊಕ್ಕಸದ ಮೇಲಾಗುವ ಭಾರ ಇಳಿಸಿಕೊಳ್ಳಲು ಬಜೆಟ್‌ನಲ್ಲಿ ಪ್ರಸ್ತಾವಿ ಸಿದಂತೆ ಸ್ಥಿರಾಸ್ತಿಗಳ ಮಾರ್ಗಸೂಚಿ ದರ ಪರಿಷ್ಕರಣೆಗೊಂಡಿದ್ದು, ಅ.1ರಿಂದ ಪರಿಷ್ಕೃತ ಮಾರ್ಗಸೂಚಿ ದರ ಜಾರಿಗೆ ಬರಲಿದೆ.

ಆದರೆ ಅ.1ರ ರವಿವಾರ ಹಾಗೂ ಅ.2ರ ಸೋಮವಾರ ಸರಕಾರಿ ರಜೆ ಇರುವ ಕಾರಣ ಅ.3 ರಿಂದ ಅಧಿಕೃತವಾಗಿ ಪರಿಷ್ಕೃತ ದರ ಜಾರಿಗೆ ಬರಲಿದೆ.

2019ರ ಜ.1ರಲ್ಲಿ ಮಾರ್ಗಸೂಚಿ ದರ ಪರಿಷ್ಕರಣೆಗೊಂಡಿದ್ದು ಬಿಟ್ಟರೆ ಆ ಬಳಿಕ ಈಗ ಪರಿಷ್ಕರಣೆ ಆಗುತ್ತಿದೆ. ಅನಂತರ ಅನೇಕ ಸೊತ್ತುಗಳು ಭೌತಿಕ ಬದಲಾವಣೆಗೆ ಒಳಪಟ್ಟು ಮಾರುಕಟ್ಟೆ ದರಗಳಲ್ಲಿ ವ್ಯತ್ಯಾಸಗಳಾಗಿವೆ. ಕಪ್ಪು ಹಣದ ವಹಿವಾಟಿಗೂ ಇದು ಕಾರಣವಾಗಿದೆ. ಈ ಲೋಪಗಳನ್ನು ಸರಿಪಡಿಸಲು ಮಾರ್ಗಸೂಚಿ ದರ ಪರಿಷ್ಕರಣೆ ಅನಿವಾರ್ಯ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ನೇತೃತ್ವದ ಸಂಪುಟ ಉಪಸಮಿತಿ ಶಿಫಾರಸು ಮಾಡಿತ್ತು. ಇದಕ್ಕೆ ಸಚಿವ ಸಂಪುಟ ಸಭೆಯ ಅನುಮೋದನೆಯೂ ದೊರೆತಿತ್ತು.

25 ಸಾ.ಕೋಟಿ ರೂ. ಸಂಗ್ರಹದ ಗುರಿ
ಕಳೆದ ಬಜೆಟ್‌ನಲ್ಲಿ ಮುದ್ರಾಂಕ ಮತ್ತು ನೋಂದಣಿ ಇಲಾಖೆಗೆ 17 ಸಾವಿರ ಕೋಟಿ ರೂ.ಗಳ ರಾಜಸ್ವ ಸಂಗ್ರಹಣೆ ಗುರಿ ಕೊಟ್ಟಿದ್ದ ಸರಕಾರ, ಈ ಬಾರಿ ಬಜೆಟ್‌ನಲ್ಲಿ ಬರೋಬ್ಬರಿ 25 ಸಾವಿರ ಕೋಟಿ ರೂ.ಗಳ ಗುರಿ ನೀಡಿದೆ. ಕಳೆದ ಬಾರಿಗಿಂತ ಸರಿಸುಮಾರು 8 ಸಾವಿರ ಕೋಟಿ ರೂ.ಗಳ ಹೆಚ್ಚು ಗುರಿ ಇಟ್ಟುಕೊಂಡಿರುವ ಸರಕಾರ, ಉಳಿದಿರುವ ಐದಾರು ತಿಂಗಳಲ್ಲಿ ಗುರಿ ತಲುಪಬೇಕಿದೆ. ಗುರಿ ಮೀರಿ ಸಾಧನೆ ಮಾಡುವಂತೆಯೂ ಅಧಿಕಾರಿಗಳಿಗೆ ಸಿಎಂ ಸೂಚಿಸಿದ್ದಾರೆ. ಇದೇ ಕಾರಣದಿಂದ ಜೂ.25ರಿಂದ ರಾಜ್ಯದ 256 ಉಪನೋಂದಣಾಧಿಕಾರಿ ಕಚೇರಿಗಳಲ್ಲೂ ಕಾವೇರಿ-2 ಸುಧಾರಿತ ತಂತ್ರಾಂಶದಡಿಯೇ ನೋಂದಣಿ, ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, ಸೆ.27ರಂದು ಒಂದೇ ದಿನ 26,058 ನೋಂದಣಿ, ದಸ್ತಾವೇಜು ನಡೆದು 311 ಕೋಟಿ ರೂ. ಸಂಗ್ರಹವಾಗಿತ್ತು.

ಮಾರುಕಟ್ಟೆ ದರ ಮತ್ತು ಮಾರ್ಗಸೂಚಿ ದರಕ್ಕೆ ಸಾಮ್ಯತೆ ಇರುವ ಪ್ರದೇಶಗಳಲ್ಲಿ ಶೇ.10ರಷ್ಟು ಮಾರ್ಗಸೂಚಿ ದರ ಏರಿಕೆ ಆಗಲಿದೆ. ಮಾರ್ಗಸೂಚಿ ದರಕ್ಕಿಂತ 200 ಪಟ್ಟು ಮಾರುಕಟ್ಟೆ ದರವಿದ್ದರೆ ಶೇ.20 ರಿಂದ 25ರಷ್ಟು ಮಾರ್ಗಸೂಚಿ ದರದಲ್ಲಿ ಹೆಚ್ಚಳ ಆಗಲಿದೆ. ಮಾರ್ಗಸೂಚಿಗಿಂತ 500 ಪಟ್ಟು ಮಾರುಕಟ್ಟೆ ದರ ಇರುವ ಬೆಂಗಳೂರಿನ ಕೆಲವು ಪ್ರದೇಶಗಳು, ರಾಷ್ಟ್ರೀಯ ಹೆದ್ದಾರಿ ಬದಿಯ ಸೊತ್ತುಗಳಿಗೆ ಶೇ.50ರ ವರೆಗೆ ಮಾರ್ಗಸೂಚಿ ದರ ಪರಿಷ್ಕರಣೆ ಆಗಲಿದೆ. ಒಟ್ಟಾರೆ ಸ್ಥಿರಾಸ್ತಿಗಳ ಮಾರುಕಟ್ಟೆ ದರದಲ್ಲಿ ಸರಾಸರಿ ಶೇ.30ರಷ್ಟು ಹೆಚ್ಚಳವಾಗಿದ್ದು, ಗರಿಷ್ಟ ಶೇ.50ರ ವರೆಗೆ ಏರಿಕೆ ಆಗಲಿದೆ.
ಪ್ರತಿ ಎಕ್ರೆ ಖುಷ್ಕಿ ಜಮೀನಿನ ಮಾರ್ಗಸೂಚಿ ದರವೂ 1 ಲಕ್ಷ ರೂ. ಆಗಲಿದೆ. ನಗರಸಭೆ, ಪುರಸಭೆ ವ್ಯಾಪ್ತಿಯ ನಿವೇಶನಗಳ ಪ್ರತಿ ಚದರ ಮೀಟರ್‌ಗೆ ಕನಿಷ್ಠ 5 ಸಾವಿರ ರೂ., ಗ್ರಾಮ ಠಾಣ ನಿವೇಶನದ ಪ್ರತಿ ಚದರ ಮೀಟರ್‌ಗೆ 1 ಸಾವಿರ ರೂ., ಸಕ್ಷಮ ಪ್ರಾಧಿಕಾರದಿಂದ ಅನುಮೋದನೆಗೊಂಡ ವಸತಿ ನಿವೇಶನಗಳ ಪ್ರತಿ ಚದರ ಮೀಟರ್‌ಗೆ 2,500 ರೂ. ಮಾರ್ಗಸೂಚಿ ನಿಗದಿಯಾಗಲಿದೆ.

8.66 ಲಕ್ಷ ನೋಂದಣಿ, 7 ಸಾವಿರ ಕೋಟಿ ರೂ. ಸಂಗ್ರಹ
ಕಾವೇರಿ-2 ತಂತ್ರಾಂಶದ ಮೂಲಕ ಆಸ್ತಿಗಳ ನೋಂದಣಿ, ದಸ್ತಾವೇಜು ಪ್ರಕ್ರಿಯೆ ಜೂನ್‌ 25ರಂದು ಆರಂಭಿಸಿದ ಅಂದಿನಿಂದ ಈವರೆಗೆ ರಾಜ್ಯಾದ್ಯಂತ 8.66 ಲಕ್ಷ ದಾಖಲೆಗಳ ನೋಂದಣಿ, ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 7 ಸಾವಿರ ಕೋಟಿ ರೂ. ತೆರಿಗೆ ಸಂಗ್ರಹವಾಗಿದೆ. ಕಳೆದ ಬಾರಿ ಇದೇ ಸಮಯಕ್ಕೆ 8.63 ಲಕ್ಷ ದಾಖಲೆಗಳ ನೋಂದಣಿ, ದಸ್ತಾವೇಜು ಪ್ರಕ್ರಿಯೆಯಿಂದ 5,373 ಕೋಟಿ ರೂ. ಸಂಗ್ರಹವಾಗಿತ್ತು. ಕಳೆದ ಬಾರಿಗಿಂತ ಈ ಬಾರಿ 2,963 ದಾಖಲೆಗಳ ನೋಂದಣಿ, ದಸ್ತಾವೇಜು ಪ್ರಕ್ರಿಯೆ ನಡೆದಿದ್ದು, 1,627 ಕೋಟಿ ರೂ. ಹೆಚ್ಚುವರಿ ಸಂಗ್ರಹವಾಗಿದೆ. ಕಳೆದ 1 ವಾರದಲ್ಲಿ ಸುಮಾರು 1,500 ಕೋಟಿ ರೂ. ರಾಜಸ್ವ ಸಂಗ್ರಹವಾಗಿದೆ ಎಂದು ನೋಂದಣಿ ಮಹಾಪರಿವೀಕ್ಷಕಿ ಮತ್ತು ಮುದ್ರಾಂಕ ಆಯುಕ್ತೆ ಡಾ| ಬಿ.ಆರ್‌. ಮಮತಾ ತಿಳಿಸಿದರು.

ಟಾಪ್ ನ್ಯೂಸ್

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

Udayavani.com “ನಮ್ಮನೆ ಕೃಷ್ಣ”: ಪ್ರಥಮ ಬಹುಮಾನ ಗಳಿಸಿದ ರೀಲ್ಸ್

1-dsad

Rescue;ಅಪಘಾತಕ್ಕೀಡಾಗಿ ಫ್ಲೈಓವರ್ ಪಿಲ್ಲರ್‌ನಲ್ಲಿ ಸಿಲುಕಿಕೊಂಡ ಮಹಿಳೆ!!

CHandrababu-Naidu

Laddu ವಿವಾದ: ಮುಂದಿನ ಕ್ರಮದ ಬಗ್ಗೆ ಅರ್ಚಕರು, ತಜ್ಞರೊಂದಿಗೆ ಸಮಾಲೋಚನೆ: ಸಿಎಂ ನಾಯ್ಡು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Thug Life: ದುಬಾರಿ ಬೆಲೆಗೆ ಕಮಲ್‌ ಹಾಸನ್ ʼಥಗ್‌ ಲೈಫ್‌ʼ ಓಟಿಟಿ ರೈಟ್ಸ್ ಸೇಲ್

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು

Padmaavat To Billu.. ಟೈಟಲ್‌ನಿಂದಲೇ ವಿವಾದಕ್ಕೆ ಗುರಿಯಾದ ಬಾಲಿವುಡ್‌ ಸಿನಿಮಾಗಳಿವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

1-weewqe

Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು

yatnal

BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್

1-darshan

Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್

crime (2)

Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

7

Test Cricket: ಲಂಕಾ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಪಂದ್ಯಕ್ಕೆ ರೆಸ್ಟ್‌

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

Muloor: ಮಹಿಳೆಗೆ ರಿಕ್ಷಾ ಢಿಕ್ಕಿ ; ಗಾಯ

1-frr

Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್‌ಐಟಿ ರಚಿಸಿದ ರಾಜ್ಯ ಸರಕಾರ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Thekkatte: ಇಸ್ಪೀಟು ಜುಗಾರಿ ಅಡ್ಡೆಯ ಮೇಲೆ ದಾಳಿ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Mangaluru: ಬಾಲಕಿಯ ಅತ್ಯಾಚಾರ; ಆರೋಪಿಗೆ 20 ವರ್ಷ ಕಠಿನ ಶಿಕ್ಷೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.