ರಾಜ್ಯಗಳ ಸಮ್ಮತಿ ಇಲ್ಲದೆ ನದಿ ಜೋಡಣೆ ಸಲ್ಲ: ಸಿದ್ದರಾಮಯ್ಯ ಪ್ರತಿಪಾದನೆ


Team Udayavani, Feb 5, 2022, 6:30 AM IST

ರಾಜ್ಯಗಳ ಸಮ್ಮತಿ ಇಲ್ಲದೆ ನದಿ ಜೋಡಣೆ ಸಲ್ಲ: ಸಿದ್ದರಾಮಯ್ಯ ಪ್ರತಿಪಾದನೆ

ಬೆಂಗಳೂರು: ರಾಜ್ಯಗಳ ಸಮ್ಮತಿ ಪಡೆಯದೆ ಚರ್ಚೆ ನಡೆಸದೆ ನದಿ ಜೋಡಣೆ ಯೋಜನೆ ಜಾರಿ ಮಾಡಿದರೆ ರಾಜ್ಯಗಳ ನಡುವೆ ಸಂಘರ್ಷ ಉಂಟಾಗಿ ಜಲ ವಿವಾದ ಉದ್ಭವವಾಗಲಿದೆ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳು ಹಾಗೂ ಸರ್ವಪಕ್ಷಗಳ ಸಭೆ ಕರೆದು ಯಾವ ನದಿಯಿಂದ ಎಷ್ಟು ನೀರು ಸಿಗುತ್ತದೆ, ಯಾವ ರಾಜ್ಯಗಳಿಗೆ ಎಷ್ಟು ನೀರು ಸಿಗುತ್ತದೆ ಎಂಬ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಒಕ್ಕೂಟ ವ್ಯವಸ್ಥೆಯಲ್ಲಿ ಮಾಹಿತಿ ಪಡೆಯುವುದು ಪ್ರತಿ ರಾಜ್ಯದ ಹಕ್ಕು. ಏಕಮುಖವಾದ ನಿರ್ಧಾರ ಮಾಡಿ ರಾಜ್ಯಗಳ ಮೇಲೆ ಹೇರುವ ಪ್ರಯತ್ನ ಸರ್ವಾಧಿಕಾರಿ ಧೋರಣೆಯಾಗುತ್ತದೆ. ಇದನ್ನು ನಾನು ಖಂಡಿಸುತ್ತೇನೆ ಎಂದು ಹೇಳಿದರು.

ಎರಡು ಹಂತದಲ್ಲಿ ಯೋಜನೆ ಜಾರಿ ಮಾಡ್ತೇವೆ, ಮೊದಲ ಹಂತದಲ್ಲಿ ಕರ್ನಾಟಕಕ್ಕೆ ಅನುಕೂಲ ಆಗಲ್ಲ, ಎರಡನೇ ಹಂತದಲ್ಲಿ ಸ್ವಲ್ಪ ಅನುಕೂಲ ಆಗಬಹುದು ಎಂದು ಕೇಂದ್ರ ಸರ್ಕಾರ ಹೇಳುತ್ತದೆ.. ನನ್ನ ಪ್ರಕಾರ ಶೇ. 90 ತಮಿಳುನಾಡಿಗೆ ಅನುಕೂಲವಾಗುತ್ತೆ. 1978 ರಲ್ಲಿ ಮೊರಾರ್ಜಿ ದೇಸಾಯಿ ಅವರು ಗಂಗಾ-ಕಾವೇರಿ ನದಿ ಜೋಡಣೆ ಮಾಡುತ್ತೇವೆ ಎಂದಿದ್ದರು. ಒಂದು ಹಿಮಾಲಯದಲ್ಲಿ ಹುಟ್ಟುವ ನದಿ ಆಗಿರುವುದರಿಂದ ಅನುಕೂಲವಾಗುತ್ತೆ. ವಾಜಪೇಯಿ ಅವರು ಇದೇ ಯೋಜನೆಯನ್ನು ಪ್ರಸ್ತಾಪ ಮಾಡಿದರು, ಆದರೆ ಈ ಬಗ್ಗೆ ಕ್ರಮ ಕೈಗೊಂಡಿಲ್ಲ. ಮತ್ತೆ ಈಗ ಅದೇ ಸುಳ್ಳನ್ನು ಹೇಳಲು ಆರಂಭ ಮಾಡಿದ್ದಾರೆ ಎಂದು ಟೀಕಿಸಿದರು.

ಬಜೆಟ್‌ನಲ್ಲಿ ನದಿ ಜೋಡಣೆ ವಿಚಾರವಾಗಿ 46,000 ಕೋಟಿ ರೂ. ಯೋಜನೆ ಪ್ರಸ್ತಾಪಿಸಲಾಗಿದೆ. ಆದರೆ, ಇದು ಕಾರ್ಯಸಾಧುವಾದ ಯೋಜನೆಯಲ್ಲ. ನಿರ್ಮಲಾ ಸೀತಾರಾಮನ್‌ ಅವರು ತಮಿಳುನಾಡಿನವರಾಗಿದ್ದ ಕಾರಣಕ್ಕೆ ಈ ಯೋಜನೆ ಪ್ರಸ್ತಾಪ ಮಾಡಿರಬಹುದು. ನಮ್ಮ ರಾಜ್ಯದ ಜೊತೆ ಚರ್ಚಿಸಿದಂತೆ ಕಾಣುತ್ತಿಲ್ಲ ಎಂದರು.

ಇದನ್ನೂ ಓದಿ:ಗ್ರಾಮೀಣ ಮಕ್ಕಳು ಶಿಕ್ಷಣವಂತರಾಗಿ ಸ್ವಾಭಿಮಾನದಲ್ಲಿ ಬದುಕಬೇಕು : ಸಚಿವ ಈಶ್ವರಪ್ಪ

ಕೃಷ್ಣ, ಗೋದಾವರಿ, ಪೆನ್ನಾರ್‌ ಮತ್ತು ಕಾವೇರಿ ನದಿಗಳ ಜೋಡಣೆ ಪ್ರಸ್ತಾಪವಿದೆ. ರಾಷ್ಟ್ರೀಯ ಜಲ ಅಭಿವೃದ್ಧಿ ಏಜೆನ್ಸಿ ಯಲ್ಲಿ ಚರ್ಚಿಸಲಾಗಿದೆ, ಇದರಿಂದ 347 ಟಿ.ಎಂ.ಸಿ ನೀರು ಸಿಗಲಿದೆ, ದಕ್ಷಿಣ ರಾಜ್ಯಗಳಿಗೆ ನೀರು ಕೊಡಲು ಸಾಧ್ಯ ಎಂಬುದು ಅವರ ಆಲೋಚನೆ. ನದಿಗಳ ಜೋಡಣೆಯಿಂದ ಹೆಚ್ಚು ನೀರು ತಮಿಳುನಾಡಿಗೆ ಹೋಗುತ್ತದೆ ಎಂದು ಹೇಳಿದರು.

ನದಿ ಜೋಡಣೆ ಸಾಧಕ-ಬಾಧಕ ಕುರಿತು ಮುಖ್ಯಮಂತ್ರಿ ಸಹಿತ ಯಾರೊಬ್ಬರೂ ಮಾತನಾಡುತ್ತಿಲ್ಲ. ಇವರು ರಾಜ್ಯದ ಹಿತರಕ್ಷಣೆ ಮಾಡುತ್ತಾರಾ ಎಂದು ಪ್ರಶ್ನಿಸಿದ ಅವರು, ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಕರೆಯಬೇಕು. ನದಿ ಜೋಡಣೆ ವಿಷಯದಲ್ಲಿ ತನ್ನ ನಿಲುವು ಹೇಳಬೇಕು ಎಂದು ಆಗ್ರಹಿಸಿದರು.ಮಾಜಿ ಸಚಿವ ಜಮೀರ್‌ ಅಹಮದ್‌, ಪ್ರತಿಪಕ್ಷದ ಉಪ ನಾಯಕ ಯು.ಟಿ.ಖಾದರ್‌ ಉಪಸ್ಥಿತರಿದ್ದರು.

ಕಾಂಗ್ರೆಸ್‌ ಅಲ್ಪಸಂಖ್ಯಾತರಿಗೆ ಅನ್ಯಾಯ ಮಾಡಿಲ್ಲ. ಎಲ್ಲ ರೀತಿಯ ಅವಕಾಶ ಮಾಡಿಕೊಟ್ಟಿದೆ. ಯಾರಿಗೂ ಅಸಮಾಧಾನವಿಲ್ಲ. ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಸ್ಥಾನ ಜಮೀರ್‌ ಅಹಮದ್‌ ವಹಿಸಿಕೊಳ್ಳಲು ಹೈಕಮಾಂಡ್‌ ಸೂಚಿಸಿತು. ಆದರೆ, ಅವರೇ ಯು.ಟಿ.ಖಾದರ್‌ ಅವರು ವಹಿಸಿಕೊಳ್ಳಲಿ ಎಂದು ಹೇಳಿದರು.
– ಸಿದ್ದರಾಮಯ್ಯ

 

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.