Road Mishap: ಕಾರು ಅಪಘಾತ; ಪಾದಚಾರಿ ಸಾವು
Team Udayavani, Oct 8, 2024, 11:51 PM IST
ಮೂಲ್ಕಿ: ಇಲ್ಲಿನ ಹೆದ್ದಾರಿಯ ಬಪ್ಪನಾಡು ದೇವಸ್ಥಾನದ ಬಳಿ ಸೋಮವಾರ ರಾತ್ರಿ ಸಂಭವಿಸಿದ ಕಾರು ಅಫಘಾತದಲ್ಲಿ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಬಪ್ಪನಾಡು ದೇವಸ್ಥಾನದ ಬಳಿಯ ನಿವಾಸಿ ಸತೀಶ್ ಭಂಡಾರಿ (67) ಅವರು ತೀವ್ರವಾಗಿ ಗಾಯಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
ಸತೀಶ್ ಅವರು ಪೇಟೆಗೆ ಹೋಗಿದ್ದವರು ರಸ್ತೆ ಬದಿಯಲ್ಲಿ ನಡೆದುಕೊಂಡು ಮನೆಗೆ ಬರುತ್ತಿದ್ದಾಗ ಮಳೆ, ಸಿಡಿಲು ಬರುತ್ತಿದ್ದು, ಮಾತ್ರವಲ್ಲದೆ ವಿದ್ಯುತ್ ಬೇರೆ ಕೈಕೊಟ್ಟಿತ್ತು ಈ ಸಂಧರ್ಭ ಮಂಗಳೂರು ಕಡೆಯಿಂದ ಬರುತ್ತಿದ್ದ ಕಾರು ಇವರಿಗೆ ಢಿಕ್ಕಿ ಹೊಡೆದಿತ್ತು.
ತಲೆ ಮತ್ತು ಬೆನ್ನು ಮೂಳೆಗೆ ಗಂಭೀರವಾಗಿ ಗಾಯಗೊಂಡವರನ್ನು ಮುಕ್ಕಾ ಬಳಿಯ ಆಸ್ಪತ್ರೆಗೆ ದಾಖಲಿಸಲಾಗಿದ್ದರೂ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಅವರು ಸುಮಾರು ಮೂರೂವರೆ ದಶಕಗಳಿಗೂ ಮಿಕ್ಕಿದ ಕಾಲ ಗಲ್ಪ್ ರಾಷ್ಟ್ರದಲ್ಲಿ ಟೈಲರಿಂಗ್ ವೃತ್ತಿ ಮಾಡಿದ್ದರು. ಅವರು ಪತ್ನಿ ಮೂಲ್ಕಿ ನಗರ ಪಂಚಾಯತ್ನ ಮಾಜಿ ಉಪಾಧ್ಯಕ್ಷೆ ವಸಂತಿ ಭಂಡಾರಿ ಹಾಗೂ ಪುತ್ರ, ಪುತ್ರಿಯನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Belthangady: ವಿವಿಧೆಡೆ ಮಳೆ ಅಬ್ಬರ;ಘಾಟಿ ಪ್ರದೇಶದಲ್ಲಿ ಹೆಚ್ಚಿದ ಮಳೆ; ಉಕ್ಕಿ ಹರಿದ ನದಿಗಳು
PUC: ವಿಜ್ಞಾನದಲ್ಲಿ ಪ್ರೀತಂ, ವಾಣಿಜ್ಯದಲ್ಲಿ ಸಾನ್ವಿ, ಕಲಾ ವಿಭಾಗದಲ್ಲಿ ವೇದಾಂತ್ ಟಾಪರ್
Rain; ಶಂಕರನಾರಾಯಣ: ಮಳೆಗೆ ಅಪಾರ ಹಾನಿ: ಮರ ಬಿದ್ದು ಕಾರು ಜಖಂ
Udupi ಉಚ್ಚಿಲ ದಸರಾ 2024; ದಸರಾ ವೈಭವದ ಶೋಭೆ ಹೆಚ್ಚಿಸಿದ ಜನಸಾಗರ
Uchila Mahalakshmi Temple: ಕುಂಕುಮಾರ್ಚನೆ ಸೇವೆಗೆ ಮಹಿಳೆಯರಿಂದ ಭಾರೀ ಸ್ಪಂದನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.