ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ


Team Udayavani, Apr 8, 2020, 6:06 AM IST

ಫಿನಿಶರ್‌ ಆಗಿ ತಂಡಕ್ಕೆ ಮರಳುವೆ: ರಾಬಿನ್‌ ಉತ್ತಪ್ಪ

ಹೊಸದಿಲ್ಲಿ: ಕರ್ನಾಟಕದ ಡ್ಯಾಶಿಂಗ್‌ ಬ್ಯಾಟ್ಸ್‌ಮನ್‌ ರಾಬಿನ್‌ ಉತ್ತಪ್ಪ 2015ರ ಬಳಿಕ ಭಾರತೀಯ ತಂಡದಲ್ಲಿ ಕಾಣಿಸಿಕೊಳ್ಳಲಿಲ್ಲ. ಆದರೂ ಟಿ20 ಮಾದರಿಯ ಕ್ರಿಕೆಟ್‌ನಲ್ಲಿ ಭಾರತ ತಂಡಕ್ಕೆ ಮರಳುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಕೇವಲ ಆಟಗಾರರಾಗಿ ಮತ್ರವಲ್ಲ. ಫಿನಿಶರ್‌ ಆಗಿ ಮರಳುವುದು ಅವರ ಗುರಿಯಾಗಿದೆ. ಇಷ್ಟು ಮಾತ್ರವಲ್ಲದೇ ಇನ್ನೊಂದು ವಿಶ್ವಕಪ್‌ನಲ್ಲಿ ಆಡುವುದು ಅವರಿಗೆ ಬಾಕಿ ಉಳಿದಿದೆಯಂತೆ.

2007ರ ಏಕದಿನ ವಿಶ್ವಕಪ್‌ ಮತ್ತು ಉದ್ಘಾಟನಾ ಟಿ20 ವಿಶ್ವಕಪ್‌ ವಿಜಯಿ ತಂಡದ ಸದಸ್ಯರಾಗಿದ್ದ ಉತ್ತಪ್ಪ ಅವರು ಜಿಂಬಾಬ್ವೆ ಪ್ರವಾಸದ ವೇಳೆ 2015ರ ಜುಲೈ ತಿಂಗಳಲ್ಲಿ ಕೊನೆಯ ಬಾರಿ ಭಾರತ ತಂಡದ ಪರ ಆಡಿದ್ದರು.

34ರ ಹರೆಯದ ಉತ್ತಪ್ಪ 2011ರ ಅಕ್ಟೋಬರ್‌ ಬಳಿಕ ಕೇವಲ ಎಂಟು ಏಕದಿನ ಮತ್ತು ನಾಲ್ಕು ಟಿ20 ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು.

ಸದ್ಯದ ಮಟ್ಟಿಗೆ ನಾನು ಸ್ಪರ್ಧಾತ್ಮಕವಾಗಿ ಇರುವುದನ್ನು ಬಯಸುತ್ತೇನೆ. ಸ್ಫೋಟಕ ಮನೋಭಾವ ಮತ್ತು ಆಟವಾಡುವ ಉತ್ಸಾಹ ನನ್ನಲ್ಲಿ ಇನ್ನೂ ಉಳಿದಿದೆ. ತಂಡದಲ್ಲಿ ಸ್ಥಾನ ಪಡೆದು ಉತ್ತಮ ನಿರ್ವಹಣೆ ನೀಡುವ ಬಯಕೆ ನನ್ನಲ್ಲಿದೆ. ನಿಜ ಹೇಳಬೇಕೆಂದರೆ ಇನ್ನೊಂದು ವಿಶ್ವಕಪ್‌ ಆಡುವ ಮನಸ್ಸಿದೆ. ಹಾಗಾಗಿ ಚುಟುಕು ಮಾದರಿಯ ಕ್ರಿಕೆಟ್‌ನಲ್ಲಿಯಾದರೂ ಇದನ್ನು ಸಾಧಿಸಲು ಪ್ರಯತ್ನಿಸುವೆ ಎಂದಿದ್ದಾರೆ.

ಫಿನಿಶರ್‌ ಪಾತ್ರ
ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡು ವುದನ್ನು ಇಷ್ಟಪಡುತ್ತೇನೆ. ಆದರೆ ಪಂದ್ಯ ಗೆಲ್ಲಿಸಿ ಕೊಡಬಲ್ಲ ಫಿನಿಶರ್‌ ಪಾತ್ರ ವಹಿಸುವುದೇ ನನ್ನ ಗುರಿಯಾಗಿದೆ. ಲಾಕ್‌ಡೌನ್‌ ಇರುವುದರಿಂದ ಮನೆಯಲ್ಲಿಯೇ ಇರುವ ಕಾರಣ ಕಠಿನ ಅಭ್ಯಾಸ ಮಾಡುತ್ತಿದ್ದೇನೆ ಎಂದು ಉತ್ತಪ್ಪ ವಿವರಿಸಿದರು.

ಟಾಪ್ ನ್ಯೂಸ್

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.