![DKSHi-4](https://www.udayavani.com/wp-content/uploads/2025/02/DKSHi-4-415x234.jpg)
![DKSHi-4](https://www.udayavani.com/wp-content/uploads/2025/02/DKSHi-4-415x234.jpg)
Team Udayavani, Dec 26, 2022, 11:00 PM IST
ಬೆಳಗಾವಿ: ಅಮೆರಿಕದ ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ತನ್ನ ಕ್ಲೌಡ್ ತಂತ್ರಜ್ಞಾನದ ನಾವೀನ್ಯತಾ ಕೇಂದ್ರವನ್ನು ಸ್ಥಾಪಿಸುವ ಸಂಬಂಧ ಐಟಿ-ಬಿಟಿ ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಪೂರ್ವಭಾವಿ ಮಾತುಕತೆ ನಡೆಸಿದೆ.
ಇಲ್ಲಿನ ಸುವರ್ಣ ಸೌಧದ ವಿಧಾನಪರಿಷತ್ ಮೊಗಸಾಲೆಯಲ್ಲಿ ಸೋಮವಾರ ನಡೆದ ಈ ಮಾತುಕತೆಯಲ್ಲಿ ಹೂಡಿಕೆ ಮತ್ತು ಉದ್ಯೋಗ ಸೃಷ್ಟಿ ಮುಂತಾದ ಪ್ರಮುಖ ಅಂಶಗಳನ್ನು ಕುರಿತು ವಿಚಾರ ವಿನಿಮಯ ಮಾಡಿಕೊಳ್ಳಲಾಯಿತು. ಕಂಪನಿಯ ಪರವಾಗಿ ಅದರ ಸಿಇಒ ಅಮರ್ ಮಲೆತೀರ ಅವರು ಇದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ‘ಕರ್ನಾಟಕವು ಹೂಡಿಕೆ ಮತ್ತು ಉದ್ಯೋಗ ಸೃಷ್ಟಿಯ ಅತ್ಯುತ್ತಮ ಕಾರ್ಯ ಪರಿಸರ ಹೊಂದಿದೆ. ಜತೆಗೆ ಸರಕಾರದ ನೀತಿಗಳು ಸಂಶೋಧನೆ ಮತ್ತು ಅಭಿವೃದ್ಧಿ, ಹಾಗೂ ಉತ್ಪಾದನೆಗೆ ಪೂರಕವಾಗಿವೆ. ಇದರ ಜತೆಗೆ ಕೌಶಲ್ಯಪೂರ್ಣ ಮಾನವ ಸಂಪನ್ಮೂಲ ಒದಗಿಸಲು ಸೂಕ್ತ ವ್ಯವಸ್ಥೆ ಇದೆ” ಎಂದರು.
ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯಲ್ಲಿ ನೆಲೆಯೂರಿದರೆ ಅಪಾರ ಬಂಡವಾಳ ಹರಿದು ಬರಲಿದ್ದು, ಸ್ಥಳೀಯ ಪ್ರತಿಭಾವಂತರಿಗೆ ಉದ್ಯೋಗದ ಅವಕಾಶಗಳ ಬಾಗಿಲು ತೆರೆಯಲಿದೆ. ಇದರಿಂದ ಅನಗತ್ಯ ವಲಸೆ ತಪ್ಪಿ, ಪ್ರಾದೇಶಿಕ ಅಸಮತೋಲನ ನಿವಾರಣೆಯೂ ಆಗಲಿದೆ ಎಂದು ಅವರು ನುಡಿದರು.
ಬೆಂಗಳೂರಿನ ಆಚೆಗೂ ಉದ್ಯಮಗಳು ಬರಬೇಕು ಎನ್ನುವುದು ಸರಕಾರದ ನೀತಿಯಾಗಿದೆ. ರಾಕ್ ಸ್ಪೇಸ್ ಕಂಪನಿಯು ಬೆಳಗಾವಿಯನ್ನು ಆಯ್ದುಕೊಂಡಿರುವುದು ಸ್ವಾಗತಾರ್ಹ ಎಂದರು.
ಚರ್ಚೆಯಲ್ಲಿ ಕರ್ನಾಟಕ ಡಿಜಿಟಲ್ ಎಕಾನಮಿ ಮಿಷನ್ ಸಿಇಒ ಸಂಜೀವ್ ಗುಪ್ತ ಕೂಡ ಇದ್ದರು.
ಅಮೆರಿಕದ ರಾಕ್ ಸ್ಪೇಸ್ ಕಂಪನಿಯ ಸಿಇಒ ಅಮರ್ ಮಲೆತೀರ ಅವರು ಐಟಿ-ಬಿಟಿ ಸಚಿವ ಡಾ. ಸಿ ಎನ್ ಅಶ್ವತ್ಥನಾರಾಯಣ ಅವರೊಂದಿಗೆ ಬೆಳಗಾವಿಯಲ್ಲಿ ಸೋಮವಾರ ಮಾತುಕತೆ ನಡೆಸಿದರು. ಜತೆಯಲ್ಲಿ ಕೆಡಿಇಎಂ ಸಿಇಒ ಸಂಜೀವ್ ಗುಪ್ತ ಇದ್ದರು.
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
Water Resource: ನನ್ನ ಜೀವಿತಾವಧಿಯಲ್ಲೇ ನೀರಿನ ಸಮಸ್ಯೆ ಬಗೆಹರಿಯಬೇಕು: ಎಚ್.ಡಿ.ದೇವೇಗೌಡ
Congress Siddu Team: ಸಿದ್ದರಾಮಯ್ಯ ಆಪ್ತರಿಂದ ಈಗ ʼಮಾಸ್ ಲೀಡರ್ʼ ಅಸ್ತ್ರ
You seem to have an Ad Blocker on.
To continue reading, please turn it off or whitelist Udayavani.