ಮಾಸಾಂತ್ಯಕ್ಕೆ ತೋಳನ ಕೆರೆ ಅಣಿ

20.26 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ; ಲ್ಯಾಂಡ್‌ಸ್ಕೇಪ್‌ ಕಾಮಗಾರಿ ಪೂರ್ಣ

Team Udayavani, Aug 4, 2021, 6:51 PM IST

lake

ತೋಳನಕೆರೆ ಆವರಣದಲ್ಲಿ ನಿರ್ಮಿಸಲಾದ ಓಪನ್‌ ಎಂಪಿ ಥೇಟರ್‌.

ಹುಬ್ಬಳ್ಳಿ: ಗೋಕುಲ ರಸ್ತೆ-ಶಿರೂರ ಪಾರ್ಕ್‌ ನಡುವೆ 32 ಎಕರೆ ವಿಶಾಲ ಜಾಗದಲ್ಲಿರುವ ತೋಳನ ಕೆರೆ ಆವರಣವನ್ನು ಅಂದಾಜು 20.26 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಆಗಸ್ಟ್‌ ಅಂತ್ಯದೊಳಗೆ ಇದು ಪೂರ್ಣಗೊಂಡು ಸಾರ್ವಜನಿಕರ ಬಳಕೆಗೆ ಅಣಿಯಾಗಲಿದೆ. ಹು-ಧಾ ಸ್ಮಾರ್ಟ್‌ ಸಿಟಿ ಯೋಜನೆಯಡಿ ತೋಳನಕೆರೆ ಅಭಿವೃದ್ಧಿ ಪಡಿಸಲಾಗುತ್ತಿದ್ದು, ಇದನ್ನು ಪಿಕ್‌ನಿಕ್‌ ಸ್ಪಾಟ್‌ ಆಗಿ ಪರಿವರ್ತಿಸಲಾಗುತ್ತಿದೆ.

ಕೆರೆಗೆ ಹರಿದುಬರುತ್ತಿದ್ದ ಸುತ್ತಮುತ್ತಲಿನ ಪ್ರದೇಶದ ತ್ಯಾಜ್ಯ ನೀರನ್ನು ತಡೆಗಟ್ಟಲಾಗಿದ್ದು, ಎಸ್‌ಟಿಪಿ ಪ್ಲಾಂಟ್‌ ನಿರ್ಮಿಸಲಾಗಿದೆ. ಕೆರೆಯ ಸುತ್ತಲಿನ ಆವರಣದ ಸುಮಾರು 14 ಎಕರೆ ಜಾಗದಲ್ಲಿ ಅಂದಾಜು 4 ಕೋಟಿ ರೂ. ವೆಚ್ಚದಲ್ಲಿ ಸ್ಪೋರ್ಟ್ಸ್  ಗಾರ್ಡನ್‌ ನಿರ್ಮಿಸಲಾಗುತ್ತಿದೆ. ಈಗಾಗಲೇ ಇಲ್ಲಿ ಮಕ್ಕಳಿಗೆ ಎರಡು ಕಡೆ ಆಟದ ಸಾಮಗ್ರಿ ಹಾಗೂ ಸಾಮಾನ್ಯ ಓಪನ್‌ ಜಿಮ್‌ ಸೇರಿ 2ರಿಂದ 80 ವರ್ಷ ವಯೋಮಾನದವರು
ಉಪಯೋಗಿಸಬಹುದಾದ 56 ಬಗೆಯ ಆಟದ ಉಪಕರಣಗಳನ್ನು ಅಳವಡಿಸಲಾಗಿದೆ. ಬಾಲಿಯ ಓರ್ವ ಡಿಸೈನರ್‌ ಪರಿಕಲ್ಪನೆಯಂತೆ ಈ ಸ್ಪೋರ್ಟ್ಸ್ ಗಾರ್ಡನ್‌ ನಿರ್ಮಿಸಲಾಗಿದೆ. ಇಂತಹ ಸ್ಪೋರ್ಟ್ಸ್ ಫೋಕಸ್‌ ಹೊಂದಿದ ದೇಶದಲ್ಲೇ ಮೊಟ್ಟ ಮೊದಲ ಹಾಗೂ ಏಷ್ಯಾ ಖಂಡದಲ್ಲಿಯೇ ಎರಡನೇ ಸ್ಪೋರ್ಟ್ಸ್ ಗಾರ್ಡನ್‌ ಇದಾಗಲಿದೆ.

ಕಿಡಿಗೇಡಿಗಳು ಉದ್ಯಾನದಲ್ಲಿ ಅಳವಡಿಸಿದ್ದ ಆಟದ ಸಾಮಗ್ರಿಗಳನ್ನು ಹಾಳು ಮಾಡದಂತೆ ಹಾಗೂ ಇನ್ನಿತರೆ ಅನಗತ್ಯವಾದ ಚಟುವಟಿಕೆಗಳನ್ನು
ನಡೆಸದಂತೆ ಗಾರ್ಡನ್‌ ಸುತ್ತಲೂ 16 ಸಿಸಿ ಕ್ಯಾಮರಾ ಅಳವಡಿಸಲಾಗಿದೆ. ಬಗೆ ಬಗೆಯ ಸಸ್ಯಗಳುಳ್ಳ ಸುಂದರವಾದ ಉದ್ಯಾನ, ಕಾಲುದಾರಿ
ಮಾರ್ಗದ ಅಕ್ಕಪಕ್ಕ ಹೂದೋಟ ಮತ್ತು ಹಸಿರು ಹುಲ್ಲಿನ ಹೊದಿಕೆ ನಿರ್ಮಿಸಲಾಗಿದೆ.

ಕೆರೆಯ ಸುತ್ತಮುತ್ತಲಿನ ರಮಣೀಯ ಸ್ಥಳ ವೀಕ್ಷಿಸಲು ಟವರ್‌ ಹಾಗೂ ಸಂಜೆ ಮ್ಯೂಸಿಕ್‌ ಕಾರ್ಯಕ್ರಮ ಆಯೋಜಿಸಲು ಓಪನ್‌ ಎಂಪಿ ಥೇಟರ್‌, ಫುಡ್‌ ಸ್ಟಾಲ್ಸ್‌, ಯೋಗ ಮತ್ತು ವಿಶ್ರಾಂತಿ ತಂಗುದಾಣಗಳು, ಸೈಕ್ಲಿಂಗ್‌ ಟ್ರ್ಯಾಕ್ ಕೂಡ ನಿರ್ಮಿಸಲಾಗಿದೆ. ಕೆರೆಯ ಪ್ರವೇಶ ದ್ವಾರ ಬಳಿ ಈಗಾಗಲೇ ಹೈಟೆಕ್‌ ಬೈಸಿಕಲ್‌ ನಿಲ್ದಾಣ ಸಹ ಸ್ಥಾಪಿಸಲಾಗಿದೆ. ಕೆರೆಯಲ್ಲಿ ಬೋಟಿಂಗ್‌ ವ್ಯವಸ್ಥೆಗೆ ಯೋಜನೆ ರೂಪಿಸಲಾಗಿದೆ. ಕೆರೆಯು ಸುತ್ತಲೂ 150ಕ್ಕೂ ಅಧಿಕ ಆಕರ್ಷಕ ಅಲಂಕೃತ ವಿದ್ಯುತ್‌ ದೀಪದ ಕಂಬಗಳನ್ನು ಅಳವಡಿಸಲಾಗುತ್ತಿದ್ದು, ಇನ್ನು 10 ದಿನದೊಳಗೆ ಇದು ಪೂರ್ಣಗೊಳ್ಳಲಿದೆ

ಈಗಾಗಲೇ ಲ್ಯಾಂಡ್‌ ಸ್ಕೇಪ್‌ ಕಾಮಗಾರಿ ಮುಗಿದಿದ್ದು, ಪಾಥ್‌ ವೇ ಮತ್ತು ಪಾರ್ಕಿಂಗ್‌ ಸ್ಥಳದಲ್ಲಿ ಪೇವರ್ ಅಳವಡಿಸುವ ಹಾಗೂ ಬಾಸ್ಕೆಟ್‌
ಬಾಲ್‌ ಕೋರ್ಟ್‌ ನಿರ್ಮಿಸುವ ಕಾರ್ಯ ಬಾಕಿ ಉಳಿದಿದೆ. ಮಳೆಯಿಂದಾಗಿ ಈ ಕೆಲಸಗಳು ಸ್ವಲ್ಪ ವಿಳಂಬವಾಗಿದ್ದು, ಆಗಸ್ಟ್‌ ಅಂತ್ಯದೊಳಗೆ ಬಾಕಿ
ಉಳಿದಿರುವ ಎಲ್ಲ ಕೆಲಸಗಳನ್ನು ಪೂರ್ಣಗೊಳಿಸಲು ಸ್ಮಾರ್ಟ್‌ ಸಿಟಿ ಅಧಿಕಾರಿಗಳು ಮುಂದಾಗಿದ್ದಾರೆ. ತೋಳನಕೆರೆ ಪುನರ್‌ ಅಭಿವೃದ್ಧಿ ಕಾಮಗಾರಿಯು 2020ರ ಜೂನ್‌ನಲ್ಲಿಯೇ ಪೂರ್ಣಗೊಳ್ಳಬೇಕಿತ್ತು. ಆದರೆ ಕಾರಣಾಂತರಗಳಿಂದ ವಿಳಂಬವಾಗಿದೆ. ಆಗಸ್ಟ್‌ ಅಂತ್ಯದೊಳಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ.

ತೋಳನಕೆರೆ 32 ಎಕರೆ ಪ್ರದೇಶವನ್ನು ಸ್ಮಾರ್ಟ್‌ ಸಿಟಿ ಯೋಜನೆಯಡಿ ಅಂದಾಜು 20.26 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುತ್ತಿದೆ. ಲ್ಯಾಂಡ್‌ ಸ್ಕೇಪ್  ಕಾಮಗಾರಿ ಮುಗಿದಿದ್ದು, ಪಾಥ್‌ ವೇ ಮತ್ತು ಪಾರ್ಕಿಂಗ್‌ ಸ್ಥಳದಲ್ಲಿ ಪೇವರ್ ಅಳವಡಿಕೆ, ಬಾಸ್ಕೆಟ್‌ಬಾಲ್‌ ಕೋರ್ಟ್‌ ಕಾರ್ಯ ಬಾಕಿ ಉಳಿದಿದೆ. ಆಗಸ್ಟ್‌ ಅಂತ್ಯದೊಳಗೆ ಬಾಕಿ ಕೆಲಸ ಪೂರ್ಣಗೊಳಿಸಲಾಗುವುದು.
– ಚನ್ನಬಸವರಾಜ ಧರ್ಮಂತಿ, ಹು-ಧಾ ಸ್ಮಾರ್ಟ್‌ ಸಿಟಿ ಡಿಜಿಎಂ

-ಶಿವಶಂಕರ ಕಂಠಿ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.