![Lalu](https://www.udayavani.com/wp-content/uploads/2025/02/Lalu-2-415x282.jpg)
![Lalu](https://www.udayavani.com/wp-content/uploads/2025/02/Lalu-2-415x282.jpg)
Team Udayavani, Jun 10, 2023, 7:20 AM IST
ಕುಂದಾಪುರ: ಹಾಸ್ಟೆಲ್ನಿಂದ ಕಾಲೇಜಿಗೆ ತೆರಳುವ ವೇಳೆ ರಸ್ತೆಯಲ್ಲಿ ಹಿಂಬಾಲಿಸಿ, ಅಸಭ್ಯವಾಗಿ ವರ್ತಿಸಿ, ಕಿರುಕುಳ ನೀಡಿದ ಯುವಕನಿಗೆ ವಿದ್ಯಾರ್ಥಿನಿ ಚಪ್ಪಲಿ ಏಟು ನೀಡಿದ ಘಟನೆ ಶುಕ್ರವಾರ ಕೋಟೇಶ್ವರ ಸಮೀಪದ ವಕ್ವಾಡಿಯಲ್ಲಿ ನಡೆದಿದೆ.
ಬಾರಕೂರು ಮೂಲದ ಸದ್ಯ ಈ ಭಾಗದಲ್ಲಿ ಕೂಲಿ ಕೆಲಸ ಮಾಡಿಕೊಂಡು ಬಾಡಿಗೆ ಮನೆಯಲ್ಲಿ ವಾಸವಿರುವ ನಜೀರ್ (35) ಆರೋಪಿ.
ಆರೋಪಿ ನಜೀರ್ ಕಿರುಕುಳ ನೀಡಿ, ಅಸಭ್ಯವಾಗಿ ವರ್ತಿಸಿದ್ದು ಕೂಡಲೇ ಆ ವಿದ್ಯಾರ್ಥಿನಿ ಕೂಗಿಕೊಂಡಿದ್ದಾಳೆ. ಸ್ಥಳೀಯರೆಲ್ಲ ಸೇರಿ, ವಿಚಾರಿಸಿದಾಗ ನಡೆದ ಘಟನೆಯನ್ನು ಆಕೆ ವಿವರಿಸಿದ್ದಾಳೆ. ಈ ವೇಳೆ ನೊಂದ ವಿದ್ಯಾರ್ಥಿನಿ ಆರೋಪಿ ನಜೀರನಿಗೆ ಚಪ್ಪಲಿ ಏಟು ನೀಡಿದ್ದು, ಸ್ಥಳೀಯರು ಆರೋಪಿಯನ್ನು ಪೊಲೀಸರಿಗೊಪ್ಪಿಸಿದ್ದಾರೆ.
ಕುಂದಾಪುರ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು, ವಿದ್ಯಾರ್ಥಿನಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಿಕೊಂಡಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.