![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Feb 17, 2023, 6:58 PM IST
ಸೈದಾಪುರ: ಲಾರಿ ಮತ್ತು ಕಾರಿನ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಬೀದರ-ಗುತ್ತಿ ರಾಷ್ಟ್ರೀಯ ಹೆದ್ದಾರಿ 150 ರ ಸೈದಾಪುರ ಪಟ್ಟಣದ ಹೊರ ವಲಯದ ಕರಿಬೆಟ್ಟ ಕ್ರಾಸ್ ಹತ್ತಿರ ನಡೆದಿದೆ.
ನೆರೆಯ ಆಂಧ್ರಪ್ರದೇಶದ ಆಧೋನಿಯಿಂದ ಕಲಬುರಗಿ ಕಡೆ ಬರುತ್ತಿದ್ದ ಕಾರು, ಯಾದಗಿರಿ ಕಡೆಯಿಂದ ರಾಯಚುರು ಮಾರ್ಗವಾಗಿ ಹೊಗುತ್ತಿದ್ದ ಲಾರಿ ನಡುವೆ ಶುಕ್ರವಾರ ಬೆಳಗ್ಗೆ 7ಗಂಟೆಯ ಸುಮಾರಿಗೆ ಭೀಕರ ಅಪಘಾತ ನಡೆದಿದೆ.
ಇದರಲ್ಲಿ ಆಧೋನಿ ಮೂಲದ ಜ್ಞಾನೇಶ್ವರ ಸಿಂಗಾಡೆ(36) ಕಾರು ಚಾಲಕ ಸೈಫುಲ್ಲಾ ಲಾಲಮಟ್ಟಿ(27)ರವರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಲಾರಿ ಚಾಲಕ ಪರಾರಿಯಾಗಿದ್ದಾನೆ.
ಮೃತರು ಬಟ್ಟೆ ವ್ಯಾಪಾರ ಮಾಡಲು ಆಧೋನಿಯಿಂದ ಕಲಬುರಗಿಗೆ ಹೋಗುತ್ತಿದ್ದರು ಎಂದು ತಿಳಿದು ಬಂದಿದ್ದು, ಕಾರಿನಲ್ಲಿದ್ದ ಅನೇಕ ತರಹದ ಸೀರೆಗಳು ರಸ್ತೆಯ ಮೇಲೆ ಚಲ್ಲಾಪಿಲ್ಲಿಯಾಗಿ ಬಿದಿವಿ. ಲಾರಿ ಪಕ್ಕದ ಜಮೀನಿನಲ್ಲಿ ಉರಳಿದೆ.
ಲಾರಿ ಚಾಲಕನ ಅಜಾಗರೂಕತೆ ಚಾಲನೆ ಈ ಅವಘಡಕ್ಕೆ ಕಾರಣ ಎಂದು ಮೃತರ ಸಂಬಂಧಿಕರು ಸೈದಾಪುರ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ದೂರು ಧಾಖಲಿಸಿಕೊಂಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.