ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ

ಕಾರ್ಯಪಡೆ ಸಮಿತಿ ಸಭೆಯಲ್ಲಿ ಡಿಸಿ ಸೂಚನೆ

Team Udayavani, Jan 6, 2022, 5:50 AM IST

ಕಟ್ಟಡ ನಿರ್ಮಾಣಕ್ಕೆ ಸಾಕಷ್ಟು ಮರಳು ಲಭ್ಯ

ಉಡುಪಿ: ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳಿನ ದಾಸ್ತಾನು ಇದೆ. ಸಾರ್ವಜನಿಕರು ಸ್ಯಾಂಡ್‌ ಆ್ಯಪ್‌ ಮೂಲಕ ಬೇಡಿಕೆಗಳನ್ನು ಸಲ್ಲಿಸಿ ಮರಳು ಪಡೆಯಬಹುದು ಎಂದು ಜಿಲ್ಲಾಧಿ
ಕಾರಿ ಕೂರ್ಮಾರಾವ್‌ ಎಂ. ಹೇಳಿದರು.

ಜಿಲ್ಲಾಧಿಕಾರಿ ಕಚೇರಿಯ ಕೋರ್ಟ್‌ ಹಾಲ್‌ನಲ್ಲಿ ಬುಧವಾರ ಮರಳು ವಿತರಣೆ ಕುರಿತು ನಡೆದ ಜಿಲ್ಲಾ ಕಾರ್ಯಪಡೆ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯಲ್ಲಿ ಕಟ್ಟಡ ಕಾಮಗಾರಿ ಸೇರಿದಂತೆ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅಗತ್ಯವಿರುವ ಮರಳನ್ನು ಸಾರ್ವಜನಿಕರಿಗೆ ಪಾರದರ್ಶಕವಾಗಿ ವಿತರಿಸಲು ಜಿಲ್ಲಾ ಕಾರ್ಯಪಡೆ ಸಮಿತಿಯು ಸ್ಯಾಂಡ್‌ ಆ್ಯಪ್‌ಗ್ಳಲ್ಲಿನ ಬೇಡಿಕೆಗೆ ಅನುಗುಣವಾಗಿ ವಿತರಿಸಲು ಮುಂದಾಗಿದೆ. ಸಾರ್ವಜನಿಕರು ಇದರ ಸದುಪಯೋಗ ಪಡಿಸಿಕೊಳ್ಳಬೇಕು. ಜಿಲ್ಲೆಯಲ್ಲಿ ಅಕ್ರಮವಾಗಿ ಮರಳು ಮಾರಾಟವಾಗುತ್ತಿದೆ ಎಂಬ ದೂರುಗಳು ಕೇಳಿ ಬರುತ್ತಿವೆ. ಇವುಗಳ ನಿಯಂತ್ರಣಕ್ಕೆ ಅಗತ್ಯವಿರುವ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕು. ಮರಳು ಸಾಗಾಣಿಕೆ ವಾಹನ ಹಾಗೂ ದೋಣಿಗಳಲ್ಲಿ ಅಳವಡಿಸಿರುವ ಜಿಪಿಎಸ್‌ ಪರಿಶೀಲಿಸಿ, ಅದರ ಚಲನ ವಲನಗಳ ಮೇಲೆ ನಿಗಾ ವಹಿಸಬೇಕು. ನಿಯಮ ಉಲ್ಲಂಘಿಸಿದ್ದಲ್ಲಿ ಅಂತ ಹವರ ಮೇಲೆ ನಿರ್ದಾಕ್ಷಿಣ್ಯವಾಗಿ ದಂಡ ವಸೂಲಿ ಮಾಡಬೇಕು. ಮರಳು ತೆಗೆಯುವ ಧಕ್ಕೆ ಹಾಗೂ ದಾಸ್ತಾನು ಪ್ರದೇಶಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಸೂಚನೆ ನೀಡಿದರು.

ಕುಂದಾಪುರ ವ್ಯಾಪ್ತಿಯಲ್ಲಿ ಜಿಪಿಎಸ್‌ ಉಲ್ಲಂಘನೆ ಮಾಡಿದ ಮರಳು ಪರವಾನಗಿದಾರರ ವಿರುದ್ಧ 16 ಪ್ರಕರಣ ದಾಖಲಿಸಿ 8 ಲಕ್ಷ ರೂ. ದಂಡ ವಿಧಿಸಲಾಗಿದೆ. ಉಡುಪಿ ಮತ್ತು ಬ್ರಹ್ಮಾವರದಲ್ಲಿ 3 ಪ್ರಕರಣ ದಾಖಲಿಸಿ 50,000 ಸಾವಿರ ರೂ. ದಂಡ ವಿಧಿಸಿ, ಅನಧಿಕೃತವಾಗಿ ಮರಳು ಗಣಿಗಾರಿಕೆ ನಡೆಸಿ ಮರಳು ದಾಸ್ತಾನು ಮಾಡಿದವರ ವಿರುದ್ಧ 34 ಪ್ರಕರಣ ದಾಖಲಿಸಿ 13 ಲಕ್ಷ ರೂ.ಗಳಿಗೂ ಹೆಚ್ಚು ದಂಡ ವಿಧಿಸಲಾಗಿದೆ. ವಾಹನ ಜಿಪಿಎಸ್‌ ಉಲ್ಲಂ ಸಿದ 76 ಪ್ರಕರಣ ದಾಖಲಿಸಿ 5 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂದರು.

ನ. 24ರಿಂದ ಡಿ. 31ರ ವರೆಗೆ ಕಂಟ್ರೋಲ್‌ ರೂಂನಲ್ಲಿ 125 ದೂರುಗಳು ಸ್ವೀಕೃತವಾಗಿದೆ. ಅವುಗಳಲ್ಲಿ 123 ವಿಲೇವಾರಿ ಮಾಡಲಾಗಿದೆ. ಲಿಖಿತ ಅಥವಾ ದೂರವಾಣಿ ಮೂಲಕ ಬರುವ ದೂರುಗಳನ್ನು ನಿರ್ಲಕ್ಷಿಸದೇ ಅವುಗಳ ಬಗ್ಗೆ
ತನಿಖೆ ಕೈಗೊಂಡು ತಪ್ಪಿತಸ್ಥರು ಎಂದು ಕಂಡುಬಂದಲ್ಲಿ ಕಠಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ:ಜಾಬ್ರಾ ಎಲೈಟ್‌ 4 ಆ್ಯಕ್ಟಿವ್‌ ಬಿಡುಗಡೆ; 7 ಗಂಟೆ ಬ್ಯಾಟರಿ ಲೈಫ್ ಇರುವ ಇಯರ್‌ಬಡ್‌

ಕಲ್ಲು ಗಣಿಗಾರಿಕೆ ಹಾಗೂ ಕಲ್ಲು ಪುಡಿ ಮಾಡುವ ಘಟಕಗಳಿಗೆ ಪರವಾನಗಿ ನೀಡುವ ಸಂದರ್ಭ ಸರಕಾರ ಸೂಚಿಸಿರುವ ನಿಯವåಗಳು ಸರಿಯಾಗಿ ಪಾಲನೆಯಾಗಿದೆಯೇ ಎಂಬ ಬಗ್ಗೆ ಕೂಲಂಕಷವಾಗಿ ಪರಿಶೀಲಿಸುವುದರೊಂದಿಗೆ ಕಾನೂನಿನ ಅಡಿಯಲ್ಲಿ ಅವರಿಗೆ ಲೈಸೆನ್ಸ್‌ ನೀಡಬೇಕು. ಸರಕಾರಿ ಜಾಗದಲ್ಲಿ ಅಕ್ರಮ ಕಲ್ಲುಗಣಿಗಾರಿಕೆ ಮಾಡುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಿ ದಂಡ ವಿಧಿಸಲಾಗಿದೆ. ಆದರೂ ಗಣಿಗಾರಿಕೆ ಯನ್ನು ಪುನಃ ಮಾಡುತ್ತಿರುವುದು ಕಂಡುಬರುತ್ತಿದೆ. ಅಂತಹವರ ವಿರುದ್ಧ ಕಂದಾಯ ಇಲಾಖೆ ಅಧಿಕಾರಿಗಳು ಭೂ ಕಬಳಿಕೆ ಅಧಿನಿಯಮದಡಿ ಪ್ರಕರಣ ದಾಖಲಿಸಬೇಕು ಎಂಬ ಸೂಚನೆ ನೀಡಿದರು.

ಸರಕಾರಿ ಜಾಗದಲ್ಲಿ ಸಿಗುವ ಎಲ್ಲ ರೀತಿಯ ಖನಿಜಗಳ ಬ್ಲಾಕ್‌ ಗುರುತಿಸುವುದರೊಂದಿಗೆ ಗಣಿಗಾರಿಕೆ ಕೈಗೊಳ್ಳಲು ಬ್ಲಾಕ್‌ಗಳ ಹರಾಜು ಪ್ರಕ್ರಿಯೆ ಕೈಗೊಳ್ಳಲು ಕ್ರಮ ವಹಿಸಬೇಕು ಎಂದರು. ಕುಂದಾಪುರ ಡಿಎಫ್ಒ ಆಶೀಶ್‌ ರೆಡ್ಡಿ, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು, ಸಿಆರ್‌ಝಡ್‌ನ‌ ಪ್ರಾದೇಶಿಕ ನಿರ್ದೇಶಕ ಶ್ರೀಪತಿ, ಹಿರಿಯ ಭೂ ವಿಜ್ಞಾನಿ ಸಂದೀಪ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.