Kinnigoli: ಮರಳು ಸಾಗಾಟದ ಟಿಪ್ಪರ್ ಪಲ್ಟಿ; ಸಿಕ್ಕಿ ಬಿದ್ದ ಆರೋಪಿಗಳು
Team Udayavani, Sep 25, 2024, 11:18 PM IST
ಕಿನ್ನಿಗೋಳಿ: ಮೂಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಏಳಿಂಜೆ ಗ್ರಾಮದ ಪಟ್ಟೆ ಕ್ರಾಸ್ ಬಳಿ ಶಾಂಭವಿ ನದಿಗೆ ಹೋಗುವ ರಸ್ತೆಯಲ್ಲಿ ಮರಳು ತುಂಬಿದ ಲಾರಿಯೊಂದು ಮುಗುಚಿ ಬಿದ್ದಿರುವುದಾಗಿ ಮಾಹಿತಿ ತಿಳಿದು ಮೂಲ್ಕಿ ಪೊಲೀಸರು ಪಟ್ಟೆ ಕ್ರಾಸ್ ಎಂಬಲ್ಲಿಗೆ ತೆರಳಿ ಪರಿಶೀಲಿಸಿದಾಗ ಅಕ್ರಮ ಮರಳು ಸಾಗಾಟ ಬಯಲಿಗೆ ಬಂದಿದ್ದು, ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿ ಮರಳು ಸಹಿತ ಕ್ರೇನ್ ಹಾಗೂ ಜೆಸಿಬಿಯನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕಿನ್ನಿಗೋಳಿ ಸಮೀಪದ ಎಳಿಂಜೆ ಪಟ್ಟೆ ಕ್ರಾಸ್ ನಂದಿನಿ ನದಿ ಬದಿಗೆ ಹಾದು ಹೋಗುವ ಕಚ್ಚಾ ಮಣ್ಣು ರಸ್ತೆಯ ಇಳಿಜಾರು ಪ್ರದೇಶದಲ್ಲಿ ಸುಮಾರು 1 ಟಿಪ್ಪರ್ ಲಾರಿ ಲೋಡಿನಷ್ಟು ಸಾಮಾನ್ಯ ಮರಳು ಬಿದ್ದುಕೊಂಡಿತ್ತು. ಸ್ಥಳದಲ್ಲಿದ್ದ ಕ್ರೇನ್ನ ಆಪರೇಟರ್ ಜಬ್ಬರ್ ಬಳಿ ವಿಚಾರಿಸಿದಾಗ ಮರಳು ತುಂಬಿದ ಟಿಪ್ಪರ್ ರಸ್ತೆ ಬದಿಗೆ ಬಿದ್ದಿದೆ. ಅದನ್ನು ಮೇಲಕ್ಕೆತ್ತಲು ಲಾರಿಯ ಮಾಲಕ ಸುಜಿತ್ ತಿಳಿಸಿದಂತೆ ಬಂದಿದ್ದಾಗಿ ತಿಳಿಸಿದ್ದ.
ಆರೋಪಿ ಸುಜಿತ್ ಮತ್ತು ಅಜಿತ್ ಅವರನ್ನು ವಿಚಾರಿಸಿದಾಗ ತಾವು ಪಕ್ಕದ ನದಿಯಿಂದ ಸಾಮಾನ್ಯ ಮರಳನ್ನು ತೆಗೆದು ಅದನ್ನು ಟಿಪ್ಪರ್ನಲ್ಲಿ ಸಾಗಾಟ ಮಾಡುತ್ತಿದ್ದಾಗ ರಾತ್ರಿ ಹೊತ್ತಿನಲ್ಲಿ ಮಳೆಯ ಕಾರಣ ಟಯರ್ ಕೆಸರಿನಲ್ಲಿ ಹೂತು ಟಿಪ್ಪರ್ ಪಲ್ಟಿಯಾಗಿದ್ದಾಗಿ ಒಪ್ಪಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್ ಪಟ್ಟು, ಪ್ರತಿಭಟನೆ
Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ
MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್
MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್
Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.