ಸಾವರಿನ್ ಕಬ್ಬು ಪೂರೈಸಿದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಅವಕಾಶ


Team Udayavani, Feb 17, 2022, 5:57 PM IST

ಸಾವರಿನ್ ಕಬ್ಬು ಪೂರೈಸಿದ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಅವಕಾಶ

ರಬಕವಿ-ಬನಹಟ್ಟಿ: ತೇರದಾಳದ ಸಕ್ಕರೆ ಕಾರ್ಖಾನೆಗೆ 2018-19 ರಲ್ಲಿ ಕಬ್ಬು ಪೂರೈಕೆ ಮಾಡಿದ 1628 ಜನ ರೈತರ ಒಟ್ಟು ರೂ. 19,54,66,660 ಪಟ್ಟಿಯನ್ನು ಕಾರ್ಖಾನೆಯ ಆಡಳಿತ ಮಂಡಳಿಯವರು ತಹಶೀಲ್ದಾರ್ ಕಾರ್ಯಾಲಯಕ್ಕೆ ಸಲ್ಲಿಸಿರುತ್ತಾರೆ.ಈ ಪಟ್ಟಿಯನ್ನು ರಬಕವಿ ಬನಹಟ್ಟಿ ತಹಶೀಲ್ದಾರ್, ತೇರದಾಳದ ವಿಶೇಷ ತಹಶೀಲ್ದಾರ್ ಕಾರ್ಯಾಲಯ ಮತ್ತು ಸಾವರಿನ್ ಸಕ್ಕರೆ ಕಾರ್ಖಾನೆಯ ಆವರಣದಲ್ಲಿ ಲಗತ್ತಿಸಲಾಗಿದೆ. ಆದ್ದರಿಂದ ಸಂಬಂಧಪಟ್ಟ ರೈತರು ಈ ಕುರಿತು ತಮ್ಮ ಆಕ್ಷೇಪಣೆ ಸಲ್ಲಿಸಲು ಏಳು ದಿನಗಳ ಕಾಲಾವಕಾಶ ನೀಡಲಾಗಿದೆ ಎಂದು ರಬಕವಿ ಬನಹಟ್ಟಿ ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.

ಅವರು ಗುರುವಾರ ಸ್ಥಳೀಯ ರಬಕವಿ-ಬನಹಟ್ಟಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ತೇರದಾಳದ ಸಕ್ಕರೆ ಕಾರ್ಖಾನೆಗೆ ಕಬ್ಬು ಪೂರೈಕೆ ಮಾಡಿದ ರೈತರ ಸಭೆಯಲ್ಲಿ ಮಾತನಾಡಿದರು.
ಕಬ್ಬು ಪೂರೈಕೆ ಮಾಡಿದ ರೈತರು ಲಿಖಿತ ರೂಪದಲ್ಲಿ ಮತ್ತು ಅಗತ್ಯವಾದ ದಾಖಲೆಗಳ ಜೊತೆಗೆ ಇದೇ ೧೮ ರಿಂದ ೨೪ ಸಂಜೆ ೫.೩೦ ರ ಒಳಗಾಗಿ ಆಕ್ಷೇಪಣೆಯನ್ನು ಸಲ್ಲಿಸಬಹುದಾಗಿದೆ. ನಂತರ ಬಂದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.

ಇನ್ನೂ ರೈತರ ಕಬ್ಬು ಕಟಾವು ಮತ್ತು ಸಾಗಾಣಿಕೆಗೆ ಸಂಬಂಧಪಟ್ಟಂತೆ 308 ಜನ ರೈತರ ರೂ. 51,33,216 ಬಿಡುಗಡೆ ಮಾಡಿದೆ. ಕಬ್ಬು ಪೂರೈಕೆ ಮಾಡಿದ ರೈತರಿಗೆ ಎಫ್ ಆರ್ ಪಿ ಬೆಲೆಯ ಪ್ರಕಾರ ರೂ. 2613 ನೀಡಲಾಗಿದ್ದು, ಇದರಲ್ಲಿ ಕಬ್ಬು ಕಟಾವು ಮತ್ತು ಸಾಗಾಣಿಕೆಯ ಹಣ ರೂ. 613 ಕಡಿತಗೊಳಿಸಿ ಉಳಿದ ಹಣವನ್ನು ನೀಡಲಾಗುವುದು.

ರೈತರ ಹಣವನ್ನು ಕರ್ನಾಟಕ ಅಪೆಕ್ಸ್ ಬ್ಯಾಂಕ್ ನವರು ಜಮಖಂಡಿಯ ಉಪವಿಭಾಗಾಧಿಕಾರಿಗಳ ಖಾತೆಗೆ ದಿ. 27. 1. 2022 ರಂದು ಹಣವನ್ನು ಠೇವಣಿ ಮಾಡಿರಿರುತ್ತಾರೆ ಎಂದು ತಹಶೀಲ್ದಾರ್ ಸಂಜಯ ಇಂಗಳೆ ತಿಳಿಸಿದರು.

ಇದನ್ನೂ ಓದಿ : ತೇರದಾಳ ಪುರಸಭೆ: 1.63 ಲಕ್ಷ ರೂ. ಉಳಿತಾಯ ಬಜೆಟ್‌ ಮಂಡನೆ

ಈ ಸಂದರ್ಭದಲ್ಲಿ ರೈತ ಮುಖಂಡರು ಸರ್ಕಾರ ನಿಗದಿ ಮಾಡಿದ ಬೆಲೆಗೆ ನಮ್ಮ ಸಮ್ಮತಿ ಇರುವುದಿಲ್ಲ. ನಾವು ಇಷ್ಟರಲ್ಲಿಯೇ ಕಬ್ಬು ಪೂರೈಕೆ ಮಾಡಿದ ರೈತರ ಸಭೆಯನ್ನು ಕರೆಯುತ್ತೇವೆ. ಅಲ್ಲಿ ಬಿಲ್ ಕುರಿತು ಚರ್ಚೆ ಮಾಡಿ ಮುಂದಿನ ನಿರ್ಧಾರವನ್ನು ಕೈಗೊಳ್ಳುತ್ತೇವೆ ಎಂದು ಪತ್ರಿಕೆಗೆ ತಿಳಿಸಿದರು.

ಈಗಿರುವ ಕಬ್ಬಿನ್ ಬಿಲ್ಲನ್ನು ಪಡೆದುಕೊಂಡು ಮುಂದಿನ ಹಣಕ್ಕಾಗಿ ಮತ್ತು ಹಣದ ಮೇಲಿನ ಬಡ್ಡಿಗಾಗಿ ಮತ್ತೆ ನಾವು ಹೋರಾಟ ಮಾಡುತ್ತೇವೆ ಎಂದು ರೈತ ಸಂಘದ ಮುಖಂಡ ಬಂಡು ಪಕಾಲಿ ಪತ್ರಿಕೆಗೆ ತಿಳಿಸಿದರು.

ಮೂರು ವರ್ಷ ಹೋರಾಟದ ಫಲವಾಗಿ ಕಬ್ಬು ಪೂರೈಕೆ ಮಾಡಿದ ರೈತರಿಗೆ ನ್ಯಾಯ ಒದಗಿದಂತಾಗಿದೆ. ಸಕ್ಕರೆ ಕಾರ್ಖಾನೆಯು ಇನ್ನೂ ಹೆಚ್ಚಿನ ಬಿಲ್ ನೀಡಬೇಕಾಗಿದೆ ಎಂದು ರೈತ ಸಂಘದ ಮುಖಂಡ ಹೊನ್ನಪ್ಪ ಬಿರಡಿ ತಿಳಿಸಿದರು.

ಸಭೆಯಲ್ಲಿ ರೈತ ಮುಖಂಡರಾದ ಶ್ರೀಕಾಂತ ಘೂಳನ್ನವರ, ಶಿವಪ್ಪ ಹೋಟಕರ್, ಧರಿಗೌಡರ, ಭುಜಬಲಿ ಕೆಂಗಾಲಿ, ಯಲ್ಲಪ್ಪ ಮೂಸಿ, ಸರೇಶ ತೇಲಿ, ಮಹಾದೇವ ಬುಗಡಿ, ರಾಮಪ್ಪ ಹೊಸೂರ, ಭೀಮಶಿ ಕರಿಗೌಡರ, ಪರಪ್ಪಾ ಕಮಲದಿನ್ನಿ, ಬಾಹುಬಲಿ ನಂದಗಾವಿ ಇದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

“ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಕೆಎಂಎಫ್ ಅಧ್ಯಕ್ಷ

KMF; “ಹಾಲಿನ ದರ ಹೆಚ್ಚಳ ಬಗ್ಗೆ ಸಿಎಂ ಸಿದ್ದರಾಮಯ್ಯ ನಿರ್ಧಾರ’: ಭೀಮಾ ನಾಯ್ಕ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

Karnataka ಸುವರ್ಣ ಸಂಭ್ರಮದಲ್ಲಿ ಕನ್ನಡ ಜನೋತ್ಸವ

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court: ಬಾಂಬ್‌ ಸ್ಫೋಟ ಹೇಳಿಕೆ; ಶೋಭಾ ಕರಂದ್ಲಾಜೆ ಮೇಲಿನ ಕೇಸ್‌ ರದ್ದು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

High Court; “ಅರ್ಧ ಪಾಕಿಸ್ಥಾನ’: ಯತ್ನಾಳ್‌ ಹೇಳಿಕೆಗೆ ಹೈಕೋರ್ಟ್‌ ಸಿಟ್ಟು

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

Kasturi Rangan ವರದಿ ಹಿನ್ನೆಲೆ: ನಯನಾ ಮೋಟಮ್ಮ ರಾಜೀನಾಮೆ ಬೆದರಿಕೆ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.