![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 25, 2023, 10:40 PM IST
ಬೆಂಗಳೂರು: ಸಕಾಲದಲ್ಲಿ ವೇತನ ಪಾವತಿ ಸಹಿತ ವಿವಿಧ ಬೇಡಿಕೆಗಳು ಈಡೇರದಿದ್ದರೆ ಸೆ.28 ರಿಂದ ಸರಕಾರಿ ಆಸ್ಪತ್ರೆಗಳಲ್ಲಿ ಕಾರ್ಯಾ ಚರಿಸುತ್ತಿರುವ ಡಯಾ
ಲಿಸಿಸ್ ಕೇಂದ್ರಗಳ ಸೇವೆ ಸ್ಥಗಿತವಾಗ ಲಿದೆ ಎಂದು ರಾಜ್ಯ ಡಯಾಲಿಸಿಸ್ ಕೇಂದ್ರದ ನೌಕರರ ಸಂಘ ಆರೋಗ್ಯ ಇಲಾಖೆಗೆ ಎಚ್ಚರಿಕೆ ನೀಡಿದೆ.
ಮೂತ್ರಪಿಂಡ ಸಮಸ್ಯೆಯಿಂದ ಬಳಲುವ ರೋಗಿಗೆ ವಾರಕ್ಕೆ 3 ಬಾರಿ ಡಯಾಲಿಸಿಸ್ ಮಾಡುವುದು ಅನಿವಾರ್ಯ. ಒಂದು ವೇಳೆ ನಿರ್ಲಕ್ಷ್ಯ ವಹಿಸಿದರೆ ಪ್ರಾಣಕ್ಕೆ ಅಪಾಯವಾಗಲಿದೆ. ಸರಕಾರಿ ಆಸ್ಪತ್ರೆಯಲ್ಲಿ ಉಚಿತ ಡಯಾಲಿಸಿಸ್ ಸೇವೆ ಸಿಗುತ್ತಿದ್ದಾಗ ವಾರಕ್ಕೆ 3 ಬಾರಿ ನಯಾ ಪೈಸೆ ಖರ್ಚಿಲ್ಲದೆ ರೋಗಿಗಳು ಡಯಾಲಿಸಿಸ್ಗೆ ಒಳಗಾಗುತ್ತಿದ್ದರು. ಇದೇ ಸೇವೆಗೆ ಖಾಸಗಿಯಲ್ಲಿ 1,500 ರೂ. ವರೆಗೆ ಪಾವತಿಸಬೇಕು. ಪ್ರಸ್ತುತ ರಾಜ್ಯದಲ್ಲಿ ಕೇಂದ್ರಗಳು ಸ್ಥಗಿತವಾದರೆ ದಿನವೊಂದಕ್ಕೆ 3,700 ರೋಗಿಗಳು ಡಯಾಲಿಸಿಸ್ ಸೇವೆಗೆ ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾಜ್ಯದ ಸರಕಾರಿ ಆಸ್ಪತ್ರೆಗಳಲ್ಲಿ 167 ಡಯಾಲಿಸಿಸ್ ಕೇಂದ್ರಗಳಿವೆ.
ಸಮಸ್ಯೆ ಏನು?
ರಾಜ್ಯದ ವಿವಿಧ ಡಯಾಲಿಸಿಸ್ ಕೇಂದ್ರಗಳಲ್ಲಿ ಸ್ಪಾಫ್ ನರ್ಸ್, ಲ್ಯಾಬ್ ಟೆಕ್ನಿಶನ್, ಡಿ ಗ್ರೂಪ್ ಸಹಿತ ಒಟ್ಟು 1,100 ಸಿಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಕೋಲ್ಕತಾ ಮೂಲದ ಏಜೆನ್ಸಿಯು ಗುತ್ತಿಗೆ ವಹಿಸಿಕೊಂಡ ಬಳಿಕ ಇಎಸ್ಐ-ಪಿಎಫ್ ವ್ಯವಸ್ಥೆ ಸ್ಥಗಿತಗೊಳಿಸಿದೆ. ಈ ಬಗ್ಗೆ ಸರಕಾರಕ್ಕೆ ದೂರು ನೀಡಿರುವುದರಿಂದ ಮಹಿಳಾ ಸಿಬಂದಿ ಮೇಲೆ ಪೊಲೀಸ್ ಠಾಣೆಯಲ್ಲಿ ಸುಳ್ಳು ದೂರು ದಾಖಲಿಸಲಾಗುತ್ತಿದೆ ಎಂದು ಡಯಾಲಿಸಿಸ್ ಕೇಂದ್ರಗಳ ಸಿಬಂದಿ “ಉದಯವಾಣಿ’ಗೆ ತಿಳಿಸಿದ್ದಾರೆ.
ಕೋಲ್ಕತಾದ ಏಜೆನ್ಸಿಯು 2018
ರಿಂದ 43 ಡಯಾಲಿಸಿಸ್ ಕೇಂದ್ರ ಗಳನ್ನು ಪಡೆದುಕೊಂಡಿದೆ. ಇವರಿಗೆ ಪಿಎಫ್, ಇಎಸ್ಐ ಪಾವತಿಯಾಗು ತ್ತಿದೆ. ಆದರೆ ಪರ್ಯಾಯವಾಗಿ ಗುತ್ತಿಗೆ ವಹಿಸಿಕೊಂಡ 124 ಕೇಂದ್ರಗಳ ಸಿಬಂದಿಗೆ ಈ ಸೌಲಭ್ಯ ಲಭ್ಯವಾಗುತ್ತಿಲ್ಲ. ನಮ್ಮ ಬೇಡಿಕೆಗೆ ಸ್ಪಂದಿಸಲಿದ್ದರೆ ಸೆ. 28ರಿಂದ ಡಯಾಲಿಸಿಸ್ ಸೇವೆಯನ್ನು ಸ್ಥಗಿತಗೊಳಿಸಲಾಗುವುದು ಎಂದು ಡಯಾಲಿಸಿಸ್ ಸಂಘದ ಚೇತನ್ ತಿಳಿಸಿದರು.
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
Kasaragod: ಹಲ್ಲೆ ಪ್ರಕರಣ; ಕೇಸು ದಾಖಲು
You seem to have an Ad Blocker on.
To continue reading, please turn it off or whitelist Udayavani.