ಕರಾವಳಿಯಲ್ಲಿ  ಮಳೆಗಾಲದಲ್ಲೂ ಸೆಕೆ!


Team Udayavani, Aug 6, 2023, 12:56 AM IST

temparature

ಮಂಗಳೂರು: ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮಳೆಯ ತೀವ್ರತೆ ಕಡಿಮೆಯಾಗಿದ್ದು, ಮಳೆಗಾಲದಲ್ಲೂ ಸೆಕೆಯ ಅನುಭವ ಹೆಚ್ಚಾಗುತ್ತಿದೆ. ಹವಾಮಾನದಲ್ಲಾದ ಬದಲಾವಣೆಯ ಪರಿಣಾಮ ಕಳೆದ ಒಂದು ವಾರದಿಂದ ದಿನವಿಡೀ ಸೆಕೆಯ ವಾತಾವರಣ ಇದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ.

ಸದ್ಯ ಮುಂಗಾರು ದುರ್ಬಲಗೊಂಡಿದೆ. ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳ ಪ್ರಕಾರ ಸದ್ಯಕ್ಕೆ ಭಾರೀ ಮಳೆಯಾ ಗುವ ಮುನ್ಸೂಚನೆಯಿಲ್ಲ. ಇದೇ ಕಾರಣಕ್ಕೆ ಗರಿಷ್ಠ ಉಷ್ಣಾಂಶಲ್ಲಿ ವಾಡಿಕೆಗಿಂತ 2ರಿಂದ 3 ಡಿ.ಸೆ. ಏರಿಕೆಯಾಗಬಹುದು. ಕನಿಷ್ಠ ಉಷ್ಣಾಂಶದಲ್ಲಿಯೂ ಏರಿಳಿತ ಉಂಟಾಗುವ ಸಾಧ್ಯತೆ ಇದೆ. ಮಂಗಳೂರಿನಲ್ಲಿ ಶನಿವಾರ ಗರಿಷ್ಠ ಉಷ್ಣಾಂಶ 29.8 ಡಿ.ಸೆ. ಮತ್ತು ಕನಿಷ್ಠ 23.2 ಡಿ.ಸೆ. ಇತ್ತು. ಗರಿಷ್ಠ ಉಷ್ಣಾಂಶದಲ್ಲಿ ವಾಡಿಕೆಗಿಂತ 1 ಡಿ.ಸೆ. ಹೆಚ್ಚು ಇತ್ತು.

ಈ ವರ್ಷ ಕಡಿಮೆ ಮಳೆ
ಕರಾವಳಿ ಭಾಗದಲ್ಲಿ ಕಳೆದ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿತ್ತು. 2022ರ ಆ. 8ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 10 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 6ರಷ್ಟು ಸೇರಿ ಕರಾವಳಿ ಭಾಗದಲ್ಲಿ ಶೇ. 3ರಷ್ಟು ಮಳೆ ಪ್ರಮಾಣ ಹೆಚ್ಚಾಗಿತ್ತು. ಆದರೆ ಈ ವರ್ಷ ಮುಂಗಾರು ಆಗಮನವೇ ತಡವಾಗಿದೆ. ಕೆಲವು ದಿನ ಭಾರೀ ಮಳೆಯಾಗಿತ್ತೇ ವಿನಾ ಸದ್ಯ ಮುಂಗಾರು ದುರ್ಬಲಗೊಂಡಿದೆ. 2023ರ ಆ. 8ರ ವರೆಗೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶೇ. 19 ಮತ್ತು ಉಡುಪಿ ಜಿಲ್ಲೆಯಲ್ಲಿ ಶೇ. 13 ಸೇರಿದಂತೆ ಕರಾವಳಿ ಭಾಗದಲ್ಲಿ ಶೇ. 9ರಷ್ಟು ಮಳೆ ಕೊರತೆ ಇದೆ.

ಎಲ್‌ ನಿನೋ ಪ್ರಭಾವ
ರಾಜ್ಯದಲ್ಲಿ ಈ ಬಾರಿ ವಾಡಿಕೆಯಂತೆ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಈ ಹಿಂದೆ ಅಂದಾಜಿಸಿದ್ದರು. ಆದರೆ ಸದ್ಯದ ಮುನ್ಸೂಚನೆಯಂತೆ ಎಲ್‌ ನಿನೋ ಪ್ರಭಾವದಿಂದ ಹಿಂದೂ ಮಹಾಸಾಗರದಲ್ಲಿ ಮೋಡ ಗಳ ಸೃಷ್ಟಿ ಕಡಿಮೆಯಾಗಲಿದೆ. ಮೋಡಗಳ ಸೃಷ್ಟಿಯೇ ಕಡಿಮೆಯಾದರೆ ಮಳೆ ಸುರಿ ಯುವ ಪ್ರಮಾಣವೂ ಕಡಿಮೆಯಾಗುವ ಸಾಧ್ಯತೆಯಿದೆ. ಇದರ ಪರಿಣಾಮ ರಾಜ್ಯದಲ್ಲಿ ನಿರೀಕ್ಷೆಯಂತೆ ವಾಡಿಕೆ ಮುಂಗಾರು ಮಳೆ ಯಾಗುವ ಸಾಧ್ಯತೆ ಕಡಿಮೆ ಎಂದು ಸದ್ಯಕ್ಕೆ ಅಂದಾಜಿಸಬಹುದು.

ಕರಾವಳಿ ಭಾಗದಲ್ಲಿ ಕೆಲವು ದಿನಗಳಿಂದ ಮುಂಗಾರು ದುರ್ಬಲಗೊಂಡಿದೆ. ಮುನ್ಸೂಚನೆ ಪ್ರಕಾರ ಸದ್ಯಕ್ಕೆ ಭಾರೀ ಮಳೆಯ ಸಾಧ್ಯತೆ ಇಲ್ಲ. ಇದೇ ಕಾರಣಕ್ಕೆ ಉಷ್ಣಾಂಶದಲ್ಲಿಯೂ ಏರಿಳಿತವಾಗುತ್ತಿದೆ. ಮುಂದಿನ ಕೆಲವು ದಿನಗಳ ಕಾಲ ಸೆಕೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದ್ದು ಗರಿಷ್ಠ ಉಷ್ಣಾಂಶ 2ರಿಂದ 3 ಡಿ.ಸೆ. ಏರಿಕೆಯಾಗುವ ನಿರೀಕ್ಷೆ ಇದೆ.
– ಪ್ರಸಾದ್‌, ಭಾರತೀಯ ಹವಾಮಾನ ಇಲಾಖೆ ಅಧಿಕಾರಿ

ಟಾಪ್ ನ್ಯೂಸ್

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

1-kutti

Mangaluru CCB: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊ*ಲೆ ಆರೋಪಿ ಬಂಧನ

court

Koppal; ಮರುಕುಂಬಿ ಪ್ರಕರಣ: 98 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್!

1-bharat

BJP; ಶಿಗ್ಗಾವಿಯಲ್ಲಿ ನಾಮಪತ್ರ ಸಲ್ಲಿಸಿದ ಭರತ್ ಬೊಮ್ಮಾಯಿ

1-congress

By Election; ಕೈ ಶಕ್ತಿ ಪ್ರದರ್ಶನ: ನಾಮಪತ್ರ ಸಲ್ಲಿಸಿದ ಯೋಗೇಶ್ವರ್, ಅನ್ನಪೂರ್ಣ

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

somashekar st

Karnataka BJP ; 8 ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ..!; ಎಸ್.ಟಿ.ಸೋಮಶೇಖರ್ ಬಾಂಬ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

u

Udupi: ಪ್ರಾಚ್ಯ ವಿದ್ಯಾ ಸಮ್ಮೇಳನ: ಚೀನಾದಲ್ಲೂ ಭಾರತದ ಜ್ಞಾನದ ಕುರಿತು ಮಾಹಿತಿ ಇದೆ:ಭಾಟೇ

12

Volakadu: ಡ್ರೈನೇಜ್‌ ಸಮಸ್ಯೆಗೆ ಸಿಗದ ಪರಿಹಾರ

10(1)

Kaup: ಸುಂದರ ಕಾಪು ನಗರಕ್ಕೆ ಕೊಳಚೆ ಕಪ್ಪು ಚುಕ್ಕೆ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

army

J&K ; ಮತ್ತೆ ಉಗ್ರರ ಅಟ್ಟಹಾಸ: ದಾಳಿಯಲ್ಲಿ ನಾಗರಿಕ ಸಾ*ವು, ಹಲವು ಯೋಧರಿಗೆ ಗಾಯ

13

Siddapura: ಅಂಪಾರು ಮನೆ ಕಳವು; 24 ತಾಸಿನಲ್ಲಿ ಆರೋಪಿ ಸೆರೆ

15

Mangaluru: ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ; ಪ್ರಗತಿಯತ್ತ ದಾಪುಗಾಲು

1-wewqewqe

Bidar; ಸಾಲ ಬಾಧೆಯಿಂದ ರೈತ ಆತ್ಮಹ*ತ್ಯೆ

bike

Doddangudde: ದ್ವಿಚಕ್ರ ವಾಹನ ಕಳವು; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.