![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Aug 24, 2023, 8:58 PM IST
ಬೆಂಗಳೂರು: ಮೈಸೂರಿನಲ್ಲಿ ಅತ್ಯಾಧುನಿಕ ಸೆಮಿ ಕಂಡಕ್ಟರ್ ತಯಾರಿ ಘಟಕ ಸ್ಥಾಪನೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮುಖದಲ್ಲಿ ಕೇನ್ಸ್ ಟೆಕ್ನಾಲಜಿ ಸಂಸ್ಥೆಯು ರಾಜ್ಯದ ಮಾಹಿತಿ ತಂತ್ರಜ್ಞಾನ ಇಲಾಖೆಯೊಂದಿಗೆ ಒಡಂಬಡಿಕೆಗೆ ಸಹಿ ಹಾಕಿತು.
ಈ ಒಡಂಬಡಿಕೆಯಿಂದ ಮೈಸೂರಿನಲ್ಲಿ ಸೆಮಿ ಕಂಡಕ್ಟರ್ ತಯಾರಿ ಘಟಕ ಸ್ಥಾಪನೆಗಾಗಿ 3,750 ಕೋ. ರೂ.ಗಳ ಬಂಡವಾಳ ಹೂಡಿಕೆ ಮಾಡಲಿದ್ದು, 3,200 ಉದ್ಯೋಗ ಸೃಷ್ಟಿಯಾಗಲಿದೆ.
ಕೇನ್ಸ್ ಟೆಕ್ನಾಲಜಿಯ ಮೈಸೂರಿನಲ್ಲಿ ಇಎಸ್ಡಿಎಂ ಸೆಮಿಕಾನ್ ಪರಿಸರ ವ್ಯವಸ್ಥೆಯ ಪ್ರಮುಖ ನಿರ್ವಹಣ ಸಂಸ್ಥೆಯಾಗಿ ಕಾರ್ಯ ನಿರ್ವಹಿಸಲಿದ್ದು, ಈ ಒಡಂಬಡಿಕೆಯು ಮೈಸೂರು ನಗರವನ್ನು ಜಾಗತಿಕ ನಕ್ಷೆಯಲ್ಲಿ ಗುರುತಿಸಲು ಸಹಾಯ ಮಾಡುತ್ತದೆ. ಕೇನ್ಸ್ ಸೆಮಿಕಾನ್ ಪ್ರೈ. ಲಿ. ಸೆಮಿ ಕಂಡಕ್ಟರ್ ಅಸೆಂಬ್ಲಿ ಮತ್ತು ಟೆಸ್ಟಿಂಗ್ (ಒಎಸ್ಎಟಿ) ಸೌಲಭ್ಯದ ಸಂಸ್ಥೆಯಾಗಿದ್ದು, ಬಹು-ಲೇಯರ್ಡ್ ಬೋರ್ಡ್ಗಳನ್ನು ಉತ್ಪಾದಿಸಲು ಪ್ರಿಂಟೆಡ್ ಸರ್ಕ್ನೂಟ್ ಬೋರ್ಡ್ (ಪಿಸಿಬಿ) ತಯಾರಿ ಘಟಕವಾಗಿ ಕಾರ್ಯ ನಿರ್ವಹಿಸುತ್ತದೆ.
ಮಾಹಿತಿ ತಂತ್ರಜ್ಞಾನ ಹಾಗೂ ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ, ಸರಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಮಾಹಿತಿ ತಂತ್ರಜ್ಞಾನ ಇಲಾಖೆ ನಿರ್ದೇಶಕ ದರ್ಶನ್, ಕೇನ್ಸ್ ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಜೀವ್ ಗುಪ್ತಾ ಉಪಸ್ಥಿತರಿದ್ದರು.
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.