ಅಂಚೆ ಸೇವೆಗಳಿಗೆ ಸರ್ವರ್‌ ಸಮಸ್ಯೆ; ಗ್ರಾಹಕರ ಪರದಾಟ-ಕಚೇರಿಗೆ ನಿತ್ಯ ಅಲೆದಾಟ

ಸರ್ವರ್‌ ಸಮಸ್ಯೆ ಪರಿಣಾಮ ಹಿರಿಯ ನಾಗರಿಕರು ಖರ್ಚಿಗೆ ಹಣ ಸಿಗದೆ ಪರದಾಡುತ್ತಿದ್ದಾರೆ.

Team Udayavani, Mar 29, 2023, 5:08 PM IST

ಅಂಚೆ ಸೇವೆಗಳಿಗೆ ಸರ್ವರ್‌ ಸಮಸ್ಯೆ; ಗ್ರಾಹಕರ ಪರದಾಟ-ಕಚೇರಿಗೆ ನಿತ್ಯ ಅಲೆದಾಟ

ಹುಬ್ಬಳ್ಳಿ: ಅಂಚೆ ಕಚೇರಿಗಳಲ್ಲಿ ಕಳೆದೊಂದು ವಾರದಿಂದ ಸರ್ವರ್‌ ಸಮಸ್ಯೆ ಉಂಟಾಗಿದ್ದು, ಹಿರಿಯ ನಾಗರಿಕರು ಸೇರಿದಂತೆ ಗ್ರಾಹಕರು ನಿತ್ಯ ಅಲೆದಾಡುವಂತಾಗಿದೆ. ಸಾರ್ವಜನಿಕರಿಗೆ ಸೇವೆ ನೀಡುವಲ್ಲಿ ಅಂಚೆ ಸಿಬ್ಬಂದಿಯೂ ಅಸಹಾಯಕರಾಗಿದ್ದು, ಜನರನ್ನು ಸಮಾಧಾನಗೊಳಿಸುವಲ್ಲಿ ಹೈರಾಣಾಗುತ್ತಿದ್ದಾರೆ.

ಯಾವ್ಯಾವ ಸೇವೆ ವ್ಯತ್ಯಯ?: ಪಿಂಚಣಿ ಖಾತೆ, ಉಳಿತಾಯ ಖಾತೆ(ಎಸ್‌ಬಿ), ರಿಕರಿಂಗ್‌ ಡಿಪಾಜಿಟ್‌(ಆರ್‌ಡಿ), ತಿಂಗಳ ಬಡ್ಡಿ ಯೋಜನೆ, ಹಿರಿಯ ನಾಗರಿಕರಿಗೆ ಮೂರು ತಿಂಗಳಿಗೊಮ್ಮೆ ಜಮಾ ಆಗುವ ಬಡ್ಡಿ ಹಣ, ಕಿಸಾನ್‌ ವಿಕಾಸ ಪತ್ರ, ನ್ಯಾಷನಲ್‌ ಸೇವಿಂಗ್‌ ಸರ್ಟಿಫಿಕೇಟ್‌(ಎನ್‌ ಎಸ್‌ಸಿ), ಸುಕನ್ಯಾ ಸಮೃದ್ಧಿ, ಪಿಪಿಎಫ್‌ ಸೇರಿದಂತೆ ಅಂಚೆ ಕಚೇರಿಗಳಲ್ಲಿನ ಎಲ್ಲಾ ಸೇವೆಗಳು ಕಂಪ್ಯೂಟರ್‌ ಡಾಟಾವನ್ನೇ ಅವಲಂಬಿಸಿವೆ. ಪ್ರಸ್ತುತ ಸರ್ವರ್‌ ಸಮಸ್ಯೆಯಿಂದ ಎಲ್ಲ ಸೇವೆಗಳು ವಿಳಂಬವಾಗಿವೆ.

ಮ್ಯಾನುವಲ್‌ ಕೆಲಸ ಈಗಿಲ್ಲ: ಈಗ ಎಲ್ಲವೂ ಕಂಪ್ಯೂಟರ್‌ ಡಾಟಾ ಎಂಟ್ರಿ ಮೇಲೆ ಅವಲಂಬಿತ ಇರುವುದರಿಂದ ಅದರ ನಿರ್ವಹಣೆಗೆ ಸರ್ವರ್‌ ಬೇಕಾಗುತ್ತದೆ. ಕಂಪ್ಯೂಟರ್‌ ಡಾಟಾದಲ್ಲಿಯೇ ದಿನದ ವಹಿವಾಟು ನಡೆಯುತ್ತಿರುವುದರಿಂದ ಹಾಗೂ ಅದೆಲ್ಲದರ ಡಾಟಾ ಎಂಟ್ರಿ ಒಂದೇ ಕಡೆ ಕೇಂದ್ರೀಕೃತವಾಗಿರುವುದರಿಂದ ಅಲ್ಲಿಂದಲೇ ಎಲ್ಲಾ ವಹಿವಾಟು ನಡೆಯಬೇಕಾಗುತ್ತದೆ. ಮೊದಲಾಗಿದ್ದರೆ ಮ್ಯಾನುವಲ್‌ನಲ್ಲಿ ವಹಿವಾಟು ನಡೆಯುತ್ತಿತ್ತು. ಆಗ ಸಿಬ್ಬಂದಿ ವಹಿವಾಟನ್ನು ಕೈಯಿಂದ ಬರೆಯುವುದು ಮಾಡುತ್ತಿದ್ದರು. ಹೀಗಾಗಿ ಸರ್ವರ್‌ಗಾಗಿ ಕಾಯುವ ಅವಶ್ಯಕತೆ ಇರಲಿಲ್ಲ. ಈಗ ಎಲ್ಲ ವಹಿವಾಟು ಕಂಪ್ಯೂಟರ್‌ ಮೇಲೆ ಅವಲಂಬಿತ ಇರುವುದರಿಂದ ಸರ್ವರ್‌ ಬೇಕಾಗುತ್ತದೆ. ಇಲ್ಲವಾದರೆ ವಹಿವಾಟು ಕಷ್ಟವಾಗುತ್ತದೆ ಎನ್ನುತ್ತಾರೆ ಸಿಬ್ಬಂದಿ.

ಹಿರಿಯರ ಪಡಿಪಾಟಲು: ತಮ್ಮ ಸಂಧ್ಯಾಕಾಲದಲ್ಲಿ ಉಪ ಜೀವನ ನಡೆಸಲು ಅನುಕೂಲವಾಗಲೆಂದು ಸೇವಾ ದಿನಗಳಲ್ಲಿ ಉಳಿತಾಯ ಮಾಡಿ ಕೂಡಿಟ್ಟಿದ್ದ ಹಾಗೂ ಸೇವಾ ನಿವೃತ್ತಿ ನಂತರ ಬಂದಿದ್ದ ಗ್ರ್ಯಾಚುಟಿ ಸೇರಿದಂತೆ ಇತರೆ ಫಂಡ್‌ ಅನ್ನು ಅಂಚೆ ಕಚೇರಿಗಳಲ್ಲಿ ಠೇವಣಿಯಾಗಿಟ್ಟು ಅದರಿಂದ ಬರುವ ಬಡ್ಡಿ ಹಣವನ್ನೇ ನೆಚ್ಚಿಕೊಂಡು ಹಿರಿಯ ನಾಗರಿಕರು ಪ್ರತಿ ತಿಂಗಳು ತಮ್ಮ ಉಪ ಜೀವನ ಸಾಗಿಸುತ್ತಿದ್ದಾರೆ. ಆದರೆ ಸರ್ವರ್‌ ಸಮಸ್ಯೆ ಪರಿಣಾಮ ಹಿರಿಯ ನಾಗರಿಕರು ಖರ್ಚಿಗೆ ಹಣ ಸಿಗದೆ ಪರದಾಡುತ್ತಿದ್ದಾರೆ.

ಸಿಬ್ಬಂದಿಯೊಂದಿಗೆ ವಾಗ್ವಾದ: ಹಿರಿಯ ಅಧಿಕಾರಿಗಳಿಗೆ ಸರ್ವರ್‌ ಸಮಸ್ಯೆ ಬಗ್ಗೆ ಸಿಬ್ಬಂದಿಗಳಿಂದ ದೂರು ಬರುತ್ತಲೇ ಇದ್ದು, ಶೀಘ್ರ ಬಗೆಹರಿಯುತ್ತದೆ ಎಂದು ಸಮಜಾಯಿಷಿ ಕೊಡುತ್ತಿದ್ದಾರೆ. ಇತ್ತ ಗ್ರಾಹಕರು ನಮ್ಮ ಹಣ ನಮಗೆ ಕೊಡಲು ಎಷ್ಟು ಸತಾಯಿಸುತ್ತಿದ್ದೀರಿ. ಕುಂಟು ನೆಪ ಹೇಳುತ್ತಿದ್ದೀರಿ ಎಂದು ಸಿಬ್ಬಂದಿಯೊಂದಿಗೆ ವಾಗ್ವಾದ ಮಾಡುತ್ತಿರುವುದು ಸಾಮಾನ್ಯವಾಗಿದೆ.

ವಾರದೊಳಗೆ ಪರಿಹಾರ
ದೇಶದ ಎಲ್ಲಾ ಅಂಚೆ ಕಚೇರಿಗಳಲ್ಲಿ ಪಿನಾಕಲ್‌ ಸಾಫ್ಟ್‌ವೇರ್‌ ಬಳಸಲಾಗುತ್ತಿದೆ. ಕಳೆದೊಂದು ವಾರದಿಂದ ಪ್ಯಾನ್‌ ಇಂಡಿಯಾದಲ್ಲೆ ಪಿನಾಕಲ್‌ ಸರ್ವರ್‌ ಸಮಸ್ಯೆ ಕಾಡುತ್ತಿದೆ. ಒಂದು ಕೌಂಟರ್‌ನಲ್ಲಿ ವರ್ಕ್‌ ಆದರೆ ಮರುಕ್ಷಣವೇ ಸಮಸ್ಯೆಯಾಗುತ್ತಿದೆ. ಸರ್ವರ್‌ ತೊಂದರೆ ಕುರಿತು ಸಾಕಷ್ಟು ದೂರುಗಳು ಬರುತ್ತಿವೆ. ಇದು ತಾತ್ಕಾಲಿಕವಾಗಿದ್ದು, ವಾರದೊಳಗೆ ಈ ಸಮಸ್ಯೆ ಬಗೆಹರಿಯಲಿದೆ ಎನ್ನುತ್ತಾರೆ ಹೆಸರು ಹೇಳಲಿಚ್ಛಿಸದ ಅಂಚೆ ಇಲಾಖೆ ಅಧಿಕಾರಿ

ನಮ್ಮ ಸಂಧ್ಯಾ ಕಾಲದಲ್ಲಿ ಉಪಜೀವನ ನಡೆಸಲು ಅನುಕೂಲವಿದೆ ಎಂದುಕೊಂಡು ಅಂಚೆಕಚೇರಿಯಲ್ಲಿ ಠೇವಣಿ ಇಡಲಾಗಿದೆ. ಅದರಿಂದ ಬರುವ ತಿಂಗಳ ಬಡ್ಡಿ ಹಣದಲ್ಲೇ ಜೀವನ ಸಾಗಿಸುತ್ತಿದ್ದೇವೆ. ಆದರೆ ಕಳೆದೊಂದು ವಾರದಿಂದ ಸರ್ವರ್‌ ಸಮಸ್ಯೆ ಎಂದು ಸಿಬ್ಬಂದಿ ಹೇಳುತ್ತಿದ್ದಾರೆ. ಮೊದಲೇ ಕೈಯಲ್ಲಿ ಹಣ ಇಲ್ಲ. ಈಗ ಪದೇ ಪದೇ ಆಟೋ ರಿಕ್ಷಾ ಬಾಡಿಗೆ ಮಾಡಿಕೊಂಡು ಬರುತ್ತಿರುವುದರಿಂದ ಖರ್ಚಿಗಾಗಿ ಕೈಯಲ್ಲಿದ್ದ ಒಂದಿಷ್ಟು ಹಣ ಕಳೆದುಕೊಂಡು ಜೀವನ ನಡೆಸುವುದು ಕಷ್ಟವಾಗುತ್ತಿದೆ.
∙ದೇವೇಂದ್ರಪ್ಪ, ವಯೋವೃದ್ಧರು

ಟಾಪ್ ನ್ಯೂಸ್

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Fake Currency: 500 ರೂ. ನಕಲಿ ನೋಟುಗಳಲ್ಲಿ ಗಾಂಧಿ ಬದಲು ಅನುಪಮ್‌ ಖೇರ್‌ ಫೋಟೊ!

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Sirsi: ಕಸ್ತೂರಿ ರಂಗನ್ ವರದಿಯ ಸಮೀಕ್ಷೆಯೇ ಸಮರ್ಪಕವಾಗಿಲ್ಲ: ಶಾಸಕ ಭೀಮಣ್ಣ‌ ನಾಯ್ಕ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Gadag: ನೀರಿನಲ್ಲಿ ಕೊಚ್ಚಿಹೋದ ಯುವಕರು; ಓರ್ವನ ಶವ ಪತ್ತೆ, ಮತ್ತೋರ್ವನಿಗೆ ಶೋಧ

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Mudhol: ಸಭೆಗೆ ತಡವಾಗಿ ಬಂದ ಉಸ್ತುವಾರಿ ಸಚಿವರು… ಸಭೆ ಬಹಿಷ್ಕರಿಸಿದ ಬಿಜೆಪಿ ಸದಸ್ಯರು

Udupi: ಸರಕಾರಿ ವಸತಿ ಗ್ರಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ

Udupi: ಸರಕಾರಿ ವಸತಿ ಗೃಹಕ್ಕೆ ನುಗ್ಗಿದ ಕಳ್ಳರು… ಲಕ್ಷಾಂತರ ಮೌಲ್ಯದ ನಗನಗದು ದೋಚಿ ಪರಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

11-joshi

ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಕೊಡದ ಸಿದ್ದರಾಮಯ್ಯ ದಪ್ಪ ಚರ್ಮದವರು: ಜೋಶಿ ಟೀಕೆ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

Dharwad; ಸಿದ್ದರಾಮಯ್ಯ ಮುಡಾ ಪ್ರಕರಣವನ್ನು ಸಿಬಿಐಗೆ ವಹಿಸಬೇಕು: ಪ್ರಹ್ಲಾದ ಜೋಶಿ

ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Hubli: ರಾಡ್‌ ಬಿದ್ದು ಎಎಸ್‌ಐ ಸಾವು ಪ್ರಕರಣದಲ್ಲಿ ಮತ್ತೋರ್ವನ ಬಂಧನ

Yathanal

MUDA Case: ಸಿದ್ದರಾಮಯ್ಯ ಅಧಿಕಾರದಲ್ಲಿದ್ರೆ ತನಿಖೆ ಮೇಲೆ ಪ್ರಭಾವ ಖಚಿತ: ಶಾಸಕ ಯತ್ನಾಳ್‌

Let Siddaramaiah bow to the court order and resign: Pramod Muthalik

Hubli; ಕೋರ್ಟ್ ಆದೇಶಕ್ಕೆ ತಲೆಬಾಗಿ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಪ್ರಮೋದ ಮುತಾಲಿಕ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

9

Kerala Kannadigas: ಕೇರಳಿಗರಿಗೆ ಕನ್ನಡ ಕಲಿಸಲು ವಿಶೇಷ ತರಗತಿ

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು … ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Pakistanಕ್ಕೆ ದೊಡ್ಡ‌ ಮೊತ್ತದ ಆರ್ಥಿಕ ನೆರವು …ರಾಜನಾಥ್‌ ಸಿಂಗ್‌ ಭರ್ಜರಿ ಆಫರ್‌, ಆದರೆ…

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4 ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

Clown Festival: ಮಂಗಳೂರಿನಲ್ಲಿ ಅಕ್ಟೋಬರ್ 4ರಿಂದ ಅಂತರಾಷ್ಟ್ರೀಯ ವಿದೂಷಕ ಉತ್ಸವ

8

Arrested: ಜಲಮಂಡಳಿಯ ಸೆಂಟ್ರಿಂಗ್‌ ಸಾಮಗ್ರಿ ಕಳವು ಮಾಡುತ್ತಿದ್ದ ಇಬ್ಬರ ಬಂಧನ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Fraud: ಸರ್ಕಾರಿ ಕೆಲಸದ ಆಸೆ ತೋರಿಸಿ 28 ಲಕ್ಷ ವಂಚನೆ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.