BJP: ಇಂದಿನಿಂದ ಅ.2ರ ವರೆಗೆ ಸೇವಾ ಪಾಕ್ಷಿಕ


Team Udayavani, Sep 16, 2023, 11:02 PM IST

BJP FLAG 1

ಬೆಂಗಳೂರು: ದೇಶಾದ್ಯಂತ ಸೇವಾ ಪಾಕ್ಷಿಕ ಹಮ್ಮಿಕೊಂಡಿರುವ ಬಿಜೆಪಿಯು ರಾಜ್ಯದಲ್ಲೂ ಸೆ.17ರಿಂದ ಅ.2ರ ವರೆಗೆ ವಿವಿಧ ಸೇವಾ ಚಟುವಟಿಕೆಗಳನ್ನು ನಡೆಸಲಿದೆ.
ಸೆ.17ರಂದು ಪ್ರಧಾನಿ ನರೇಂದ್ರ ಮೋದಿ, ಸೆ.25ರಂದು ದೀನದಯಾಳ್‌ ಉಪಾಧ್ಯಾಯ ಹಾಗೂ ಅ.2ರಂದು ಮಹಾತ್ಮ ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಅಷ್ಟೂ ದಿನಗಳ ಕಾಲ ಸೇವಾ ಚಟುವಟಿಕೆಗಳು ನಡೆಯಲಿವೆ.

ಪ್ರಮುಖವಾಗಿ ರಕ್ತದಾನ ಶಿಬಿರಗಳು, ಆರೋಗ್ಯ ಶಿಬಿರಗಳು, ವಿಶಿಷ್ಟ ಚೇತನರಿಗೆ ಅವಶ್ಯ ಸಲಕರಣೆ ವಿತರಣೆ, ಆಸ್ಪತ್ರೆಗಳಲ್ಲಿರುವ ರೋಗಿಗಳನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸುವುದು, ಜತೆಗೆ ಹಣ್ಣು-ಹಂಪಲು ವಿತರಣೆ, ಪಿಎಂ ಸ್ವಾನಿಧಿ ಕಾರ್ಡ್‌ ವಿತರಣೆ, ಕೆರೆ, ಬಾವಿಗಳ ಹೂಳೆತ್ತುವುದು ಸಹಿತ ವಿವಿಧ ಚಟುವಟಿಕೆಗಳು ನಡೆಯಲಿವೆ.

ಸಾಧನಾ ಪ್ರದರ್ಶಿನಿ
ಕಳೆದ 9.5 ವರ್ಷಗಳಲ್ಲಿ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರ ಮಾಡಿರುವ ಸಾಧನೆಗಳನ್ನು ಜಿಲ್ಲಾ ಕೇಂದ್ರಗಳಲ್ಲಿ ಪ್ರದರ್ಶಿಸಲಾಗುತ್ತದೆ. ಪ್ರಮಾಣ ವಚನ ಸ್ವೀಕಾರದಿಂದ ಹಿಡಿದು ಇತ್ತೀಚಿನ ಜಿ-20 ಶೃಂಗದವರೆಗೆ ದೇಶದಲ್ಲಾಗಿರುವ ಜನಪರ ಹಾಗೂ ಅಭಿವೃದ್ಧಿಪರವಾದ ಕಾರ್ಯಕ್ರಮಗಳನ್ನು ಸಾಧನಾ ಪ್ರದರ್ಶಿನಿ ಮೂಲಕ ಜನರಿಗೆ ತಲುಪಿಸಲಾಗುತ್ತದೆ.

ಆಯುಷ್ಮಾನ್‌ ಭವ
ರವಿವಾರದಿಂದ ಸೆ.24ರ ವರೆಗೆ ಆಯುಷ್ಮಾನ್‌ ಭಾರತ್‌ ಕಾರ್ಡ್‌ ವಿತರಣೆ, ರಕ್ತದಾನ ಶಿಬಿರಗಳು, ಆರೋಗ್ಯ ಶಿಬಿರಗಳು ನಡೆಯಲಿವೆ.

ಬೂತ್‌ ಮಟ್ಟಕ್ಕೆ ಸೇವಾ ಪಾಕ್ಷಿಕ
ಸೆ.17ರಿಂದ 24ರ ವರೆಗೆ ಜಿಲ್ಲಾ ಕೇಂದ್ರಗಳವರೆಗೆ ನಡೆಯುವ ಸೇವಾ ಪಾಕ್ಷಿಕವನ್ನು ಸೆ.25ರ ಪಂಡಿತ್‌ ದೀನದಯಾಳ್‌ ಉಪಾಧ್ಯಾಯ ಅವರ ಜನ್ಮದಿನದ ಅಂಗವಾಗಿ ಬೂತ್‌ ಮಟ್ಟಕ್ಕೆ ಕೊಂಡೊಯ್ಯಲಾಗುತ್ತದೆ. ಸೆ.26ರಿಂದ ಅ.1ರ ವರೆಗೆ ಬೂತ್‌ ಮಟ್ಟದಿಂದ ಮನೆ-ಮನೆಗೆ ಸೇವಾ ಪಾಕ್ಷಿಕದ ಉದ್ದೇಶಗಳನ್ನು ಕೊಂಡೊಯ್ಯಲಾಗುವುದು. ಮಂಡಲ ಮಟ್ಟದಲ್ಲಿ ನನ್ನ ಮಣ್ಣು, ನನ್ನ ದೇಶ ಅಭಿಯಾನದ ಮೂಲಕ ಮಣ್ಣು ಸಂಗ್ರಹಿಸಿ, ದಿಲ್ಲಿಯಲ್ಲಿ ನಿರ್ಮಾಣಗೊಳ್ಳಲಿರುವ ಅಮೃತ ಉದ್ಯಾನವನಕ್ಕೆ ಕಳುಹಿಸಿಕೊಡಲಾಗುತ್ತದೆ.

ಕುರುಡುಮಲೆ ಗಣಪತಿಗೆ ಬಿಎಸ್‌ವೈ ಪೂಜೆ
ಮೋದಿ ಜನ್ಮದಿನದ ಹಿನ್ನೆಲೆಯಲ್ಲಿ ಸೆ.17ರ ರವಿವಾರ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರು ಬೆಳಗ್ಗೆ 10.30ಕ್ಕೆ ಕೋಲಾರದ ಮುಳುಬಾಗಿಲಿನಲ್ಲಿರುವ ಕುರುಡುಮಲೆ ಗಣಪತಿ ದೇವಸ್ಥಾನದಲ್ಲಿ ಮಹಾಪೂಜೆ ನಡೆಸಿ, ರಾಜ್ಯ ಸರಕಾರದ ವೈಫ‌ಲ್ಯದ ವಿರುದ್ಧ ರಾಜ್ಯ ಪ್ರವಾಸವನ್ನೂ ಕೈಗೊಳ್ಳಲಿದ್ದಾರೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಎನ್‌.ರವಿಕುಮಾರ್‌, ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ್‌ ಜೋಷಿ, ಮಾಜಿ ಮುಖ್ಯಮಂತ್ರಿಗಳಾದ ಡಿ.ವಿ. ಸದಾನಂದ ಗೌಡ, ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಸಿ.ಟಿ. ರವಿ ಮುಂತಾದ ಅನೇಕ ಮುಖಂಡರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

 

ಟಾಪ್ ನ್ಯೂಸ್

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

Electric shock: ಮೊಬೈಲ್‌ ಚಾರ್ಜ್‌ಗೆ ಹಾಕುವಾಗ ವಿದ್ಯುತ್‌ ಶಾಕ್‌; ವಿದ್ಯಾರ್ಥಿ ಬಲಿ!

rahul gandhi

LK Advani ಆರಂಭಿಸಿದ ಚಳುವಳಿಯನ್ನು ಅಯೋಧ್ಯೆಯಲ್ಲಿಯೇ ಸೋಲಿಸಿದ್ದೇವೆ..: ರಾಹುಲ್ ಗಾಂಧಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ

Potchefstroom ಪವರ್ ಲಿಫ್ಟಿಂಗ್ ಚಾಂಪಿಯನ್ ಶಿಪ್ ನಲ್ಲಿ ಚಿನ್ನ ಗೆದ್ದ ಬೋಳ ಅಕ್ಷತಾ ಪೂಜಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Police

Karnataka Police: ಡ್ರಗ್ಸ್‌, ಜೂಜು ಮಟ್ಟಹಾಕಿ: ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

Zeeka-Virus

Suspect Zika Virus: ಶಿವಮೊಗ್ಗದಲ್ಲಿ ವೃದ್ಧ ಸಾವು

HD-Kumaraswamy

MUDA Scam: ಹೆಲಿಕಾಪ್ಟರ್‌ನಲ್ಲಿ ಮುಡಾ ಕಡತ ರವಾನೆ: ಎಚ್‌ಡಿಕೆ

Ramalinga-reddy

Transport: ತತ್‌ಕ್ಷಣಕ್ಕೆ ಬಸ್‌ ಯಾನ ದರ ಹೆಚ್ಚಳವಿಲ್ಲ: ಸಚಿವ ರಾಮಲಿಂಗಾರೆಡ್ಡಿ

CN-Manjunath

Dengue ತುರ್ತುಸ್ಥಿತಿ: ಸಂಸದ ಡಾ.ಸಿ.ಎನ್‌. ಮಂಜುನಾಥ್‌ ಸಲಹೆ

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

Devadurga; ಬೆಳ್ಳಂಬೆಳಗ್ಗೆ ಮೂವರ ಮೇಲೆ ಚಿರತೆ ದಾಳಿ

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಮಕ್ಕಳೇ ದೇವರು ಎಂದ ಸ್ಕೂಲ್‌ ಮಾಸ್ಟರ್‌: ಒಂದು ಶಾಲೆ, ಒಬ್ಬರೇ ಶಿಕ್ಷಕ,  29 ವರ್ಷ ಸೇವೆ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

ಸಹನೆ ವಜ್ರದ ಕವಚ: ಅನುಮಾನ, ಅಪಮಾನ, ಸನ್ಮಾನ!

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

BBMP: 17.56 ಕೋಟಿ ಬಾಡಿಗೆ ಬಾಕಿ; ಬ್ಯಾಂಕ್‌ಗೆ ಪಾಲಿಕೆ ಬೀಗ

Bhadra Dam; the water leaking from the river sleeves gate stopped

Bhadra Dam; ಕೊನೆಗೂ ನಿಂತಿತು ರಿವರ್ ಸ್ಲೀವ್ಸ್ ಗೇಟ್ ನಿಂದ ಸೋರಿಕೆಯಾಗುತ್ತಿದ್ದ ನೀರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.