Session ಅಹೋರಾತ್ರಿ ಧರಣಿಗೆ ಅಧಿವೇಶನ ಬಲಿ;  ಸರಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕೆಂಡಾಮಂಡಲ

ಉಭಯ ಸದನಗಳಲ್ಲಿ ಕೋಲಾಹಲ; ಮಿತ್ರಪಕ್ಷ ಸಭಾತ್ಯಾಗ

Team Udayavani, Jul 26, 2024, 1:07 AM IST

Session ಅಹೋರಾತ್ರಿ ಧರಣಿಗೆ ಅಧಿವೇಶನ ಬಲಿ;  ಸರಕಾರದ ವಿರುದ್ಧ ಬಿಜೆಪಿ-ಜೆಡಿಎಸ್‌ ಕೆಂಡಾಮಂಡಲ

ಬೆಂಗಳೂರು: ಮುಡಾ ಹಗರಣದ ಚರ್ಚೆಗೆ ಬಿಗಿಪಟ್ಟು ಹಿಡಿದು ಬುಧವಾರ ಆರಂಭಿಸಿದ್ದ ಅಹೋರಾತ್ರಿ ಧರಣಿಯನ್ನು ವಿಪಕ್ಷ ಸದಸ್ಯರು ಗುರುವಾರ ವಿಧಾನಮಂಡಲದ ಉಭಯ ಸದನಗಳಲ್ಲೂ ಮುಂದುವರಿಸಿದ್ದರಿಂದ ಕೋಲಾಹಲ ಉಂಟಾಗಿ ಅಧಿವೇಶನವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ನಿಗದಿಗಿಂತ ಒಂದು ದಿನ ಮುಂಚಿತವಾಗಿ ಅಧಿವೇಶನಕ್ಕೆ ತೆರೆ ಬಿದ್ದಂತಾಯಿತು.

ಗ‌ದ್ದಲದ ನಡುವೆ ಉಭಯ ಸದನ
ಗಳಲ್ಲಿ ಹಲವು ಮಸೂದೆಗಳಿಗೆ ಅನುಮೋದನೆ ನೀಡಿ, ಒಂದು ದೇಶ ಒಂದು ಚುನಾವಣೆ, ಕ್ಷೇತ್ರ ಪುನರ್ವಿಂಗಡಣೆ, ನೀಟ್‌ ವಿರುದ್ಧ ನಿರ್ಣಯ ಕೈಗೊಳ್ಳಲಾಯಿತು. ಶುಕ್ರವಾರದವರೆಗೆ ನಡೆಯಬೇಕಿದ್ದ ಅಧಿವೇಶನವು ಗುರುವಾರಕ್ಕೇ ಮೊಟಕಾಯಿತು. ಜು. 15, ಸೋಮವಾರ ಆರಂಭವಾಗಿದ್ದ ಅಧಿವೇಶನದಲ್ಲಿ ಮೊದಲೆರಡು ದಿನ ಯಾವುದೇ ಗಲಾಟೆ ಗದ್ದಲ ಇಲ್ಲದೆ ಸಂತಾಪ ಸೂಚನೆ, ಪ್ರಶ್ನೋತ್ತರ ವೇಳೆ ಮತ್ತಿತರ ಕಲಾಪಗಳು ನಡೆದಿದ್ದವು.

ಅನಂತರ ವಾಲ್ಮೀಕಿ ನಿಗಮದ ಹಗರಣದ ವಿಷಯ ಪ್ರಸ್ತಾವಿಸಿದ ವಿಪಕ್ಷಗಳು ಸಿಬಿಐ ತನಿಖೆಗೆ ವಹಿಸಬೇಕೆಂದು ಪಟ್ಟು ಹಿಡಿದು ಸರಕಾರದ ವಿರುದ್ಧ ತೋಳು ತಟ್ಟಿ ನಿಂತವು. ಎಸ್‌ಐಟಿ ತನಿಖೆ ವರದಿ ಬರಲಿ, ಅನಂತರ ನೋಡೋಣ ಎಂಬ ಸಿಎಂ ಸಿದ್ದರಾಮಯ್ಯ ಅವರ ಉತ್ತರ ಬಹಿಷ್ಕರಿಸಿ ಸಭಾತ್ಯಾಗ ನಡೆಯಿತು.

ಇದಕ್ಕೆ ಪ್ರತಿಯಾಗಿ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ಸಮಾಜ ಕಲ್ಯಾಣಾಧಿಕಾರಿ ಕಲ್ಲೇಶ್‌ ಎಂಬಾತನನ್ನು ಜಾರಿ ನಿರ್ದೇಶನಾಲಯ (ಇ.ಡಿ.)ದ ಅಧಿಕಾರಿಗಳು ವಿಚಾರಣೆ ನೆಪದಲ್ಲಿ ಬೆದರಿಸಿ, ಸಿಎಂ ಹೆಸರು ಹೇಳುವಂತೆ ಒತ್ತಡ ಹಾಕಿದ್ದಾರೆ ಎಂಬ ಎಫ್ಐಆರ್‌ ಇರಿಸಿಕೊಂಡು ಆಡಳಿತ ಪಕ್ಷದವರು ಇ.ಡಿ. ಹಾಗೂ ಕೇಂದ್ರ ಸರಕಾರದ ವಿರುದ್ಧ ಮುಗಿಬಿದ್ದರು.

ನಿಲುವಳಿ ಸೂಚನೆ ತಿರಸ್ಕಾರ
ಎರಡು ದಿನಗಳಿಂದ ಮುಡಾ ವಿಷಯ ಪ್ರಸ್ತಾವಿಸಲು ಅವಕಾಶ ಕೋರುತ್ತಿದ್ದ ವಿಪಕ್ಷಗಳ ನಿಲುವಳಿ ಸೂಚನೆಯು ಉಭಯ ಸದನಗಳಲ್ಲೂ ತಿರಸ್ಕೃತಗೊಂಡಿತ್ತು. ಹೀಗಾಗಿ ಅಹೋರಾತ್ರಿ ಧರಣಿ ಆರಂಭಿಸಿದ ಬಿಜೆಪಿ-ಜೆಡಿಎಸ್‌ ಸದಸ್ಯರು ಬುಧವಾರ ರಾತ್ರಿ ಕಲಾಪ ಮುಂದೂಡಿಕೆಯಾದ ಅನಂತರವೂ ಸರಕಾರದ ವಿರುದ್ಧ ಪ್ರತಿಭಟನೆ, ವಿಧಾನಸೌಧ ಕಾರಿಡಾರ್‌ ಸುತ್ತಲೂ ಭಜನೆ, ಕುಣಿತ ನಡೆಸಿದ್ದರು. ಗುರುವಾರ ಬೆಳಗ್ಗೆ ಪುನರಾರಂಭಗೊಂಡ ಸದನದಲ್ಲಿ ತೀರ್ಪು ಪುನರ್‌ಪರಿಶೀಲಿಸುವಂತೆ ಬೇಡಿಕೆ ಇಟ್ಟರು.

ಬಗ್ಗದ ಸ್ಪೀಕರ್‌, ಸಭಾಪತಿ
ಯಾವುದಕ್ಕೂ ಬಗ್ಗದ ಸ್ಪೀಕರ್‌ ಹಾಗೂ ಸಭಾಪತಿ ಕಲಾಪ ನಡೆಸಲು ಮುಂದಾದರು. ಕಲಾಪದ ಆರಂಭ ದಿಂದಲೂ ಬಾವಿಯಲ್ಲೇ ಇದ್ದ ವಿಪಕ್ಷ ಸದಸ್ಯರು ಧರಣಿ ತೀವ್ರಗೊಳಿಸಿದರು. ಎರಡು-ಮೂರು ಬಾರಿ ಕಲಾಪ ಮುಂದೂಡಿ ಸಂಧಾನ ನಡೆಸಿದರೂ ಆಡಳಿತ-ವಿಪಕ್ಷಗಳ ಪಟ್ಟು ಮಾತ್ರ ಸಡಿಲಗೊಳ್ಳಲಿಲ್ಲ. ಕೊನೆಗೆ ವಿಪಕ್ಷಗಳ ಗದ್ದಲದ ನಡುವೆ ಮಸೂದೆಗಳಿಗೆ ಅಂಗೀಕಾರ ನೀಡಿ, ನಾಲ್ಕು ಪ್ರಮುಖ ನಿರ್ಣಯಗಳನ್ನು ಕೈಗೊಂಡು, ವಿಧಾನ ಪರಿಷತ್‌ನ ಅಂಗೀಕಾರದ ನಿರೀಕ್ಷೆಯಲ್ಲಿ ಭೋಜನ ವಿರಾಮಕ್ಕೆ ಮುಂದೂಡಲಾಗಿತ್ತು. ಭೋಜನ ವಿರಾಮದ ಬಳಿಕವೂ ವಿಪಕ್ಷಗಳ ಧರಣಿ ಮುಂದುವರಿದದ್ದರಿಂದ ಅನಿದಿಷ್ಟಾವಧಿಗೆ ಮುಂದೂಡಲಾಯಿತು.

ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್‌ ದೂರು
ಮುಡಾ ಹಗರಣ ವಿರೋಧಿಸಿ ರಾಜ್ಯ ಸರಕಾರದ ವಿರುದ್ಧ ವಿಧಾನಮಂಡಲದಲ್ಲಿ ಆಹೋರಾತ್ರಿ ಧರಣಿ ನಡೆಸಿದ ಬಿಜೆಪಿ-ಜೆಡಿಎಸ್‌ ನಾಯಕರು ಗುರುವಾರ ಅಧಿವೇಶನದ ಬಳಿಕ ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಿದರು. ಸ್ವತಃ ಹಗರಣದಲ್ಲಿ ಭಾಗಿಯಾಗಿರುವ ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಸೂಚಿಸಬೇಕು, ಪ್ರಕರಣ ಸಿಬಿಐ ತನಿಖೆಗೆ ಒಪ್ಪಿಸಬೇಕು ಎಂದು ಆಗ್ರಹಿಸಿದರು.

8 ದಿನ; 37 ತಾಸು
ನಡೆದ ವಿಧಾನಸಭೆ ಕಲಾಪ
16ನೇ ವಿಧಾನಸಭೆಯ 4ನೇ ಅಧಿವೇಶನವು 8 ದಿನ ನಡೆದಿದ್ದು, 37 ತಾಸು ಕಲಾಪ ನಡೆದಿದೆ. ಧನವಿನಿಯೋಗ ಮಸೂದೆ, ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ, ಖಾಸಗಿ ಆಸ್ಪತ್ರೆ, ವೈದ್ಯೋಪಚಾರ ಸಿಬಂದಿ ಮೇಲಿನ ದೌರ್ಜನ್ಯ ತಡೆ ಸೇರಿ 13 ಮಸೂದೆಗಳನ್ನು ಮಂಡಿಸಿ 12ಕ್ಕೆ ಅನುಮೋದನೆ ಪಡೆಯಲಾಯಿತು. ಅರಣ್ಯವಾಸಿ ಅನುಸೂಚಿತ ಬುಡಕಟ್ಟುಗಳ ಮತ್ತು ಇತರ ಪಾರಂಪರಿಕ ಅರಣ್ಯವಾಸಿಗಳ (ಅರಣ್ಯ ಹಕ್ಕುಗಳ ಮಾನ್ಯತೆ) ಅಧಿನಿಯಮಕ್ಕೆ ತಿದ್ದುಪಡಿ ತರಲಾಗಿದೆ.

 

ಟಾಪ್ ನ್ಯೂಸ್

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

anHassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Hassan ಬೇಲೂರು: ಕುರಿಮಂದೆಯಂತೆ ಕಾಡಾನೆ ಹಿಂಡು ಸಂಚಾರ!

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ

Nagamangala ತನಿಖೆ ಎನ್‌ಐಎಗೆ ವಹಿಸಲಿ: ಸಿ.ಟಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Chaluvaraj ಕುಟುಂಬಕ್ಕೆ ಧೈರ್ಯ ತುಂಬಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

BYV

Talk Fight: ಯಾರು ಏನೇ ಅಂದ್ರೂ ಬಿಜೆಪಿ ಕಾರ್ಯಕರ್ತರು ನನ್ನ ಒಪ್ಪಿದ್ದಾರೆ: ವಿಜಯೇಂದ್ರ

COngress-Meet

Munirathna:ಒಕ್ಕಲಿಗ ಹೆಣ್ಣುಮಕ್ಕಳ ಬಗ್ಗೆ ಹೇಳಿಕೆ; ಸಮುದಾಯದ ಸಚಿವ, ಶಾಸಕರಿಂದ ಸಿಎಂಗೆ ಮನವಿ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Kasaragodu

Kasaragodu: ಬೆಂಕಿ ಹೊತ್ತಿಕೊಂಡು ಕಾರು ಸಂಪೂರ್ಣ ನಾಶ

1-kota-shivanand

Yakshagana ಕಾಳಿಂಗ ನಾವಡ ಪ್ರಶಸ್ತಿಗೆ ಶಿವಾನಂದ ಆಯ್ಕೆ

Suside-Boy

Surathkal: ಚಿಕ್ಕಬಳ್ಳಾಪುರ ಮೂಲದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

BJP MLA Munirathna ಧ್ವನಿ ಖಚಿತವಾದರೆ ಕಾನೂನು ಕ್ರಮ: ಪರಂ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

PM Modi ಜನ್ಮದಿನ: ಬಿಜೆಪಿಯಿಂದ ಸೇವಾಪಾಕ್ಷಿಕ: ಹರತಾಳು ಹಾಲಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.