![Mulabagil](https://www.udayavani.com/wp-content/uploads/2024/12/Mulabagil-415x249.jpg)
“ನನ್ನ ಕ್ರಿಕೆಟ್ ಅಂತ್ಯಗೊಳ್ಳಲು ಅಫ್ರಿದಿ ಕಾರಣ’
Team Udayavani, May 19, 2020, 6:50 AM IST
![“ನನ್ನ ಕ್ರಿಕೆಟ್ ಅಂತ್ಯಗೊಳ್ಳಲು ಅಫ್ರಿದಿ ಕಾರಣ’](https://www.udayavani.com/wp-content/uploads/2020/05/Cricket-PAK-620x417.jpg)
ಕರಾಚಿ: ಪಾಕಿಸ್ಥಾನ ಕ್ರಿಕೆಟ್ ತಂಡದ ಮಾಜಿ ಆಟಗಾರ ದಾನಿಶ್ ಕನೇರಿಯ ಅವರು ಕಳೆದ ಕೆಲವು ತಿಂಗಳ ಹಿಂದೆ ತಾನು ಹಿಂದೂ ಎಂಬ ಕಾರಣಕ್ಕಾಗಿ ತಂಡದಲ್ಲಿ ಹಲವು ಮಂದಿ ನನ್ನನ್ನು ಹೀನಾಯವಾಗಿ ನೋಡಿದ್ದರು ಎಂದು ಆರೋಪ ಮಾಡಿ ಸುದ್ದಿಯಾಗಿದ್ದರು. ಇದೀಗ ತನ್ನ ಕ್ರಿಕೆಟ್ ವೃತ್ತಿಜೀವನ ಅಂತ್ಯಗೊಳ್ಳಲು ಕಾರಣಕರ್ತರಾದ ಆಟಗಾರನ ಹೆಸರನ್ನು ಬಹಿರಂಗಪಡಿಸುವ ಮೂಲಕ ಕನೇರಿಯ ಮತ್ತೆ ಸುದ್ದಿಯಾಗಿದ್ದಾರೆ.
ಕರಾಚಿಯಿಂದ ಮಾತನಾಡಿದ ಕನೇರಿಯ, ಕ್ರಿಕೆಟ್ ವೃತ್ತಿ ಜೀವನದಲ್ಲಿ ಶಾಹೀದ್ ಅಫ್ರಿದಿ ನನ್ನನ್ನು ಅತ್ಯಂತ ಹೀನಾಯವಾಗಿ ಕಂಡಿದ್ದರು. ಹಿಂದೂ ಆಟಗಾರನಾಗಿ ಪಾಕಿಸ್ಥಾನ ಕ್ರಿಕೆಟ್ ತಂಡದಲ್ಲಿ ಮಿಂಚುವುದು ಬಹಳ ಕಷ್ಟ ಎಂದು ಹೇಳಿದ್ದರು ಎಂದು ಕನೇರಿಯ ತಿಳಿಸಿದ್ದಾರೆ.
ದೇಶೀಯ ಮತ್ತು ಏಕದಿನ ಕ್ರಿಕೆಟ್ನಲ್ಲಿ ಅಫ್ರಿದಿ ಹಾಗೂ ನಾನು ಒಂದೇ ಸಮಯದಲ್ಲಿ ಆಡಿದ್ದೆವು. ಆದರೆ ಅಫ್ರಿದಿ ಯಾವಾಗಲೂ ನನಗೆ ವಿರುದ್ಧವಾಗಿದ್ದರು. ನಾನು ಹಿಂದೂ ಧರ್ಮದವನಾಗಿದ್ದರಿಂದ ಅವರು ನನ್ನ ವಿರುದ್ಧ ಯಾವಾಗಲೂ ಕಿಡಿಕಾರುತ್ತಿದ್ದರು ಎಂದು ಕನೇರಿಯ ಆರೋಪಿಸಿದ್ದಾರೆ.
ಅಫ್ರಿದಿಯಿಂದಾಗಿಯೇ ನಾನು ವೃತ್ತಿ ಜೀವನದಲ್ಲಿ ಕೇವಲ 18 ಏಕದಿನ ಪಂದ್ಯಗಳಾಡಲು ಮಾತ್ರ ಸಾಧ್ಯವಾಯಿತು. ಇಲ್ಲವಾದಲ್ಲಿ ಹೆಚ್ಚಿನ ಏಕದಿನ ಪಂದ್ಯಗಳಲ್ಲಿ ಪಾಕಿಸ್ಥಾನವನ್ನು ಪ್ರತಿನಿಧಿಸುತ್ತಿದ್ದೆ ಏಕದಿನದಲ್ಲಿ ಅಫ್ರಿದಿ ಬೇರೆ ಸ್ಪಿನ್ನರ್ಗಳಿಗೆ ನೀಡಿದ ಪ್ರೋತ್ಸಾಹ ಹಾಗೂ ಸಹಕಾರ ನನಗೆ ನೀಡಲಿಲ್ಲ. ಆದರೂ ಪಾಕಿಸ್ಥಾನ ಪರ 10 ವರ್ಷಗಳ ಕಾಲ ಕ್ರಿಕೆಟ್ ಆಡಿದ್ದೇನೆಂಬ ಸಂತೋಷ ಹಾಗೂ ಗೌರವ ನನಗಿದೆ ಎಂದು ಹೇಳಿದರು.
ಏನೇ ಆಗಲಿ ಇಂಝಮಾಮ್ ಉಲ್ ಹಕ್ ನನ್ನ ಬಗ್ಗೆ ಸಾರ್ವಜನಿಕವಾಗಿ ಸಕರಾತ್ಮಕವಾಗಿ ಮಾತನಾಡದಿದ್ದರೂ ಅವರು ನನಗೆ ನೀಡಿದ್ದ ಸಹಕಾರಕ್ಕೆ ನಾನು ಚಿರಋಣಿ ಎಂದು ಕನೇರಿಯ ಹೇಳಿದ್ದಾರೆ.
ಕನೇರಿಯ ಪಾಕಿಸ್ಥಾನ ಕ್ರಿಕೆಟ್ ತಂಡದ ಪರ 18 ಏಕದಿನ ಮತ್ತು 61 ಟೆಸ್ಟ್ ಪಂದ್ಯಗಳನ್ನಾಡಿ 261 ವಿಕೆಟ್ ಪಡೆದುಕೊಂಡಿದ್ದಾರೆ.
ಟಾಪ್ ನ್ಯೂಸ್
![Mulabagil](https://www.udayavani.com/wp-content/uploads/2024/12/Mulabagil-415x249.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![1-prathvi](https://www.udayavani.com/wp-content/uploads/2024/12/1-prathvi-150x104.jpg)
Shaw left out; ಓ ದೇವರೇ, ನಾನು ಇನ್ನೇನೆಲ್ಲ ನೋಡಬೇಕು..; ಪೃಥ್ವಿ ಶಾ ನೋವು
![Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್](https://www.udayavani.com/wp-content/uploads/2024/12/5-34-150x90.jpg)
Ravichandran Ashwin: ಅಂತಾರಾಷ್ಟ್ರೀಯ ಕ್ರಿಕೆಟ್ಗೆ ನಿವೃತ್ತಿ ಘೋಷಿಸಿದ ಆರ್.ಅಶ್ವಿನ್
![1-crick](https://www.udayavani.com/wp-content/uploads/2024/12/1-crick-150x84.jpg)
Brisbane Test; ವರುಣನ ಅಡ್ಡಿ: ಕೂತೂಹಲ ಮೂಡಿಸಿದ್ದ ಪಂದ್ಯ ಡ್ರಾದಲ್ಲಿ ಅಂತ್ಯ
![1-eqeeqwe](https://www.udayavani.com/wp-content/uploads/2024/12/1-eqeeqwe-150x89.jpg)
Brisbane Test; ರೋಚಕ.. ಭಾರತ ಗೆಲ್ಲಲು 54 ಓವರ್ಗಳಲ್ಲಿ 275 ರನ್ ಅಗತ್ಯ
![KLR](https://www.udayavani.com/wp-content/uploads/2024/12/KLR-150x90.jpg)
Australia vs India: ಬ್ರಿಸ್ಬೇನ್ ಟೆಸ್ಟ್ನಲ್ಲಿ ಫಾಲೋಆನ್ ತೂಗುಗತ್ತಿಯಿಂದ ಪಾರಾದ ಭಾರತ
MUST WATCH
ಹೊಸ ಸೇರ್ಪಡೆ
![Mulabagil](https://www.udayavani.com/wp-content/uploads/2024/12/Mulabagil-150x90.jpg)
Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!
![Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್](https://www.udayavani.com/wp-content/uploads/2024/12/gpar-150x93.jpg)
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
![Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ](https://www.udayavani.com/wp-content/uploads/2024/12/pet-dog-150x84.jpg)
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
![Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ](https://www.udayavani.com/wp-content/uploads/2024/12/renukaswamy-150x103.jpg)
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
![11](https://www.udayavani.com/wp-content/uploads/2024/12/11-21-150x80.jpg)
Ujire: ಕಥನ ಸೃಜನಶೀಲತೆಯಿಂದ ಪ್ರಾದೇಶಿಕ ಸಂವೇದನೆಯ ಅಭಿವ್ಯಕ್ತಿ; ಅನುಪಮಾ ಪ್ರಸಾದ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.