![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Sep 29, 2023, 11:34 PM IST
ಕಲ್ಲಿಕೋಟೆ: ಮುಂಬರುವ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೇರಳದ ಆರು ಲೋಕಸಭಾ ಕ್ಷೇತ್ರಗಳ ಮೇಲೆ ತನ್ನ ಗಮನ ಕೇಂದ್ರೀಕರಿಸಲು ಬಿಜೆಪಿ ನಿರ್ಧರಿಸಿದೆ. ಇದೇ ವೇಳೆ ರಾಷ್ಟ್ರ ಮಟ್ಟದ ನಾಯಕರನ್ನು ಕೇರಳದ ಸ್ಪರ್ಧಾ ಕಣಕ್ಕೆ ಇಳಿಸಲು ಭಾಜಪ ಚಿಂತಿಸಿದೆ.
ಕಾಂಗ್ರೆಸ್ ನಾಯಕ ಶಶಿ ತರೂರ್ ಅವರ ವಿರುದ್ಧ ತಿರುವನಂತಪುರ ಕ್ಷೇತ್ರದಿಂದ ಕೇಂದ್ರ ಸಚಿವರಾದ ನಿರ್ಮಲಾ ಸೀತಾರಾಮನ್ ಅಥವಾ ರಾಜೀವ್ ಚಂದ್ರಶೇಖರ್ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ. ಪಾಲಕ್ಕಾಡ್ ಕ್ಷೇತ್ರದಿಂದಲೂ ಇವರ ಹೆಸರುಗಳು ಕೇಳಿಬಂದಿದೆ. ಈಗಾಗಲೇ ಪಾಲಕ್ಕಾಡ್ ಕ್ಷೇತ್ರದಲ್ಲಿ ಸ್ಥಳೀಯ ನಾಯಕ ಸಿ.ಕೃಷ್ಣಕುಮಾರ್ ಅವರು ಸಂಘಟನೆಯಲ್ಲಿ ತೊಡಗಿದ್ದಾರೆ. ಈಗಿರುವಾಗ ಹೊರಗಿನ ಅಭ್ಯರ್ಥಿಯನ್ನು ಕಣಕ್ಕಿಳಿಸುವುದು ಎಷ್ಟು ಸೂಕ್ತ ಎಂದು ಪಕ್ಷದೊಳಗೆ ಪ್ರಶ್ನೆ ಉದ್ಭವಿಸಿದೆ.
ಇನ್ನೊಂದೆಡೆ, ತ್ರಿಶ್ಶೂರ್ ಕ್ಷೇತ್ರದಲ್ಲಿ ಸುರೇಶ್ ಗೋಪಿ ಅವರು ಬಿಜೆಪಿ ಅಭ್ಯರ್ಥಿಯಾಗಲಿದ್ದಾರೆ ಎಂದು ಈಗಾಗಲೇ ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುಂದರನ್ ಸ್ಪಷ್ಟಪಡಿಸಿದ್ದಾರೆ. ಅಟ್ಟಿಂಗಲ್ ಕ್ಷೇತ್ರದಿಂದ ಕೇಂದ್ರ ಸಚಿವ ಕೇಂದ್ರ ಸಚಿವ ವಿ.ಮುರಳೀಧರನ್, ಪಟ್ಟಣಂತಿಟ್ಟ ಕ್ಷೇತ್ರದಿಂದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅಥವಾ ಸಿನಿಮಾ ನಟ ಉನ್ನಿ ಮುಕುಂದನ್, ಕಾಸರಗೋಡು ಕ್ಷೇತ್ರದಿಂದ ಪಿ.ಕೆ.ಕೃಷ್ಣದಾಸ್ ಅಥವಾ ಕೆ.ಶ್ರೀಕಾಂತ್, ಎರ್ನಾಕುಲಂ ಕ್ಷೇತ್ರದಿಂದ ಅನೀಲ್ ಆಂಟೋನಿ ಅಥವಾ ವಿನೀತಾ ಹರಿಹರನ್ ಕಣ್ಣಕ್ಕಿಳಿಸಲು ಬಿಜೆಪಿ ಚಿಂತಿಸಿದೆ. ಇದೇ ವೇಳೆ ಪಕ್ಷ ಬಲವಾಗಿರುವ ಕ್ಷೇತ್ರದಲ್ಲಿ ಶೋಭಾ ಸುರೇಂದ್ರನ್ ಅವರು ಸ್ಪರ್ಧಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Mahakumbh sensation: ಕೇರಳದಲ್ಲಿ ಕುಂಭಮೇಳದ ಮೊನಾಲಿಸಾ ಹವಾ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.